ಮತದಾರರ ಋಣ ತೀರಿಸಲು ಯತ್ನಿಸುವೆ

•ಕಾರ್ಯಕರ್ತರ ಅವಿರತ ಶ್ರಮದಿಂದ ಗೆಲುವು •ಬಿಜೆಪಿ ಸರ್ಕಾರದಿಂದ 5 ವರ್ಷದಲ್ಲಿ ಅಸಾಮಾನ್ಯ ಸಾಧನೆ

Team Udayavani, Jul 1, 2019, 10:19 AM IST

1-July-6

ಹುಮನಾಬಾದ: ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆದ ಸಮಾರಂಭದಲ್ಲಿ ತಾಲೂಕು ಬಿಜೆಪಿ ವತಿಯಿಂದ ಸಂಸದ ಭಗವಂತ ಖೂಬಾ ಅವರನ್ನು ಸನ್ಮಾನಿಸಲಾಯಿತು.

ಹುಮನಾಬಾದ: ಎರಡನೇ ಬಾರಿಗೆ ಪ್ರಚಂಡ ಬಹುಮತದಿಂದ ಆಯ್ಕೆ ಮಾಡಿದ ಕ್ಷೇತ್ರದ ಮಹಾಜನರ ಋಣ ತೀರಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಸಂಸದ ಭಗವಂತ ಖೂಬಾ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ರವಿವಾರ ತಾಲೂಕು ಬಿಜೆಪಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿ ನೇತೃದ ಭ್ರಷ್ಟಾಚಾರಮುಕ್ತ ಆಡಳಿತ ಮೆಚ್ಚಿಕೊಂಡು ಬೀದರ್‌ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಮಸ್ತ ಕಾರ್ಯಕರ್ತರು ಅವಿರತ ಶ್ರಮಿಸಿದ್ದರ ಪರಿಣಾಮ ಆಯ್ಕೆಯಾಗಲು ಸಾಧ್ಯವಾಯಿತು. ಆರೂವರೆ ದಶಕದ ಕಾಂಗ್ರೆಸ್‌ ಅಧಿಕಾರ ಅವಧಿಯಲ್ಲಿ ಕೈಗೊಳ್ಳಲು ಸಾಧ್ಯವಾಗದ ಅಭಿವೃದ್ಧಿ ಕಾರ್ಯವನ್ನು ನರೆಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇವಲ 5 ವರ್ಷಗಳಲ್ಲಿ ಮಾಡಿ ಅಸಾಮಾನ್ಯ ಸಾಧನೆ ಮಾಡಿದೆ ಎಂದು ಹೇಳಿದರು.

ವಿನೂತನ ಯೋಜನೆಗಳಿಂದ 6.5 ಲಕ್ಷ ಬಡ ಜನತೆ ಸೌಲಭ್ಯದ ಪ್ರಯೋಜನ ಪಡೆದಿದ್ದಾರೆ ಎಂದ ಅವರು, ತಮ್ಮ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ|ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಜಿಲ್ಲೆಯಲ್ಲಿ ಮೈತ್ರಿ ಸರ್ಕಾರದ ಮೂವರು ಸಚಿವರು, ಒಬ್ಬ ಅರಣ್ಯ ನಿಗಮ ಮಂಡಳಿ ಅಧ್ಯಕ್ಷರಿದ್ದರೂ ಲೋಕಸಭೆ ಚುನಾವಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಿನಾಯ ಸೋಲು ಅನುಭವಿಸಲು ಮೈತ್ರಿ ಸರ್ಕಾರದ ದುರಾಡಳಿತ ಕಾರಣ ಎಂದರು. ಪರಸ್ಪರ ಕಚ್ಚಾಟದಲ್ಲಿ ತೊಡಗಿರುವುದರಿಂದ ಮೈತ್ರಿ ಸರ್ಕಾರ ಇನ್ನೆರಡು ತಿಂಗಳಲ್ಲಿ ಪತನಗೊಂಡು ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಭವಿಷ್ಯ ನುಡಿದರು.

