ಅವೈಜ್ಞಾನಿಕ ಪಾದಚಾರಿ ರಸ್ತೆಗೆ ವಿರೋಧ

ಸರ್ಕಾರದ ಲಕ್ಷಾಂತರ ಹಣ ಅನಗತ್ಯ ವ್ಯಯಕಾಮಗಾರಿ ಆರಂಭಿಸಿ ಪರವಾನಗಿಗೆ ಅರ್ಜಿ!

Team Udayavani, Apr 12, 2019, 10:56 AM IST

12-April-5

ಹುಮನಾಬಾದ: ಡಾ| ಅಂಬೇಡ್ಕರ್‌ ವೃತ್ತದಿಂದ ಜೇರಪೇಟೆ ಕ್ರಾಸ್‌ ವರೆಗೆ ಕೈಗೊಳ್ಳಲಾಗುತ್ತಿರುವ ಫುಟಪಾತ್‌ ಕಾಮಗಾರಿ.

ಹುಮನಾಬಾದ: ಪಟ್ಟಣದ ಡಾ| ಅಂಬೇಡ್ಕರ್‌ ವೃತ್ತದಿಂದ ಜೇರಪೇಟೆಗೆ ಸಂಪರ್ಕ ಕಲ್ಪಿಸುವ ಮುಖ್ಯ ಮಾರ್ಗದಲ್ಲಿ ಕೈಗೊಳ್ಳುತ್ತಿರುವ ಪಾದಚಾರಿ ರಸ್ತೆ
ನಿರ್ಮಾಣ ಕಾಮಗಾರಿಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಪಾದಚಾರಿಗಳಿಗೆ ಯವುದೇ ತೊಂದರೆ ಆಗದಿರಲಿ ಎನ್ನುವ ಉದ್ದೇಶದಿಂದ ರಸ್ತೆ ಅಂತ್ಯಕ್ಕೆ ಚರಂಡಿಗಳಿಗೆ ಹೊಂದಿಕೊಂಡು ಪಾದಚಾರಿ ರಸ್ತೆ ನಿರ್ಮಿಸುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ ರಾಜ್ಯದ ಬೇರೆಲ್ಲೂ ಈವರೆಗೆ ಕೈಗೊಳ್ಳದ ರೀತಿ, ನೋಡಿರದ ರೀತಿ, ಅತ್ತ ಸಂಪೂರ್ಣ ರಸ್ತೆ
ಅಂತ್ಯದ ಚರಂಡಿಗೂ ಹೊಂದಿಕೊಂಡಿರದೇ ಇತ್ತ ಸಂಪೂರ್ಣ ರಸ್ತೆ ವಿಭಜಕಕ್ಕೂ ಹೊಂದಿಕೊಳ್ಳದೇ ಚರಂಡಿಯಿಂದ 15ಅಡಿ ಅಂತರದಲ್ಲಿ
ನಿರ್ಮಿಸುತ್ತಿರುವ ಯಾವುದೇ ಪ್ರಯೋಜನಕ್ಕೆ ಬಾರದೇ ಇರುವ ಈ ಫುಟ್‌ಪಾತ್‌ ನಿರ್ಮಾಣದಿಂದ ಸರ್ಕಾರದ ಲಕ್ಷಾಂತರ ಹಣ ಅನಗತ್ಯವಾಗಿ ವ್ಯಯಿಸಲಾಗುತ್ತಿದೆ ಎಂದು ಹೆಸರು ಹೇಳಲಿಚ್ಛಿಸದ ವ್ಯಾಪಾರಿಗಳು ಸಾರ್ವಜನಿಕರು ಗಂಭೀರ ಚರ್ಚೆ ನಡೆಸುತ್ತಿದ್ದಾರೆ.

ಎಚ್‌ಕೆಆಡಿಬಿ ಯೋಜನೆ ಅಡಿ 10 ಲಕ್ಷ ರೂ. ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ ಫುಟ್‌ಪಾತ್‌ಗೆ ಬಳಸುವ ಸಿಮೆಂಟ್‌ ಕಲ್ಲು ಬಳಸಿ
ಕಾಮಗಾರಿ ಕೈಗೊಳ್ಳುತ್ತಿದೆ. ಈ ಫುಟ್‌ಪಾತ್‌ ಅತ್ತ ಸಂಪೂರ್ಣ ರಸ್ತೆ ವಿಭಜಕಕ್ಕೂ ಇತ್ತಕಡೆ ಚರಂಡಿಗೂ ಹೊಂದಿಕೊಳ್ಳದೇ ಇರುವಂತಹ ಸಾರ್ವಜನಿಕರಿಗೆ
ಉಪಯೋಗವಿಲ್ಲದ ಕಾಮಗಾರಿ ಕೈಗೊಳ್ಳುವ ಬದಲು ಡಾಂಬರೀಕರಣ ಮಾಡಬಹುದಾಗಿತ್ತಲ್ಲ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಈ ರಸ್ತೆ ಕೆಳಗೆ ಹುಮನಾಬಾದ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಪುರಸಭೆಯ ಮುಖ್ಯ ಪೈಪ್‌ಲೈನ್‌ ಇದೆ. ರಸ್ತೆ ನಿರ್ಮಾಣ ವೇಳೆ ಸ್ವಲ್ಪ ಹೆಚ್ಚು ಕಡಿಮೆಯಾದರೂ ಪೈಪ್‌ ಒಡೆದು ಸಾರ್ವಜನಿಕರಿಗೆ ತೊಂದರೆ ಆಗುವುದು ಖಚಿತ. ಕಾಮಗಾರಿ ಆರಂಭಿಸಿದ ನಂತರ ಪರವಾನಗಿ ಸಂಬಂಧ ಪುರಸಭೆಗೆ ಅರ್ಜಿ ಸಲ್ಲಿಸಲಾಗಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ.

