ಸಮಸ್ಯೆ ನಿವಾರಿಸದಿದ್ದರೆ ಮತ ಬಹಿಷ್ಕಾರ

•ಎನ್‌ಜಿಒ ಬಡಾವಣೆಯಲ್ಲಿ ರಸ್ತೆ ಪಕ್ಕದಲ್ಲೇ ತ್ಯಾಜ್ಯ •ತ್ಯಾಜ್ಯದಲ್ಲೇ ನೀರು ಪೂರೈಕೆ ವಾಲ್-ರೋಗಭೀತಿ

Team Udayavani, May 18, 2019, 1:05 PM IST

18-May-14

ಹುಮನಾಬಾದ: ಸಿದ್ಧಾರ್ಥ ಕಾಲೋನಿ ನಿವಾಸಿಗಳ ಮಲಿನ ನೀರು ರಸ್ತೆ ಪಕ್ಕದಲ್ಲೇ ಸಂಗ್ರಹಗೊಂಡಿರುವುದು.

ಹುಮನಾಬಾದ: ಪುರಸಭೆ ಆಡಳಿತದ ನಿರ್ಲಕ್ಷದಿಂದಾಗಿ ಪಟ್ಟಣದ ಎನ್‌ಜಿಒ ಬಡಾವಣೆಗೆ ವರ್ಷದಿಂದ ಮಲಿನ ನೀರು ಪೂರೈಕೆ ಆಗುತ್ತಿರುವ ಕಾರಣ ಬಡಾವಣೆ ನಿವಾಸಿಗಳು ರೋಗ ಭೀತಿಯಲ್ಲಿ ಕಾಲಕಳೆಯುವಂತಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಪುರಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡಲು ಬಡಾವಣೆ ನಿವಾಸಿಗಳು ನಿರ್ಧರಿಸಿದ್ದಾರೆ.

ಪಟ್ಟಣದ ಪ್ರಮುಖ ವಾರ್ಡ್‌ನಲ್ಲಿ ಒಂದಾಗಿರುವ ಹಣಕುಣಿ ಮಾರ್ಗಕ್ಕೆ ಹೊಂದಿಕೊಂಡಿರುವ ಎನ್‌ಜಿಒ ಬಡಾವಣೆ ನಿರ್ಲಕ್ಷ್ಯಕ್ಕೊಳಗಾಗಿದೆ. ಸಿದ್ಧಾರ್ಥ ಕಾಲೋನಿ ನಿವಾಸಿಗಳ ಸಂಪೂರ್ಣ ತ್ಯಾಜ್ಯ ಹರಿದು ಹೋಗಲು ಅವಕಾಶವಿಲ್ಲದೇ ರಸ್ತೆ ಪಕ್ಕದಲ್ಲೇ ಸಂಗ್ರಹವಾಗುತ್ತಿದೆ. ಇದು ತ್ಯಾಜ್ಯದ ಕಥೆಯಾದರೆ ಎನ್‌ಜಿಒ ಬಡಾವಣೆಗೆ ನೀರು ಪೂರೈಸುವ ವಾಲ್ ಆ ಗಲೀಜಿನ ಮಧ್ಯದಲ್ಲಿ ಇರುವುದೇ ಇಷ್ಟೆಲ್ಲಕ್ಕೂ ಕಾರಣ. ನಿತ್ಯ ನೀರು ಪೂರೈಸುವ ಕಾರ್ಮಿಕ ಆ ಗಲೀಜಿನಲ್ಲೇ ಕೈ ಹಾಕಿ ವಾಲ್ ತಿರುಗಿಸಬೇಕು. ಅಲ್ಲಿಂದ ಪೂರೈಕೆ ಆಗುವ ನೀರು ಮಲೀನವಾಗಿರುವುದರಿಂದ ಕುಡಿಯುವುದು ದೂರದ ಮಾತು ಬಳಕೆಗೂ ಯೋಗ್ಯವಿರುವುದಿಲ್ಲ.

ಮಲೀನ ನೀರು ಪೂರೈಕೆ ಕಾರಣ ರೋಗನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು, ವೃದ್ಧರು ಟೈಫಾಯಿಡ್‌, ಶೀತ, ತಲೆನೋವು ಸೇರಿದಂತೆ ಒಂದಿಲ್ಲೊಂದು ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಕ್ಕಳ ಚಿಕಿತ್ಸೆಗೆ ಸಾವಿರಾರು ರೂಪಾಯಿ ವೆಚ್ಚವಾಗುತ್ತಿದೆ. ಒಂದೆರಡು ದಿನ ಮಾತ್ರೆ ಮತ್ತು ಚುಚ್ಚುಮದ್ದು ತೆಗೆದುಕೊಳ್ಳದಿದ್ದರೆ ರೋಗ ಮತ್ತಷ್ಟು ಉಲ್ಬಣಗೊಂಡು ನಿವಾಸಿಗಳು ನಿತ್ಯ ನರಕಯಾತನೆ ಅನುಭವಿಸುತ್ತಾರೆ.

ಈ ವಿಷಯವನ್ನು ಹಲವು ಬಾರಿ ಸಂಬಂಧಪಟ್ಟ ವಾರ್ಡ್‌ ಸದಸ್ಯರೂ ಸೇರಿದಂತೆ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡದಿರುವುದರಿಂದ ಸಮಸ್ಯೆ ಹಾಗೇ ಉಳಿದಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಬೇಜವಾಬ್ದಾರಿ ಕಾರಣ.

