ಎಸ್‌ಎಸ್‌ಎಲ್ಸಿ ಫಲಿತಾಂಶ: ಹೊಸ ಯೋಜನೆ ಯಶಸ್ಸಿಗೆ ಕಾರಣ


Team Udayavani, May 3, 2019, 4:59 PM IST

Udayavani Kannada Newspaper

ಹುಮನಾಬಾದ: ಪ್ರಸಕ್ತ (2019) ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಹುಮನಾಬಾದ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಗಿಟ್ಟಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದು, ವಿನೂತನ ಯೋಜನೆಗಳೇ ಯಶಸ್ಸಿಗೆ ಕಾರಣವಾಗಿದೆ. 2016ನೇ ಸಾಲಿನಲ್ಲಿ ಶೇ.75ರಷ್ಟು ಫಲಿತಾಂಶ ಬಂದಿತ್ತು. 2017ನೇ ಸಾಲಿನಲ್ಲಿ ಶೇ.69 ಇತ್ತು. 2018ನೇ ಸಾಲಿನಲ್ಲಿ ಶೇ.64.5ಕ್ಕೆ ಇಳಿದಿತ್ತು. 2019ನೇ ಸಾಲಿನಲ್ಲಿ ಸಚಿವ ರಾಜಶೇಖರ ಪಾಟೀಲ ಅವರ ಆದೇಶದ ಜತೆಗೆ ಇಲಾಖೆ ಹಿರಿಯ ಅಧಿಕಾರಿಗಳ ಕಟ್ಟುನಿಟ್ಟಿನ ಸೂಚನೆಗಳನ್ನು ಚಾಚೂ ತಪ್ಪದೇ ಪಾಲಿಸಿದ್ದರ ಪರಿಣಾಮ ಫಲಿತಾಂಶದಲ್ಲಿ ಏರಿಕೆ ಕಂಡು ಬಂದಿದೆ.

ಸುಧಾರಣೆಗೆ ಮಾಡಿದ್ದೇನು: ಮಾಧ್ಯಮವಾರು ಮತ್ತು ವಿಷಯವಾರು ಶಿಕ್ಷಕರ ಮಾಸಿಕ ಸರಣಿ ಸಭೆ ನಡೆಸಿ ಫಲಿತಾಂಶ ಹೆಚ್ಚಿಸುವ ಉದ್ದೇಶದಿಂದ ವಿಶೇಷ ಶಿಕ್ಷಕರನ್ನು ಬಳಸಿಕೊಳ್ಳಲಾಗಿದೆ. ಸಹ ಶಿಕ್ಷಕರ ಗೈರು, ಸ್ಪರ್ಧಾ ಚಟುವಟಿಕೆ, ವಿಷಯ ಚರ್ಚಾಗೋಷ್ಠಿ, ರಸಪ್ರಶ್ನೆ, ಕಿರು ಪರೀಕ್ಷೆ, ವಿಷಯವಾರು ಸರಣಿ ಪರೀಕ್ಷೆ ತೆಗೆದುಕೊಳ್ಳದೇ ಇರುವುದನ್ನು ಗಂಭೀರ ಪರಿಗಣಿಸಿ ಕಟ್ಟುನಿಟ್ಟಿನಿಂದ ಪಾಲನೆ ಮಾಡುವಂತೆ ನೋಡಿಕೊಂಡಿರುವುದು ಫಲಿತಾಂಶ ಸುಧಾರಣೆಗೆ ಒಂದು ಕಾರಣ.

ತೀವ್ರ ನಿಗಾ ಕಲಿಕಾ ಕೇಂದ್ರ: ಶೇ.40ಕ್ಕಿಂತ ಕಡಿಮೆ ಫಲಿತಾಂಶ ಹೊಂದಿರುವ ಪ್ರೌಢಶಾಲೆಗಳಿಗೆ ಪ್ರತಿ 15ದಿನಕ್ಕೊಮ್ಮೆ ಸಭೆ ನಡೆಸಿ ಕ್ಷೇತ್ರದ ಶಿಕ್ಷ್ಷಣಾಧಿಕಾರಿ, ಸಮೂಹ ಸಂಪನ್ಮೂಲ, ಅಕ್ಷರ ದಾಸೋಹ, ಶಿಕ್ಷಣ ಸಂಯೋಜಕರು, ವಲಯ ಸಂಪನ್ಮೂಲ ಅಧಿಕಾರಿ ಹಾಗೂ ಮುಖ್ಯ ಶಿಕ್ಪ್ಷಕ, ಸಹ ಶಿಕ್ಷಕರಿಗೆ ದತ್ತು ನೀಡಿರುವುದು ಫಲಿತಾಂಶ ಸುಧಾರಣೆಗೆ ಪೂರಕವಾಗಿದೆ.