ಸಾರ್ವಜನಿಕರ ತೆರಿಗೆಯಿಂದ ಬಿಡುಗಡೆ ಆಗುವ ಸರ್ಕಾರ ಅನುದಾನ ಉದ್ದೇಶಿತ ಕೆಲಸಕ್ಕೆ ಬಳಕೆಯಾಗಬೇಕು. ಲಕ್ಷಾಂತರ ಹಣ ನಿರುಪಯುಕ್ತ ಆಗಲು ಅವಕಾಶ ಕಲ್ಪಿಸದೇ ಸಾರ್ವಜನಿಕರಿಗೆ ಉಪಯೋಗವಾಗಬೇಕು. ಸರ್ಕಾರದಿಂದ ಬಿಡುಗಡೆಯಾಗುವ ಕೋಟ್ಯಂತರ ಹಣ ಸದ್ಬಳಕೆಯಾಗುವತ್ತ ಮೇಲಧಿಕಾರಿಗಳು ಚಿತ್ತ ಹರಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಸೆ.

ಈ ಕಾಮಗಾರಿಗೆ ಎಚ್‌ಕೆಆರ್‌ಡಿಬಿ ಅನುದಾನ ನೀಡಿದೆ. ಸಂಪೂರ್ಣ
ಅವೈಜ್ಞಾನಿಕವಾದ ಈ ರಸ್ತೆ ನಿರ್ಮಾಣ ಮಾಡುವುದರಿಂದ ಪಾದಚಾರಿಗಳಿಗೂ, ವಾಹನ ಸವಾರರೂ ಸೇರಿದಂತೆ ಯಾರಿಗೂ
ಪ್ರಯೋಜನವಿಲ್ಲ. ಈ ಕಾಮಗಾರಿ ಕುರಿತು ಜಿಲ್ಲಾ ಧಿಕಾರಿ ಖುದ್ದು ಸ್ಥಳಕ್ಕೆ ಭೇಟಿನೀಡಿ, ಪರಿಶೀಲಿಸಬೇಕು.
. ಮಹೇಶ ಅಗಡಿ, ಪುರಸಭೆ ಹಿರಿಯ ಸದಸ್ಯ

ಎಚ್‌ಕೆಆರ್‌ಡಿಬಿಯ 10ಲಕ್ಷ ರೂ. ಅನುದಾನದಲ್ಲಿ ಈ ಕಾಮಗಾರಿ
ಕೈಗೊಳ್ಳಲಾಗುತ್ತಿದೆ. ಡಾಂಬರೀಕರಣ ರಸ್ತೆ ಕೈಗೊಂಡರೇ ಭವಿಷ್ಯದಲ್ಲಿ ಅಗೆಯುವ ಸಂದರ್ಭ ಬಂದರೇ ಹಣ ವ್ಯರ್ಥ ಪೋಲಾಗುತ್ತದೆ. ಸರ್ಕಾರದ ಅನುದಾನ ವ್ಯರ್ಥ ಪೋಲಾಗಿಸುವುದನ್ನು ತಪ್ಪಿಸಲು ಸಿಮೆಂಟ್‌ ಕಲ್ಲು ಬಳಸಲಾಗಿದೆ. ಒಂದು ರೀತಿ ಫುಟ್‌ಪಾತೂ ಹೌದು, ರಸ್ತೆಯೂ ಹೌದು.
. ರಾಜಕುಮಾರ ಕಲಬುರ್ಗಿ, (ಪಿಡಬ್ಲ್ಯೂಡಿ)
ಲೋಕೋಪಯೋಗಿ ಸಹಾಯಕ ಎಂಜಿನಿಯರ್‌

„ಶಶಿಕಾಂತ ಕೆ.ಭಗೋಜಿ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.