ವಚನ ಸಾಹಿತ್ಯದಲ್ಲಿದೆ ಸಮಸ್ಯೆಗೆ ಪರಿಹಾರ

ಯಲಾಲ್ ಶಿಕ್ಷಣ ದತ್ತಿ ಸರ್ವೋದಯ ಕಾಲೇಜಿನಲ್ಲಿ ಶಿಂಪಿ ಲಿಂಗಣ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ

Team Udayavani, Aug 31, 2019, 4:14 PM IST

31-Agust-33

ಹುಮನಾಬಾದ: ಯಲಾಲ್ ಶಿಕ್ಷಣ ದತ್ತಿ ಸರ್ವೋದಯ ಪದವಿ ಕಾಲೇಜಿನಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಗುಂಡಪ್ಪ ಕುಂಬಾರ ಉದ್ಘಾಟಿಸಿದರು.

ಹುಮನಾಬಾದ: ವಚನ ಸಾಹಿತ್ಯದಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾವಿದೆ. ವಿದ್ಯಾರ್ಥಿಗಳು ಅವುಗಳನ್ನು ಕೇವಲ ಕಂಠ ಪಾಠಕ್ಕೆ ಸೀಮಿತವಾಗಿಸದೇ ಆಳ ಅರ್ಥೈಸಿಕೊಂಡು ನಿಜ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಜೀವನ ಸಾರ್ಥಕ ಮಾಡಿಳ್ಳಬೇಕು ಎಂದು ಸಾಹಿತಿ ತುಕಾರಾಮ ಬೈನೋರ್‌ ಹೇಳಿದರು.

ಪಟ್ಟಣದ ಯಲಾಲ್ ಶಿಕ್ಷಣ ದತ್ತಿ ಸರ್ವೋದಯ ಪದವಿ ಕಾಲೇಜಿನಲ್ಲಿ ಶುಕ್ರವಾರ ಸುತ್ತೂರು ಮಠದ ಡಾ|ರಾಜೇಂದ್ರ ಸ್ವಾಮೀಜಿ ಜನ್ಮದಿನ ಆಚರಣೆ ಮತ್ತು ವಚನ ದಿನಾಚರಣೆ ನಿಮಿತ್ತಗ ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ದಿ. ಶಿಂಪಿ ಲಿಂಗಣ್ಣ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಸವಣ್ಣನವರ ಕಾಯಕ ಮಂತ್ರಕ್ಕೆ ಭಾರತ ದೇಶ ಮಾತ್ರವಲ್ಲದೇ ವಿಶ್ವದ ಅದೆಷ್ಟೋ ರಾಷ್ಟ್ರಗಳು ಕಲ್ಯಾಣದತ್ತ ಆಕರ್ಷಿತರಾಗಲು ಸಾಧ್ಯವಾಯಿತು. ಅದೇ ಮೋಳಿಗೆ ಮಾರಯ್ಯ ಸೇರಿದಂತೆ ಅರಸರು ತಮ್ಮ ವೈಭೋಗದ ಜೀವನಕ್ಕೆ ಇತಿಶ್ರೀ ಹೇಳಿ ಕಾಯಕ ಮಂತ್ರಕ್ಕೆ ಶರಣಾದರು. ಬಸವಣ್ಣವರ ಕಳಬೇಡ ಕೊಲಬೇಡ ಸಪ್ತಸೂತ್ರಗಳು ಅವರನ್ನು ವಿಶ್ವಗುರುವನ್ನಾಗಿಸಿದವು ಎಂದು ಹೇಳಿದರು.

ನಿವೃತ್ತ ಉಪನ್ಯಾಸಕ ಗುಂಡಪ್ಪ ಕುಂಬಾರ ಮಾತನಾಡಿ, ತನ್ನ ಸರಳ ಸಜ್ಜನಿಕೆ, ಕರ್ತವ್ಯ ನಿಷ್ಠೆ, ಕಾಯಕ ಮತ್ತು ದಾಸೋಹ ಮನೋಭಾವದಿಂದ ಬಸವಣ್ಣ ವಿಶ್ವಕ್ಕೆ ಅಣ್ಣನಾದರು. ಶರಣೆ ಮಹಾದೇವಿ ಇಡೀ ಶರಣ ಸಂಕುಲಕ್ಕೆ ಮಾತ್ರವಲ್ಲದೇ ವಿಶ್ವಕ್ಕೇ ಅಕ್ಕ ಎಂದೆನಿಸಿಕೊಂಡಳು. 12ನೇ ಶತಮಾನದ ಅನುಭವವೇ ಈಗ ಪಾರ್ಲಿಮೆಂಟ್ ಆಗಿ ಪರಿವರ್ತನೆಯಾಗಿದೆ. ಜಾತಿ, ವರ್ಗ, ವರ್ಣ ರಹಿತ ಕಲ್ಯಾಣ ರಾಜ್ಯ ನಿರ್ಮಾಣ ಬಸವಾದಿ ಶರಣರ ಗುರಿಯಾಗಿತ್ತು. ಅಂತೆಯೇ ಮಾದಾರ ಚೆನ್ನಯ್ಯ, ಸಮಗಾರ ಹರಳಯ್ಯ, ಹಡಪದ ಅಪ್ಪಣ್ಣ ಒಳಗೊಂಡಂತೆ ಎಲ್ಲ ಶರಣರನ್ನು ಒಪ್ಪಿ ಅಪ್ಪಿಕೊಳ್ಳುವ ಸಮಾನತೆ ಮತ್ತು ಸೌಹಾರ್ದತೆ ಸಮಾಜ ನಿರ್ಮಿಸಿದರು ಎಂದು ಹೇಳಿದರು.