ಮತದಾನ ಬಹಿಷ್ಕಾರ: ಮೇ 29ರಂದು ನಡೆಯಲಿರುವ ಪುರಸಭೆ ಚುನಾವಣೆಗೆ ಮುನ್ನ ಸಾರ್ವಜನಿಕ ತ್ಯಾಜ್ಯ ಸುಗಮವಾಗಿ ಸಾಗಲು ಪರ್ಯಾಯ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ನೀರು ಪೂರೈಕೆ ವಾಲ್ ಸ್ವಚ್ಛ ಸ್ಥಳದಲಿ ಅಳವಡಿಸಿ, ಶುದ್ಧ ನೀರು ಪೂರೈಕೆಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಳ್ಳದಿದ್ದರೆ ಮತದಾನ ಬಹಿಷ್ಕಕರಿಸಲು ಎನ್‌ಜಿಒ ಬಡಾವಣೆ ನಿವಾಸಿಗಳು ನಿರ್ಧಾರಿಸಿದ್ದಾರೆ.

ಬುದ್ಧಿಜೀವಿಗಳ ಬಡಾವಣೆ ನಿವಾಸಿಗಳ ಈ ಸಮಸ್ಯೆ ವರ್ಷ ಕಳೆದರೂ ಬಗೆಹರಿದಿಲ್ಲ. ಚುನಾವಣೆಯ ಈ ಸಂದರ್ಭದಲ್ಲಾದರೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಬಡಾವಣೆ ನಿವಾಸಿಗಳ ಸಮಸ್ಯೆಗೆ ಸ್ಪಂದಿಸಿ, ಶಾಶ್ವತ ಪರಿಹಾರ ಒದಗಿಸುತ್ತಾರೋ ಅಥವಾ ನಾಮ್ಕೆ ವಾಸ್ತೆ ಎಂದಿನಂತೆ ಸುಳ್ಳು ಭರವಸೆ ನೀಡಿ, ದಿನ ಮುಂದೂಡುತ್ತಾರೊ ನೋಡಬೇಕಿದೆ. ಅಷ್ಟಕ್ಕೂ ಅವರಂತೆ ಎಚ್ಚರಿಕೆ ನೀಡಿದ್ದಾಗಿದೆ. ಸಮಸ್ಯೆ ಬಗೆಹರಿದರೆ ಮತ, ಇಲ್ಲದಿದ್ದರೇ ಬಹಿಷ್ಕಾರ. ಸಮಸ್ಯೆ ಬಗೆಹರಿಯುತ್ತಾ ಅಥವಾ ಮತದಾನ ಬಹಿಷ್ಕಾರ ಆಗುತ್ತಾ ಎಂಬುದನ್ನು ಕಾದು ನೋಡಬೇಕು.

ಈ ಜನಕ್ಕೆ ಮತ ಕೇಳುವುದು ಮಾತ್ರ ಗೊತ್ತು. ಸಮಸ್ಯೆ ಬಗೆಹರಿಸುವುದೆಂದರೆ ಅಲರ್ಜಿ. ಈ ಸಮಸ್ಯೆ ಕಳೆದ ಒಂದು ವರ್ಷದಿಂದ ಬಡಾವಣೆ ನಿವಾಸಿಗಳನ್ನು ಕಾಡುತ್ತಿದೆ. ಬಡಾವಣೆಯ ಬಹುತೇಕ ಮಕ್ಕಳು, ವದ್ಧರು ರೋಗದಿಂದ ಬಳಲುತ್ತಿದ್ದಾರೆ. ಈ ಜನಪ್ರತಿನಿಧಿ, ಅಧಿಕಾರಿಗಳಿಗೇ ಕನಿಷ್ಟ ಮಾನವೀಯತೆ ಬೇಡ್ವಾ? ಸದ್ಯ ಎಚ್ಚರಿದ್ದೇವೆ. ನೋಡೋಣ ಏನಾಗುತ್ತದೊ.
ಎಂ.ನಾಗರಾಜ,
ಎನ್‌ಜಿಒ ಕಾಲೋನಿ ನಿವಾಸಿ

ನಾನು ಹೊಸದಾಗಿ ಬಂದಿರುವೆ. ನಮ್ಮ ಸಿಬ್ಬಂದಿ ಪೈಕಿ ಯಾರೊಬ್ಬರೂ ಈ ಸಮಸ್ಯೆಯನ್ನು ಈವರೆಗೂ ನನ್ನ ಗಮನಕ್ಕೆ ತಂದಿಲ್ಲ. ಸಮಸ್ಯೆ ನಿಜಕ್ಕೂ ಗಂಭೀರವಾಗಿದೆ. ತೆರಿಗೆ ಪಾವತಿಸುವ ಪ್ರತಿಯೊಬ್ಬರಿಗೆ ಮೂಲಸೌಲಭ್ಯ ಕಲ್ಪಿಸುವುದು ನಮ್ಮ ಆದ್ಯ ಕರ್ತವ್ಯ. ಮತದಾನ ಬಹಿಷ್ಕಾರಕ್ಕೆ ಅವಕಾಶ ಮಾಡದಂತೆ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುತ್ತೇವೆ.
ಮನೋಜಕುಮಾರ,
ಪುರಸಭೆ ಮುಖ್ಯಾಧಿಕಾರಿ

ಶಶಿಕಾಂತ ಕೆ.ಭಗೋಜಿ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.