ಉಜ್ವಲ ಭವಿಷ್ಯಕ್ಕಾಗಿ ಇಷ್ಟಪಟ್ಟು ಓದಿ: ನ್ಯಾಮಗೌಡರ್‌

ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ

Team Udayavani, Jul 29, 2019, 3:53 PM IST

29-July-35

ಹುಮನಾಬಾದ: ಯಲಾಲ್ ಶಿಕ್ಷಣ ದತ್ತಿ ಸರ್ವೋದಯ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಬಿ.ಎ, ಬಿ.ಕಾಂ ಮತ್ತು ಬಿಎಸ್ಸಿ ಪ್ರಥಮ ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಪುರಸಭೆ ಸದಸ್ಯ ಕಾಳಪ್ಪ ಗೌಡ್ರು ಉದ್ಘಾಟಿಸಿದರು.

ಹುಮನಾಬಾದ: ಸತತ ಪ್ರಯತ್ನದಿಂದ ಮಾತ್ರ ಸಾಧನೆ ಸಾಧ್ಯ. ಆದ್ದರಿಂದ ವಿದ್ಯಾರ್ಥಿನಿಯರು ಕಷ್ಟಪಟ್ಟು ಓದದೇ ಇಷ್ಟಪಟ್ಟು ಓದಿದಾಗ ಮಾತ್ರ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಸಿಪಿಐ ಜೆ.ಎಸ್‌.ನ್ಯಾಮಗೌಡರ್‌ ಹೇಳಿದರು.

ಪಟ್ಟಣದ ಯಲಾಲ್ ಶಿಕ್ಷಣ ದತ್ತಿ ಸರ್ವೋದಯ ಪದವಿ ಕಾಲೇಜಿನಲ್ಲಿ ರವಿವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ಈ ದೇಶದ ಸಂಸ್ಕೃತಿಯ ಪ್ರತೀಕದವಾಗಿದ್ದು, ಇಂದಿನ ಯುವಕರು ಅವರ ಆದರ್ಶ ಮೈಗೂಡಿಸಿಕೊಳ್ಳಬೇಕು. ಜೀವನದ ಅತ್ಯಂತ ಪ್ರಮುಖ ಘಟ್ಟವಾದ ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ವ್ಯರ್ಥ ಕಾಲಹರಣ ಮಾಡದೇ ಹೆತ್ತ ಪಾಲಕರು, ವಿದ್ಯೆ ನೀಡಿದ ಗುರು ಮತ್ತು ವಿದ್ಯಾಲಯದ ಕೀರ್ತಿ ಹೆಚ್ಚಿಸುವುದರೊಂದಿಗೆ ವೈಯಕ್ತಿಕ ಸ್ಥಾನಮಾನಕ್ಕಾಗಿ ಶ್ರಮಿಸಬೇಕು ಎಂದು ಹೇಳಿದರು.

ಪುರಸಭೆ ಸದಸ್ಯ ಸುನೀಲ ಗೌಡ್ರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಸಂಸ್ಥೆಗಳು ವಾಣಿಜ್ಯ ಕೇಂದ್ರಗಳಾಗಿ ಬೆಳೆಯುತ್ತಿರುವ ಈ ದಿನಗಳಲ್ಲಿ ಈ ಭಾಗದ ಬಡ ಮತ್ತು ಮಧ್ಯಮ ವರ್ಗದ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ದಶಕದಿಂದ ಅತ್ಯಲ್ಪ ಶುಲ್ಕದಲ್ಲಿ ಗುಣಾತ್ಮಕ ಶಿಕ್ಷಣ ನೀಡುತ್ತಿರುವುದು ಯಲಾಲ್ ಶಿಕ್ಷಣ ದತ್ತಿ ಕಾರ್ಯ ಪ್ರಶಂಸನೀಯ. ಭವಿಷ್ಯದಲ್ಲಿ ಪುರಸಭೆ ವತಿಯಿಂದ ಅಗತ್ಯ ಸಹಾಯ ಸಹಕಾರ ನೀಡಲು ಯಾವತ್ತೂ ಸಿದ್ಧ ಎಂದು ಭರವಸೆ ನೀಡಿದರು.ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಹುಳುಗಳಾಗದೇ ಹೊರ ಪ್ರಪಂಚದ ಜ್ಞಾನರ್ಜನೆಗಾಗಿ ಸಾಮಾನ್ಯ ಜ್ಞಾನ ವೃದ್ಧಿಸಿಕೊಳ್ಳಲು ದಿನಪತ್ರಿಕೆ ಓದುವುದನ್ನು ರೂಢಿಸಿಕೊಳ್ಳಬೇಕು. ವಿಶೇಷವಾಗಿ ಯುವತಿಯರು ತಮ್ಮನ್ನು ತಾವು ಯಾವತ್ತೂ ನಾಲ್ಕು ಗೋಡೆಗೆ ಸೇಮಿತವಾಗಿಸಿಕೊಳ್ಳದೇ ವಿದ್ಯಾವ್ಯಾಸಂಗದ ಜೊತೆಗೆ ಬಿಡಿ ಕಾಸಿಗಾಗಿ ಪತಿ ಎದುರು ಕೈ ಚಾಚದೇ ಆರ್ಥಿಕ ಸ್ವಾವಲಂಬನೆ ಮೂಲಕ ತಲೆಎತ್ತಿ ಬದುಕು ಸಾಗಿಸಬೇಕು. ಪರಿಸರ ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಿ ಅಕ್ಕಪಕ್ಕದವರಿಗೂ ಅದರ ಮಹತ್ವ ತಿಳಿಸಬೇಕು ಎಂದು ಹೇಳಿದರು.

