ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಕಮಲಕ್ಕೆ ಮತ ನೀಡಿ: ಕಲ್ಲೂರ


Team Udayavani, May 27, 2019, 4:20 PM IST

27-May-33

ಹುಮನಾಬಾದ: ಬಿಜೆಪಿ ಅಭ್ಯರ್ಥಿಗಳ ಪರ ಮಾಜಿ ಶಾಸಕ ಸುಭಾಷ ಕಲ್ಲೂರ ಅವರು ವಿವಿಧ ವಾರ್ಡ್‌ಗಳಿಗೆ ತೆರಳಿ ಮತ ಯಾಚಿಸಿದರು.

ಹುಮನಾಬಾದ: ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಮತದಾರ ಪ್ರಭುಗಳು ಕಮಲಕ್ಕೆ ಮತ ನೀಡಬೇಕು ಎಂದು ಮಾಜಿ ಶಾಸಕ ಸುಭಾಷ ಕಲ್ಲೂರ ಹೇಳಿದರು.

ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕಾಲ್ನಡಿಗೆ ಮೂಲಕ ಸಂಚರಿಸಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸುತ್ತಿದ್ದ ವೇಳೆ ಮಾತನಾಡಿದ ಅವರು, ಹುಮನಾಬಾದ ಪುರಸಭೆ ಅಧಿಕಾರ ಗದ್ದುಗೆ ಹಿಡಿದ ಕಾಂಗ್ರೆಸ್‌ ಪಕ್ಷ ಸರ್ಕಾರದಿಂದ ಅನುದಾನ ತಂದರೂ ಕೈಗೊಂಡಿರುವ ಎಲ್ಲ ಕಾಮಗಾರಿ ಅಪೂರ್ಣ ಸ್ಥಿತಿಯಲ್ಲಿವೆ. 2013ರಲ್ಲಿ ಆರಂಭಗೊಂಡ ಒಳಚರಂಡಿ ಕಾಮಗಾರಿಯನ್ನು 7 ವರ್ಷ ಗತಿಸಿದರೂ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಜೊತೆಗೆ ಕಾಮಗಾರಿ ಸಂಪೂರ್ಣ ನಿರೂಪಯುಕ್ತವಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ ಎಂದು ಹೇಳಿದರು. ಅತ್ಯಾಕರ್ಷಕ ಹೂ-ಹುಲ್ಲಿನಿಂದ ಅಲಂಕೃತಗೊಂಡು ಪಟ್ಟಣದ ಸೌಂದರ್ಯ ಹೆಚ್ಚಿಸಬೇಕಿದ್ದ ಡಾ| ಅಂಬೇಡ್ಕರ್‌ ವೃತ್ತದಿಂದ ವಾಂಜ್ರಿವರೆಗೆ ಕೈಗೊಂಡ ರಸ್ತೆ ವಿಭಜಕ ತಿಪ್ಪೆಗುಂಡಿಯಾಗಿ ಪರಿವರ್ತನೆಯಾಗಿದ್ದರೂ ಯಾರೊಬ್ಬರೂ ಗಮನ ಹರಿಸುತ್ತಿಲ್ಲ. ಹುಮನಾಬಾದ ಪಟ್ಟಣದಲ್ಲಿ ಇರುವ ಪುರಸಭೆ ಏಕೈಕ ಉದ್ಯಾನ ಕಳೆದ ದಶಕದಿಂದ ಹಸಿರಿಲ್ಲದೇ ಭಣಗೊಡುತ್ತಿದೆ. ಹಸಿರು ಸಿರಿಯಲ್ಲಿ ಸಾರ್ವಜನಿಕರು ಪರಿವಾರ ಸಮೇತ ಬಂದು ನೆಮ್ಮದಿಯಿಂದ ಕುಳಿತುಕೊಳ್ಳಬೇಕಾದ ಉದ್ಯಾನ ಸ್ಥಳದಲ್ಲಿ ನಿಯಮ ಬಾಹಿರ ವಿವಿಧ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಇದು ಅಭಿವೃದ್ಧಿಯೆ? ಇಂಥ ಪಕ್ಷಕ್ಕೆ ಜನರು ಮತ್ತೂಮ್ಮೆ ಮತ ನೀಡಿ, ಗದ್ದುಗೆ ಗೈಯಲ್ಲಿ ಕೊಡಬೇಕೆ ಎಂದು ಪ್ರಶ್ನಿಸಿದರು.

ಡಾ| ಅಂಬೇಡ್ಕರ್‌ ವೃತ್ತದಿಂದ ಫುಟ್ಪಾತ್‌ ಪಕ್ಕದಲ್ಲಿ ಹರಿಯುವ ಸಾರ್ವಜನಿಕ ತ್ಯಾಜ್ಯ ನೋಡಿದರೆ ವಾಕರಿಕೆ ಬರುತ್ತದೆ. ಇಷ್ಟು ಅವಧಿ ಅಧಿಕಾರದಲ್ಲಿದ್ದರೂ ಆ ಸಮಸ್ಯೆ ಬಗೆಹರಿಸಲು ಸಾಧ್ಯವಾಗದ ಪಕ್ಷಕ್ಕೆ ಮತ್ತೂಮ್ಮೆ ಮತ ನೀಡಬೇಕೆ? ಅಂಥವರನ್ನು ಅಧಿಕಾರದಿಂದ ದೂರ ಇಡಲು ಮತದಾರರು ಈ ಬಾರಿ ಬಿಜೆಪಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವಾನಂದ ಮಂಠಾಳ್ಕರ್‌, ತಾಲೂಕು ಅಧ್ಯಕ್ಷ ವಿಶ್ವನಾಥ ಪಾಟೀಲ ಮಾಡ್ಗುಳ್‌, ನರಸಿಂಗ್‌(ರಾಜು)ಭಂಡಾರಿ, ಬ್ಯಾಂಕ್‌ರೆಡ್ಡಿ, ಗಿರೀಶ ಎಂ.ಪಾಟೀಲ ಮೊದಲಾದವರು ಇದ್ದರು.

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.