ಪಕ್ಷದ ಹಿರಿಯ ಮುಖಂಡ ಸುಭಾಷ ಕಲ್ಲೂರ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣರಾದ ಕಾರ್ಯಕರ್ತರನ್ನು ಸಂಸದರು ಯಾವುದೇ ಕಾರಣಕ್ಕೂ ಮರೆಯದೇ ಸೂಕ್ತ ಸ್ಥಾನಮಾನ ನೀಡಿ, ಗೌರವಿಸಬೇಕು. ಪಕ್ಷ ದ್ರೋಹಿಗಳನ್ನು ದೂರ ಇಡಬೇಕು ಎಂದು ಸಂಸದ ಭಗವಂತ ಖೂಬಾ ಅವರಿಗೆ ಸಲಹೆ ನೀಡಿದರು. ಖೂಬಾ ತಾಳ್ಮೆ ಶಕ್ತಿ ಕಳೆದ ಅವಧಿಗಿಂತ ಈ ಬಾರಿ ಹೆಚ್ಚಿದ್ದು ಆರೋಗ್ಯಪೂರ್ಣ ಬೆಳವಣಿಗೆ ಎಂದು ಶ್ಲಾಘಿಸಿದರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮನಾಥ ಪಾಟೀಲ ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷರನ್ನು ಸೋಲಿಸುವಲ್ಲಿ ಯಶಸ್ವಿಯಾದ ನಮ್ಮ ಕಾರ್ಯಕರ್ತರ ಕಾರ್ಯ ಪ್ರಶಂಸನಿಯ. ಜಿಲ್ಲೆಗೆ ಹೊಸದಾಗಿ ರೈಲ್ವೆ ಯೋಜನೆ ಅನುಷ್ಠಾನಗೊಳಿಸಿದ್ದು ಖೂಬಾ ಅವರ ಗೆಲುವಿಗೆ ಕಾರಣ ಎಂದರು.ನಿರುದ್ಯೋಗ ಸಮಸ್ಯೆ ಬಗೆಹರಿಸುವುದಕ್ಕಾಗಿ ಸಂಸದ ಖೂಬಾ ಅವರು ಜಿಲ್ಲೆಗೆ ಹೊಸ ಯೋಜನೆಯನ್ನು ಶೀಘ್ರದಲ್ಲೇ ಕಾರ್ಯರೂಪಕ್ಕೆ ತರಲಿದ್ದಾರೆ ಎಂದರು.

ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ಶಿವಾನಂದ ಮಂಠಾಳ್ಕರ್‌ ಮಾತನಾಡಿ, ರಾಜ್ಯ ಸರ್ಕಾರದ ಬೇಜವಾಬ್ದಾರಿ ಕಾರಣ ಕೇಂದ್ರದ ಅದೆಷ್ಟೊ ಯೋಜನೆಗಳು ಈಗಲೂ ರಾಜ್ಯದ ಜನತೆಗೆ ತಲುಪುತ್ತಿಲ್ಲ. ಈ ನಿಟ್ಟಿನಲ್ಲಿ ಈ ಕ್ಷೇತ್ರದಲ್ಲೂ ಬಿಜೆಪಿ ಶಾಸಕರಿದ್ದರೆ ಅಭಿವೃದ್ಧಿ ಕಾರ್ಯ ತ್ವರಿತ ಗತಿಯಲ್ಲಿ ಸಾಗುತ್ತವೆ ಎಂದರು.

ರಾಜ್ಯ ಮುಖಂಡ ಪದ್ಮಾಕರ ಪಾಟೀಲ ಮಾತನಾಡಿದರು. ಪಕ್ಷದ ತಾಲೂಕು ಘಟಕದ ಅಧ್ಯಕ್ಷ ವಿಶ್ವನಾಥ ಪಾಟೀಲ ಮಾಡ್ಗುಳ್‌ ಅರ್ಧಯಕ್ಷತೆ ವಹಿಸಿದ್ದರು. ಪಕ್ಷದ ರಾಜ್ಯ ಕಾರ್ಯಕಾರಿಣಿ ಬಸವರಾಜ ಆರ್ಯ, ವಿನಾಯಕ ಮಂಡಾ, ಬ್ಯಾಂಕ್‌ರೆಡ್ಡಿ, ಭೀಮಣ್ಣ ಕೊಳ್ಳೆ, ಮಲ್ಲಿಕಾರ್ಜುನ ಪ್ರಭಾ, ವಿಜಯಕುಮಾರ ದುರ್ಗದ, ರಮೇಶ ಕಲ್ಲೂರ, ಪ್ರಕಾಶ ತಾಳಮಡಗಿ, ಸೂರ್ಯಕಾಂತ ಮಠಪತಿ, ಗಜೇಂದ್ರ ಕನಕಟಕರ್‌, ಎಂ.ಡಿ.ಇಲಿಯಾಸ್‌, ಜಹಿರೋದದೀನ್‌, ಸತ್ತಾರಸಾಬ್‌, ರಮೇಶ ಹೋಗ್ತಾಪುರೆ ಇದ್ದರು. ಪಕ್ಷದ ತಾಲೂಖು ಪ್ರಧಾನ ಕಾರ್ಯದರ್ಶಿ ಪ್ರಭಾಕರ ನಾಗರಾಳೆ ನಿರೂಪಿಸಿದರು.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.