ಸರ್ವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರಕಾಶ ಬತಲಿ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕ ಪ್ರೀತಿ ಮೈಗೂಡಿಸಿಕೊಳ್ಳಬೇಕು. ಮೊಬೈಲ್ ಜ್ಞಾನಾರ್ಜನೆಗಾಗಿ ಬಳಸುವುದು ತಪ್ಪಲ್ಲ. ಆದರೆ ಏನು ಬೇಕು ಅದನ್ನು ನೋಡದೇ ಇನ್ನೇನನ್ನೊ ನೋಡುವ ಮೂಲಕ ಯುವಕ-ಯುವತಿರು ದಾರಿ ತಪ್ಪುತ್ತಿದ್ದಾರೆ. ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದು, ಈ ಸಂದರ್ಭದಲ್ಲಿ ಕೈಗೊಳ್ಳುವ ಪ್ರತಿಯೊಂದು ಹೆಜ್ಜೆಯನ್ನೂ ಅತ್ಯಂತ ಜಾಗೃತಿಯಿಂದ ಇಡಬೇಕು ಎಂದು ಸಲಹೆ ನೀಡಿದರು.

ಯಲಾಲ್ ಶಿಕ್ಷಣ ಮುಖ್ಯದತ್ತಿ ನಾಗಶೆಟ್ಟಿ ಯಲಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆ ಕಾರ್ಯದರ್ಶಿ ಮೀನಶಾಕ್ಷಿ ಯಲಾಲ್, ನಿರ್ದೇಶಕ ಪ್ರಜ್ವಲ್ ಯಲಾಲ್, ಪ್ರಾಚಾರ್ಯ ಡಾ|ಅರುಣಕುಮಾರ ಯಲಾಲ್, ಉಪಪ್ರಾಚಾರ್ಯ ಆನಂದ ಚಾಕೂರೆ ವೇದಿಕೆಯಲ್ಲಿದ್ದರು.

ಮಹಾವಿದ್ಯಾಲಯದ ಪ್ರಾಧ್ಯಾಪಕ ಶರಣಯ್ಯ ಚೆಟ್ಟಿ, ಅನೀಲ ಲದ್ದಿ, ಚಂದ್ರಕಾಂತ ಬಿರಾದಾರ, ರಾಘವೇಂದ್ರ ಬಿರಾದಾರ, ರಮೇಶ ನಾಯಕ, ಸೈಯದ್‌ ಖಾಜಾ, ಸಂಗೀತಾ ಪೋಚಂಪಳ್ಳಿ, ಶಿವಲೀಲಾ ಕೋರಿ, ಶಿವಲೀಲಾ ಕೂಡ್ಲಿ, ಸಂಗೀತಾ ಮಠಪತಿ, ಗೌರಮ್ಮ ಪಂಚಮs್, ರೇಣುಕಾ ಬಿರಾದಾರ, ಅಂಬಿಕಾ ಮಹಾಗಾಂವೆ, ಎಚ್.ಕೆ.ಜ್ಯೋತಿ, ಸುಮಂಗಲಾ, ಮಂಗಲಾ, ಭವಾನಿ ಠಾಕೂರ್‌ ಇದ್ದರು.

ಸಂಗೀತಾ, ಕಲಾವತಿ ಪ್ರಾರ್ಥಿಸಿದರು. ಶಶಿಕಲಾ ಸ್ವಾಗತಿಸಿದರು. ಸಂಸ್ಥೆ ಅಧ್ಯಕ್ಷ ಶಾಂತವೀರ ಎನ್‌.ಯಲಾಲ್ ಪ್ರಾಸ್ತಾವಿಕ ಮಾತನಾಡಿದರು. ಪೂಜಾ ಮಹಾಗಾಂವ್‌ ಮತ್ತು ಶಿವಾನಿ ನಿರೂಪಿಸಿದರು. ಶಶಿಕಲಾ ಕೆ.ಬಿರಾದಾರ್‌ ವಂದಿಸಿದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.