ನಾಡಿದ್ದು ಅದ್ಧೂರಿ ಬಸವ ಜಯಂತಿ

ಥೇರ ಮೈದಾನದಿಂದ ಮೆರವಣಿಗೆ •ಸಮಾಜ ಸೇವಕರ ಗುರುತಿಸಿ ಕಾಯಕಶ್ರೀ ಪ್ರಶಸ್ತಿ ನೀಡಿ

Team Udayavani, May 5, 2019, 2:36 PM IST

5-MAY-27

ಹುಮನಾಬಾದ: ಆರ್ಯಸಮಾಜ ಮಂದಿರದಲ್ಲಿ ನಡೆದ ಬಸವ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಡಾ| ಸಿದ್ದಲಿಂಗಪ್ಪ ಪಾಟೀಲ ಮಾತನಾಡಿದರು.

ಹುಮನಾಬಾದ: ಸಕಲ ಶಿವಶರಣರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಮೇ 7ರಂದು 886ನೇ ಬಸವ ಜಯಂತಿ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ಸಂಘದ ಅಧ್ಯಕ್ಷ ಡಾ| ಸಿದ್ದಲಿಂಗಪ್ಪ ಪಾಟೀಲ ಹೇಳಿದರು.

ಪಟ್ಟಣದ ಆರ್ಯ ಸಮಾಜ ಮಂದಿರದಲ್ಲಿ ಶುಕ್ರವಾರ ನಡೆದ ಬಸವಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಿಸಿಲಿನ ತಾಪ ಹೆಚ್ಚಿಗೆ ಇರುವ ಕಾರಣ ಅಂದು ಸಂಜೆ 6:00ಕ್ಕೆ ಥೇರ ಮೈದಾನದಿಂದ ಡಾ| ಅಂಬೇಡ್ಕರ್‌ ವೃತ್ತ, ಸರ್ದಾರ್‌ ವಲ್ಲಭಭಾಯಿ ಪಟೇಲ್, ಬಾಲಾಜಿ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಭವ್ಯ ಮೆರವಣಿಗೆ ನಡೆಸಲಾಗುವುದು. ಇಟಗಿ ಆಕರ್ಷಕ ಸಾರೋಟದಲ್ಲಿ ಬಸವೇಶ್ವರರ ಮೂರ್ತಿ ಮೆರವಣಿಗೆ ನಡೆಸುವುದು. ಕುದರೆ ಮೇಲೆ ಬಸವೇಶ್ವರ ಪಾತ್ರಧಾರಿ ಜತೆಗೆ ಅಕ್ಕಮಹಾದೇವಿ ಸೇರಿದಂತೆ ಇತರೆ ಶಿವಶರಣರ ಪಾತ್ರಧಾರಿಗಳನ್ನು ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ನಡೆಸುವುದು. ನೀಲಾಂಬಿಕಾ ಮಹಿಳಾ ಮಂಡಳ ಮತ್ತಿತರ ಕಲಾತಂಡಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಾ| ಎಸ್‌.ಆರ್‌. ಮಠಪತಿ ಶಹಾಪುರದ ವಿಶ್ವರಾಧ್ಯ ಸಂತ್ಯಂಪೇಟೆ ಅವರ ವಿಶೇಷ ಉಪನ್ಯಾಸ, ಬೀದರ ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ, ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಭೀಮರಾವ ಪಾಟೀಲ ಮತ್ತಿತರ ಗಣ್ಯರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲಾಗುವುದು ಎಂದು ಹೇಳಿದರು.

ಯುವ ಬ್ರಿಗೇಡ್‌ ತಾಲೂಕು ಸಂಚಾಲಕ ಲಕ್ಷ್ಮಿಕಾಂತ ಹಿಂದೊಡ್ಡಿ ಮಾತನಾಡಿ, ಬಸವಾದಿ ಶರಣರು ಎಲ್ಲ ಸಮುದಾಯಗಳನ್ನು ಒಪ್ಪಿ ಅಪ್ಪಿಕೊಂಡವರು. ಆದ್ದರಿಂದ ಹರಳಯ್ಯ, ಡೋಹರ, ಮಡಿವಾಳ, ಕಂಬಾರ, ಕುಂಬಾರ, ಹೂಗಾರ, ಮಾದಾರ, ಆರ್ಯವೈಶ್ಯ ಸಮಾಜ, ಬ್ರಾಹ್ಮಣ ಸಮಾಜ ಸೇರಿದಂತೆ ಸಕಲ ಕುಲಜರಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ವಿಶೇಷ ಆಹ್ವಾನ ನೀಡಬೇಕು ಎಂದು ಹೇಳಿದರು.

ಶಾಂತವೀರ ಯಲಾಲ ಮಾತನಾಡಿ, ಒಬ್ಬ ಪುರುಷ ಹಾಗೂ ಮಹಿಳಾ ಸಮಾಜ ಸೇವಕರನ್ನು ಗುರುತಿಸಿ ಕಾಯಕಶ್ರೀ ಪ್ರಶಸ್ತಿ ನೀಡಿ ಗೌರವಿಸುವಂತೆ ಸಲಹೆ ನೀಡಿದರು.

ಬಸವಸೇವಾ ಪ್ರತಿಷ್ಠಾನ ಅಧ್ಯಕ್ಷ ಚನ್ನಬಸಪ್ಪ ವಡ್ಡನಕೇರಿ, ಕಾರ್ಯದರ್ಶಿ ಮಲ್ಲಿಕಾರ್ಜುನ ಸಂಗಮ್ಮಕರ್‌, ರವಿಕುಮಾರ ಮಾಡಗಿ, ಮಹೇಶ ಅಗಡಿ, ಮಲ್ಲಿಕಾರ್ಜುನ ಮಾಶೆ‌ಟ್ಟಿ, ಶ್ರೀನಿವಾಸ ದೇವಣಿ, ಸುಭಾಷ ಭಗೋಜಿ, ಶಿವಶಂಕರ ತರನಳ್ಳಿ, ವೀರಣ್ಣ ಕಲಬುರಗಿ, ವೀರೇಶ ಪರಮಶೆಟ್ಟಿ, ವೀರೇಶಕುಮಾರ ಭಾವಿ, ಸಂತೋಷ ನಾವದಗಿ, ಶರದಕುಮಾರ ನಾರಾಯಣಪೇಟಕರ್‌, ರಾಜು ಲದ್ದಿ, ಮಾಣಿಕಪ್ಪ ಸಿದ್ದೇಶ್ವರ, ಬಸವರಾಜ ರುದ್ರವಾಡಿ, ಜಗನ್ನಾಥ ಭಾವಿ, ಶಂಕರ ಕೋರಿ, ಮಲ್ಲಪ್ಪ ತುಪ್ಪದ, ಉಮೆಶ ಜಂಬಗಿ, ಸುನೀಲ ಪತ್ರಿ, ಶ್ರೀಕಾಂತ ತಾಂಡೂರ, ಗುರುಲಿಂಗಪ್ಪ ಭಾವಿ ಇದ್ದರು

ಟಾಪ್ ನ್ಯೂಸ್

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.