ಉಪನ್ಯಾಸಕಿ ಗೌರಮ್ಮ ವಿರಕ್ತಮs್ ಮಾತನಾಡಿ, ಬಸವಾದಿ ಶರಣರ ವಚನಗಳು ಪ್ರತಿಯೊಬ್ಬರ ಜೀವನಕ್ಕೆ ದಾರಿ ದೀಪಗಳಾಗಿವೆ. ಯುವ ಪೀಳಿಗೆ ದುಶ್ಚಟಕ್ಕೆ ಬಲಿಯಾಗಿ ವ್ಯರ್ಥ ಹಾಳಾಗದೇ ಉತ್ತಮ ಸಂಸ್ಕಾರ ಮೈಗೂಡಿಸಿಕೊಂಡು ಜೀವನ ಸಾರ್ಥಕಪಡಿಸಿಕೊಳ್ಳಬೇಕು. ಮೌಡ್ಯದಿಂದ ಹೊರಬರದ ಜನರಿಗೆ ವಚನಗಳಲ್ಲಿನ ಸಾರ ಪರಿಚಯಿಸಿ ಬದುಕುವ ಮಾರ್ಗ ತೋರಿಸಿಕೊಡಬೇಕು. ಸ್ತ್ರೀ ಸ್ವಾತಂತ್ರ್ಯ ಹೋರಾಟ ಆರಂಭಗೊಂಡಿರುವುದು ಈ ಶತಮಾನದಲ್ಲಿ ಅಲ್ಲ, ಅಕ್ಕಮಹಾದೇವಿ ನೇತೃತ್ವದಲ್ಲಿ 12ನೇ ಶತಮಾನದಲ್ಲೇ ಆರಂಭಗೊಂಡಿತ್ತು. ಇಂದಿನ ಯುವತಿಯರು ಮಹಾದೇವಿಯಕ್ಕಳನ್ನು ಆದರ್ಶವಾಗಿ ಇಟ್ಟುಕೊಳ್ಳಬೇಕು ಎಂದರು.

ಯಲಾಲ್ ಶಿಕ್ಷಣ ದತ್ತಿ ಪ್ರಜ್ವಲ್ ಯಲಾಲ್ ಮಾತನಾಡಿ, ಅಜ್ಞಾನ, ಮೋಸ, ವಂಚನೆಗಳಿಂದ ತತ್ತರಿಸಿಹೋದ ಇಂದಿನ ಯುವ ಪೀಳಿಗೆಗೆ 12ನೇ ಶತಮಾನದ ವಚನ ಸಾಹಿತ್ಯವೇ ಮತ್ತೆ ಕೈಹಿಡಿದು ಎತ್ತಲಿದೆ. ತನ್ಮೂಲಕ ಯುವ ಪೀಳಿಗೆ ಎಚ್ಚತ್ತುಕೊಂಡು ಜೀವನದ ನೈಜ ಸಾರ್ಥಕತೆ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಅಖೀಲ ಭಾರತ ಶರಣಸಾಹಿತ್ಯ ಪರಿಷತ್‌ ಅಧ್ಯಕ್ಷ ಎಂ.ಎಸ್‌.ಉಪ್ಪಿನ್‌ ಮಾತನಾಡಿ, ಪ್ರೌಢ ಮತ್ತು ಪದವಿ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಹಮ್ಮಿಕೊಂಡಿದ್ದು ಅರ್ಥಪೂರ್ಣವಾಯಿತು. ಅರ್ಥೈಸಿಕೊಳ್ಳದ ಯಾರದೋ ಮುಂದೆ ಗಂಟೆಗಟ್ಟಲೇ ಭಾಷಣ ಮಾಡುವ ಬದಲು ನಾಡಿನ ಭವಿಷ್ಯಗಳಾಗಲಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದು ಸಾರ್ಥಕವಾಯಿತು ಎಂದರು. ಶೋಭಾ ಠಾಕೂರ ಪ್ರಾರ್ಥಿಸಿದರು. ಗಣೇಶಸಿಂಗ್‌ ತಿವಾರಿ ಸ್ವಾಗತಿಸಿದರು. ಸುರೇಶಕುಮಾರ ಬಪ್ಪಣ್ಣ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.