ವಾದ್ಯ-ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶನ

ವಿವಿಧ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಸಡಗರ •ಮೆರವಣಿಗೆ ಮಾಡಿ ಗಮನ ಸೆಳೆಯಲು ಯತ್ನ

Team Udayavani, May 17, 2019, 4:51 PM IST

17-MAY-31

ಹುಮನಾಬಾದ: ಪಟ್ಟಣದ ವಾರ್ಡ್‌ 6ರ ಕಾಂಗ್ರೆಸ್‌ ಅಭ್ಯರ್ಥಿ ಗುಂಡಪ್ಪ ಹೊನ್ನಿಕೇರಿ ಅವರು ನೂರಾರು ಬೆಂಬಲಿಗರೊಂದಿಗೆ ಡೊಳ್ಳು, ಬುರಬುರೆ ವಾದ್ಯ ಸಮೇತ ನಾಮಪತ್ರ ಸಲ್ಲಿಸಲು ಆಗಮಿಸಿದರು.

ಹುಮನಾಬಾದ: ಮೇ 29ರಂದು ನಡೆಯಲಿರುವ ಪುರಸಭೆ ಚುನಾವಣೆ ಪ್ರಯುಕ್ತ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಗುರುವಾರ ವಿವಿಧ ಪಕ್ಷಗಳ ಅಭ್ಯರ್ಥಿಗಳು ವೈವಿಧ್ಯಮ ವಾದ್ಯವೃಂದ ಸಮೇತ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸುವ ಮೂಲಕ ಗಮನ ಸೆಳೆದರು.

ವಾರ್ಡ್‌ ಸಂಖ್ಯೆ 6ರ ಕಾಂಗ್ರೆಸ್‌ ಅಭ್ಯರ್ಥಿ ಗುಂಡಪ್ಪ ಹೊನ್ನಿಕೇರಿ ಬೆಳಗ್ಗೆ 10ಗಂಟೆ ಸುಮಾರು ಧನಗರ ಗಡ್ಡಾದಿಂದ ವಿವಿಧ ವೃತ್ತಗಳ ಮಾರ್ಗವಾಗಿ ಬುರಬುರೆ ವಾದ್ಯ, ಡೊಳ್ಳು, ನೃತ್ಯ ಸಮೇತ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅತ್ಯಂತ ಕುತೂಹಲಕ್ಕೆ ಕಾರಣವಾದ ವಾರ್ಡ್‌ 15ರ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ(ಕಾಳಪ್ಪ) ಪಾಟೀಲ, ವಾರ್ಡ್‌ 2ರ ಕಾಂಗ್ರೆಸ್‌ ಅಭ್ಯರ್ಥಿ ಓಂಪ್ರಕಾಶ ಅಗಡಿ, ವಾರ್ಡ್‌ 18ರ ಅಭ್ಯರ್ಥಿ ವಿನಾಯಕ ಯಾದವ್‌, ವಾರ್ಡ್‌ 20ರ ಪಾರ್ವತಿಬಾಯಿ ಶೇರಿಕಾರ, ವಾರ್ಡ್‌ 5ರ ಅಶೋಕ ಹತ್ತಿ, ವಾರ್ಡ್‌ 12ರ ರಾಜಶೇಖರ, ವಾರ್ಡ್‌ 13ರ ಮಹೇಶ ಪಾಟೀಲ, ಅನೀಲ ಪಲ್ಲರಿ ಇನ್ನೂ ಅನೇಕರು ವಾದ್ಯ ಸಮೇತ ನೂರಾರು ಜನ ಬೆಂಬಲಿಗರೊಂದಿಗೆ ಹುಮ್ಮಸ್ಸಿನಿಂದ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಪಟ್ಟಣದ ಪುರಸಭೆಯ 27 ವಾರ್ಡ್‌ಗಳ ಪೈಕಿ ಸೂಕ್ತ ಅಭ್ಯರ್ಥಿಗಳು ಲಭ್ಯವಾಗದ ಕಾರಣ 21 ವಾರ್ಡ್‌ಗಳಿಂದ ಮಾತ್ರ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ನಾಮಪತ್ರ ಸಲ್ಲಿಕೆ ವೇಳೆಯೂ ಇತರ ಪಕ್ಷಗಳಿಗೆ ಹೋಲಿಸಿದರೆ ಕೊಂಚ ಉತ್ಸಾಹವೂ ಕಡಿಮೆ ಅನ್ನಿಸಿತು.