ವಿವಿಧ ಪರೀಕ್ಷೆ: ಪರೀಕ್ಷೆ ಎದುರಿಸುವ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ವಿಷಯವಾರು ತೆರೆದ ಪುಸ್ತಕ ಮಾದರಿ ಪರೀಕ್ಷೆ, ವಲಯವಾರು ನೇರ ಸಂವಾದ, ಹಿರಿಯ ಅಧಿಕಾರಿಗಳ ಜತೆಗೆ ಗಣಿತ, ವಿಜ್ಞಾನ, ಇಂಗ್ಲಿಷ್‌ ವಿಷಯವಾರು ಚರ್ಚಿಸಿ ಪರಿಹಾರ ಒದಗಿಸಲಾಗಿದೆ.

ಕಲಿಕಾ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ: ಶಾಲಾ ಹಂತದಲ್ಲಿ ಕಲಿಕಾ ಮಾದರಿ ಅಳವಡಿಸಿಕೊಳ್ಳಲು ಸೂಚಿಸುವುದು. ಶಾಲಾ ಪೂರ್ವ ಹಾಗೂ ನಂತರ ವಿಶೇಷ ತರಗತಿ ನಡೆಸಲು ಕ್ರಮ ಕೈಗೊಳ್ಳುವುದು ಹಾಗೂ ಆಂತರಿಕ ಅಂಕಗಳ ಬಗ್ಗೆ ಮಾಹಿತಿ ನೀಡುವುದು. ಎಫ್‌.ಎ-1, ಎಫ್‌.ಎ-2, ಎಫ್‌.ಎ-3, ಎಫ್‌.ಎ-4 ಮತ್ತು ಎಸ್‌.ಎ-1, ಎಸ್‌.ಎ-2 ಕುರಿತು ಅರಿವು ಮೂಡಿಸುವುದು. ವಿಜ್ಞಾನ, ಸಮಾಜ ವಿಜ್ಞಾನ, ಗಣಿತ ವಿಷಯಗಳನ್ನು ನೆಲದ ಮೇಲೆ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸುವ ಮೂಲಕ ವಿಷಯ ಸರಳೀಕರಿಸುವುದು.

ನೇರ ಫೋನ್‌-ಇನ್‌: ವಿಷಯವಾರು ತಜ್ಞ ಶಿಕ್ಷ್ಷಕರಿಂದ ಫೋನ್‌-ಇನ್‌ ಕಾರ್ಯಕ್ರಮ ಮೂಲಕ ಸಮಸ್ಯೆ ನಿವಾರಿಸಿಕೊಳ್ಳಲು ಕೊಟ್ಟ ಅವಕಾಶ ಸದ್ಬಳಕೆ ಮಾಡಿಕೊಂಡ ವಿದ್ಯಾರ್ಥಿಗಳಿಂದ 200ಕ್ಕೂ ಅಧಿಕ ಪ್ರಶ್ನೆ ಬಂದಿರುವುದು ಗಮನಾರ್ಹ. ಈ ಎಲ್ಲದರ ಜತೆಗೆ ವಲಯವಾರು ಹಾಗೂ ಶಾಲಾ ಹಂತದಲ್ಲಿ ಚಟುವಟಿಕೆ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘ, ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳ ಜತೆಗೆ ನಿರಂತರ ಸಂಪರ್ಕ ಇಟ್ಟುಕೊಂಡು ಚಟುವಟಿಕೆ ಏರ್ಪಡಿಸುವ ಮೂಲಕ ಪರೀಕ್ಷೆ ಫಲಿತಾಂಶ ಸುಧಾರಿಸಲಾಗಿದೆ.

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.