2 ತಿಂಗಳಿಂದ ನೀರು ಸರಬರಾಜಿಲ್ಲ!

ಪೈಪ್‌ ಒಡೆದಿರುವ ನೆಪ „ ಕೈಕಟ್ಟಿಕುಳಿತ ಹುಳಿಯಾರು ಪಟ್ಟಣ ಪಂಚಾಯಿತಿ

Team Udayavani, Oct 31, 2019, 5:26 PM IST

31-October-24

●ಎಚ್‌.ಬಿ. ಕಿರಣ್‌ ಕುಮಾರ್‌
ಹುಳಿಯಾರು: ಪಟ್ಟಣ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಫಲವಾಗಿ ಕಳೆದ 2 ತಿಂಗಳಿನಿಂದ ಪಟ್ಟಣದಲ್ಲಿ ನೀರು ಸರಬರಾಜಾಗದೆ ನಿವಾಸಿಗಳು ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹುಳಿಯಾರು ಪಟ್ಟಣಕ್ಕೆ ಕಳೆದ 12 ವರ್ಷದಿಂದ ಸಮೀಪದ ಬೋರನಕಣಿವೆ ಜಲಾಶಯದಿಂದ ನೀರು ಸರಬರಾಜು ಮಾಡಲಾಗುತಿತ್ತು. ಸ್ವಂತ ಕೊಳವೆಬಾವಿ ಇಲ್ಲದ ನಿವಾಸಿಗಳು ಈ ನೀರು ನೆಚ್ಚಿ ಬದುಕು ಕಟ್ಟಿಕೊಂಡಿದ್ದರು. 15 ದಿನಕ್ಕೊಮ್ಮೆ ಜಲಾಶಯದ ನೀರು ಸರಬರಾಜು ಮಾಡಿದರೂ ಪಾತ್ರೆ, ಡ್ರಮ್‌ಗಳಲ್ಲಿ ನೀರು ಶೇಖರಿಸಿ ಕೊಳ್ಳುತ್ತಿದ್ದರು.

ಆದರೆ ಜಲಾಶಯದಿಂದ ನೀರು ಸರಬರಾಜು ಮಾಡುವ ಪೈಪ್‌ ಎಸ್‌ಎಲ್‌ ಆರ್‌ ಬಂಕ್‌ ಬಳಿ ಹೈವೇ ಕಾಮಗಾರಿ ಮಾಡುವಾಗ ಒಡೆದಿದೆ. ಪೈಪ್‌ ಒಡೆದು 2
ತಿಂಗಳಾದರೂ ದುರಸ್ತಿ ಮಾಡದೆ ನಿರ್ವಹಣೆ ಹೊಣೆ ಹೊತ್ತ ಗುತ್ತಿಗೆದಾರರ ಹೊಣೆಗಾರರ ನ್ನಾಗಿಸಿರುವ ಪಟ್ಟಣ ಪಂಚಾಯಿತಿ ಕೈ ಕಟ್ಟಿ ಕುಳಿತಿದೆ.

ಗುತ್ತಿಗೆದಾರರ ಪ್ರಶ್ನಿಸಿದರೆ “ನಮ್ಮ ಗುತ್ತಿಗೆ ಅವಧಿ ಮುಗಿದಿದ್ದು, ಪಪಂ ದುರಸ್ತಿ ಮಾಡಿಸಬೇಕಿದೆ’ ಎಂದು ಹೇಳುತ್ತಾರೆ. ಹೀಗೆ ಗಂಡ- ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎನ್ನುವಂತೆ ಇವರಿಬ್ಬರ ಜಗಳದಲ್ಲಿ ನಿವಾಸಿಗಳು 2 ತಿಂಗಳಿಂದ ನೀರಿಲ್ಲದೆ ಪರಿತಪಿಸುವಂತಾಗಿದೆ.

ಆಯುಧ ಪೂಜೆ ಹಬ್ಬಕ್ಕಾದರೂ ನೀರು ಬಿಡಿ ಎಂದು ನಿವಾಸಿಗಳು ಕೇಳಿದರೂ ಪಪಂ ನೀರು ಬಿಡಲಿಲ್ಲ. ದೀಪಾವಳಿಗೆ ನೀರು ಬಿಡಿ ಎಂದು ಗೋಗರೆದರೂ ಪಪಂ ಅಧಿಕಾರಿಗಳು ಕೇಳಿಸಿಕೊಳ್ಳಲಿಲ್ಲ. ಪರಿಣಾಮ ಬಿಂದಿಗೆಗೆ 2 ರೂ. ನಂತೆ ನೀರು ಕೊಂಡು ಜೀವನ ನಡೆಸುವ ಅನಿವಾರ್ಯ ಇಲ್ಲಿನ ನಿವಾಸಿಗಳಿಗೆ ಬಂದಿದೆ. ಮಹಿಳೆಯರಂತೂ ದಿನ ಬೆಳಗಾದರೆ ಕೈ ಪಂಪು, ಸಿಸ್ಟನ್‌ ಬಳಿ ಕ್ಯೂ ನಿಂತು ಜಗಳವಾಡಿ ನೀರು ಹಿಡಿಯುತ್ತಿದ್ದಾರೆ. ಪಟ್ಟಣ ಪಂಚಾಯಿತಿಯಿಂದ ನೀರಿನ ಕಂದಾಯವಾಗಿ ತಿಂಗಳಿಗೆ ಮನೆಯೊಂದಕ್ಕೆ 25 ರೂ. ಸಂಗ್ರಹ ಮಾಡುತ್ತಿದ್ದಾರೆ. ಆದರೆ ಸಮರ್ಪಕವಾಗಿ ನೀರು ಸರಬರಾಜು ಮಾಡಿದೇ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಾರೆ.

ಟ್ಯಾಂಕರ್‌ ಮೂಲಕವೂ ನೀರು ಕೊಡುತಿಲ್ಲ. ಕುಡಿಯುವ ನೀರೂ ಕೊಡಲು ವಿಫಲವಾಗಿರುವ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಂದ ಪಟ್ಟಣ ಅಭಿವೃದ್ಧಿ ನಿರೀಕ್ಷಿಸಬಹುದೇ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಇನ್ನಾದರೂ ಮೇಲಧಿಕಾರಿಗಳು ಇತ್ತ ಗಮನ ಹರಿಸಿ ಒಡೆದಿರುವ ಪೈಪ್‌ ದುರಸ್ತಿ ಮಾಡಿಸಿ ಸಮರ್ಪಕವಾಗಿ ನೀರು ಸರಬರಾಜು ಮಾಡಿಸುವಂತೆ ನಿವಾಸಿಗಳು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.