ಸರ್ಕಾರಿ ಆಸ್ಪತ್ರೆ ಪ್ರಾಂಗಣದಲ್ಲಿ ವಾಹನ ನಿಲುಗಡೆಗೆ ಬ್ರೇಕ್‌

ಶೇ.90 ವಾಹನ ನಿಲುಗಡೆ ಸ್ಥಗಿತ

Team Udayavani, Jul 25, 2019, 10:14 AM IST

25-JUly-5

ಹುಮನಾಬಾದ: ಸಾರ್ವಜನಿಕ ಆಸ್ಪತ್ರೆ ಪ್ರಾಂಗಣದಲ್ಲಿ ಅನಧಿಕೃತ ಬೈಕ್‌ ನಿಲುಗಡೆಗೆ ಬ್ರೇಕ್‌ ಹಾಕಿದ ನಂತರ ಕಂಡು ಬಂದ ದೃಶ್ಯ.

ಹುಮನಾಬಾದ: ಪಟ್ಟಣದ ಸರ್ಕಾರಿ ಆಸ್ಪತ್ರೆ ಪ್ರಾಂಗಣದಲ್ಲಿ ವಾಹನಗಳ ಅನಧಿಕೃತವಾಗಿ ನಿಲುಗಡೆಗೆ ಬ್ರೇಕ್‌ ಹಾಕಲಾಗಿದೆ. ಅಷ್ಟುಕ್ಕೂ ನಿಯಮ ಮೀರಿ ಯಾರಾದರೂ ನಿಲ್ಲಿಸಿದರೆ ಪೊಲೀಸರು ಜಪ್ತಿ ಮಾಡಿ ದಂಡ ಹಾಕುತ್ತಿರುವ ಕಾರಣ ಶೇ.90ರಷ್ಟು ವಾಹನ ನಿಲುಗಡೆ ಸದ್ಯ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಆಸ್ಪತೆ ಸಿಬ್ಬಂದಿ ನೆಮ್ಮದಿಯಿಂದ ಕೆಲಸ ಮಾಡಲು ಅನುಕೂಲವಾಗಿದೆ.

ಆಸ್ಪತ್ರೆಗೆ ರೋಗಿಗಳನ್ನು ವಾಹನದಲ್ಲಿ ಕರೆದುಕೊಂಡು ಬರುವುದು ಸಹಜ. ಅದೇ ಉದ್ದೇಶಕ್ಕಾಗಿ ಬಂದರೇ ಈ ಸಮಸ್ಯೆ ಉದ್ಭವ ಆಗುತ್ತಿರಲಿಲ್ಲ. ಆದರೆ ಇಲ್ಲಿ ನಿಲ್ಲುವ ವಾಹನಗಳು ಮತ್ತು ರೋಗಿಗಳಿಗೆ ಯಾವುದೇ ಸಂಬಂಧ ಇಲ್ಲದಿರುವುದೇ ದೊಡ್ಡ ಸಮಸ್ಯೆಯಾಗಿತ್ತು. ವೈಯಕ್ತಿಕ ಕೆಲಸಕ್ಕೆ ಊರಿಗೆ ಹೋಗುವವರೆಲ್ಲ ತಮ್ಮ ವಾಹನವನ್ನು ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿದರೆ ಶುಲ್ಕ ಪಾವತಿಸಬೇಕಾಗುತ್ತದೆ ಎನ್ನುವ ಕಾರಣಕ್ಕೆ ಆಸ್ಪತ್ರೆಯಲ್ಲಿ ನಿಲ್ಲಿಸುತ್ತಿದ್ದರು. ಕಾರು, ಬೈಕ್‌ ಸೇರಿದಂತೆ ವಿವಿಧ ವಾಹನಗಳನ್ನು ಎಲ್ಲಿ ಬೇಕಲ್ಲಿ ಬೇಕಾಬಿಟ್ಟಿಯಾಗಿ ನಿಲ್ಲಿಸುತ್ತಿದ್ದರು. ಜತೆಯಲ್ಲಿ ಅದೆಷ್ಟೋ ಕಾರು ಮತ್ತಿತರ ವಾಹನಗಳು ರಾತ್ರಿಹೊತ್ತು ಅಲ್ಲೇ ನಿಲ್ಲುತ್ತಿದ್ದವು. ಇದರಿಂದ ತುರ್ತು ಚಿಕಿತ್ಸೆಗೆ ಬರುವ ರೋಗಿಗಳು ಮತ್ತು ಸಿಬ್ಬಂದಿಗೆ ತೀವ್ರ ತೊಂದರೆಯಾಗುತ್ತಿತ್ತು. ಈ ಹಿಂದೆ ಅದೆಷ್ಟೋ ಬಾರಿ ಮನವಿ ಮಾಡಿದರೂ ಪ್ರ್ರಯೋಜನವಾಗಿರಲಿಲ್ಲ. ಸಮಸ್ಯೆ ಇತ್ಯರ್ಥಕ್ಕಾಗಿ ಸಿಪಿಐ ಜೆ.ಎಸ್‌.ನ್ಯಾಮಗೌಡರ, ಸಂಚಾರ ಪಿಎಸ್‌ಐ ಬಸವರಾಜ ಚಿತ್ತಕೋಟಾ ಹಾಗೂ ಸಿಬ್ಬಂದಿ ಸಹಯೋಗದೊಂದಿಗೆ ಈಚೆಗೆ ಕೈಗೊಂಡ ಕಾರ್ಯಾಚರಣೆ ಪರಿಣಾಮ ಆಸ್ಪತ್ರೆ ಪಾಂಗಣದಲ್ಲಿ ನಿಲ್ಲುವ ಬೈಕ್‌ ಮತ್ತು ಕಾರಗಳನ್ನು ಜಪ್ತಿ ಮಾಡಿ ದಂಡ ವಿಧಿಸಿದ್ದಾರೆ. ಹಾಗಾಗಿ ಅನಧಿಕೃತ ವಾಹನಗಳ ನಿಲುಗಡೆ ಶೇ.95ರಷ್ಟು ಕಡಿಮೆಯಾಗಿದೆ. ಇದರಿಂದ ಸಿಬ್ಬಂದಿ ನೆಮ್ಮದಿಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ.

ಕಾರು, ಬೈಕ್‌ ನಿಲ್ಲಿಸುವವರ ವಿರೋಧಿಗಳು ಖಂಡಿತ ಅಲ್ಲ. ಸಾರ್ವಜನಿಕ ಆಸ್ಪತ್ರೆ ಆಗಿರುವುದರಿಂದ ಅದರಲ್ಲೂ ವಿಶೇಷವಾಗಿ ಆಸ್ಪತ್ರೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದೆ. ಮೇಲಿಂದ ಮೇಲೆ ಸಂಭವಿಸುವ ರಸ್ತೆ ಅಪಘಾತ ಇತ್ಯಾದಿ ಕಾರಣ ರೋಗಿಗಳ ತುರ್ತು ಚಿಕಿತ್ಸೆ ಕೈಗೊಳ್ಳಬೇಕಾಗುತ್ತದೆ. ಆ ವೇಳೆ ರೋಗಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಆಗುವ ತೊಂದರೆ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಹಿತದೃಷ್ಟಿ ಇಟ್ಟುಕೊಂಡು ನಡೆಸುತ್ತಿರುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು.
ಡಾ| ನಾಗನಾಥ ಹುಲ್ಸೂರೆ
ಮುಖ್ಯ ಆರೋಗ್ಯ ಅಧಿಕಾರಿ

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.