ರಾಜ್ಯದಲ್ಲಿ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಸರ್ಕಾರ ಇದ್ದರೂ ಸ್ಥಳೀಯ ಮಟ್ಟದಲ್ಲಿ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಲಾಯಿತು. ಬಿಜೆಪಿಯಂತೆ ಈ ಪಕ್ಷವೂ 27 ವಾರ್ಡ್‌ಗಳ ಪೈಕಿ 20 ವಾರ್ಡ್‌ಗಳಿಂದ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಸಿದ್ದು ವಿಶೇಷ. ಮತ್ತು ಇಲ್ಲೂ ನಾಮಪತ್ರ ಸಲ್ಲಿಕೆ ವೇಳೆ ಹೇಳಿಕೊಳ್ಳುವಂಥ ಹುಮ್ಮಸ್ಸು ಅಭ್ಯರ್ಥಿಗಳಲ್ಲಿ ಕಾಣಿಸಲಿಲ್ಲ.

ಪಕ್ಷೇತರರಾದ ಬಂಡಾಯ ಅಭ್ಯರ್ಥಿಗಳು: ಜೆಡಿಎಸ್‌ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಎಂ.ಡಿ.ಯಾಸೀನಲಿ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತೆಯೂ ಆದ ಪುರಸಭೆ ಮಾಜಿ ಅಧ್ಯಕ್ಷೆ ಗುಜ್ಜಮ್ಮ ನಾಗರೆಡ್ಡಿ ಅವರು ವಾರ್ಡ್‌ 27ರಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಅವಕಾಶದಿಂದ ವಂಚಿತ ಅಗಡಿ: 2007 ಮತ್ತು 2014ರ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಈ ಬಾರಿ ಹ್ಯಾಟ್ರಿಕ್‌ ಸಾಧನೆಗೆ ಅಗತ್ಯ ಸಿದ್ಧತೆ ಮಾಡಿಕೊಂಡ ಜೆಡಿಎಸ್‌ ತಾಲೂಕು ಘಟಕದ ಹಾಲಿ ಅಧ್ಯಕ್ಷ ಮಹೇಶ ಎಂ.ಅಗಡಿ ಪಕ್ಷದ ವರಿಷ್ಠರ ಮನವಿಯ ಮೇರೆಗೆ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಹಳೆ ಹುಲಿಗಳು: ಈ ಬಾರಿ ಚುನಾವಣೆಯಲ್ಲಿ ಈ ಹಿಂದೆ ಎರಡು ಮೂರು ಬಾರಿ ಪುರಸಭೆಗೆ ಆಯ್ಕೆಯಾದ ಕೆಲವು ಹಳೆ ಅಭ್ಯರ್ಥಿಗಳಾದ ಅಹ್ಮದ್‌ ಮೈನೋದ್ದೀನ್‌, ವಿನಾಯಕ ಯಾದವ್‌, ಗುಜ್ಜಮ್ಮ ನಾಗರೆಡ್ಡಿ, ಪಾರ್ವತಿ ಶೇರಿಕಾರ, ಪಾರ್ವತಿಬಾಯಿ ಮಾಳಗೆ, ಅಬ್ದುಲ್ ರೆಹಮಾನ ಗೋರೆಮಿಯ್ನಾ, ಮುಕ್ರಂ ಈ ಬಾರಿ ಮತ್ತೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಟಿಕೆಟ್ ವಂಚಿತರು: ಕಳೆದ ಬಾರಿ ಪುರಸಭೆ ಸದಸ್ಯರಾಗಿ ಆಯ್ಕೆಗೊಂಡಿದ್ದ ಮಲ್ಲಿಕಾರ್ಜುನ ಸೀಗಿ, ಮಹೇಶ ಎಂ.ಅಗಡಿ, ತಿರುಮಲರೆಡ್ಡಿ ಮಂಡಾ, ರಾಧಾ ಮಾಳಪ್ಪ, ಸುರೇಶ ಗುರುದತ್ತ ಒಡೆಯರ್‌, ಸಿದ್ದು ಕೊಟ್ಟರಗಿ, ಕಲೀಂಸಾಬ್‌ ನೂರ, ನಯೂಮ್‌ ಬಾಗವಾನ್‌, ಎಂ.ಡಿ.ಇಸ್ಮಾಯಿಲ್, ರಾಮು ಚವಾಣ ಟಿಕೇಟ್ ವಂಚಿತರಾದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.