ಯುವ ಬ್ರಿಗೇಡ್‌ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯ


Team Udayavani, Oct 21, 2019, 6:22 PM IST

21-October-24

ಶಶಿಕಾಂತ ಕೆ.ಭಗೋಜಿ
ಹುಮನಾಬಾದ:
ಪಟ್ಟಣದ ಯುವ ಬ್ರಿಗೇಡ್‌ನ‌ ಯುವಕರು ಜಿಲ್ಲಾದ್ಯಂತ ಸ್ವಯಂ ಪ್ರೇರಣೆಯಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಮೂಲಕ ಸ್ವತ್ಛ ಭಾರತ ಅಭಿಯಾನವನ್ನು ಬಲಪಡಿಸಿದ್ದಾರೆ. ಈ ಮೂಲಕ ವ್ಯರ್ಥ ಕಾಲಹರಣ ಮಾಡುವ ಯುವ ಜನಾಂಗಕ್ಕೆ ಮಾದರಿಯಾಗಿದ್ದಾರೆ.

ಪಟ್ಟಣದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಮಾರ್ಗದರ್ಶನದಲ್ಲಿ 2017ರಲ್ಲಿ ಅಸ್ತಿತ್ವಕ್ಕೆ ಬಂದಿರುವ ಸಂಸ್ಥೆ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿದ್ದು, ಅನೈರ್ಮಲ್ಯವನ್ನು ಬೇರು ಸಮೇತ ಕಿತ್ತೆಸೆಯುವ ಕಾರ್ಯಕ್ಕೆ ಕೈ ಹಾಕಿದೆ. ವೇದಿಕೆಗಳ ಮೇಲೆ ಮೈಕ್‌ ಹಿಡಿದು ಭಾಷಣ ಮಾಡುವುದರಿಂದ ಈ ಸಮಸ್ಯೆ ನಿರ್ಮೂಲನೆ ಆಗುವುದಿಲ್ಲ. ವೈಯಕ್ತಿಕ ಪ್ರತಿಷ್ಠೆ ಬದಿಗೊತ್ತಿ ರಾಷ್ಟ ಪ್ರಗತಿಯನ್ನು ಪ್ರತಿಷ್ಠೆಯಾಗಿಸಿಕೊಂಡಾಗಲೇ ದೇಶದ ನಿಜವಾದ ಅಭಿವೃದ್ಧಿ ಸಾಧ್ಯ ಎಂಬುದನ್ನು ಅರಿತ 50 ಸದಸ್ಯರನ್ನು ಒಳಗೊಂಡ ತಂಡ ನಿರಂತರ ಕಾರ್ಯದಲ್ಲಿ ತೊಡಗಿದೆ.

ಒಂದು ವರ್ಷದ ಹಿಂದೆ ಪಟ್ಟಣದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಗಿಡಗಂಟೆ ಸೇರಿದಂತೆ ಇತರೆ ತ್ಯಾಜ್ಯ ತೆರವುಗೊಳಿಸಿತ್ತು. ಅದಾದ ನಂತರ ಮಾಣಿಕನಗರದಲ್ಲಿನ ಮಾಣಿಕ ಸರೋವರದಲ್ಲಿ ಸಂಗ್ರಹಗೊಂಡ ತ್ಯಾಜ್ಯವನ್ನು ಈ ತಂಡ ಸ್ವತ್ಛಗೊಳಿಸಿತ್ತು. ಭವಾನಿ ದೇವಸ್ಥಾನ ಪ್ರಾಂಗಣ, ವೀರಭದ್ರೇಶ್ವರ ದೇವಸ್ಥಾನ ಪ್ರಾಂಗಣ, ಈಚೆಗಷ್ಟೇ ಡಾ|ಬಿ. ಆರ್‌.ಅಂಬೇಡ್ಕರ್‌ ವೃತ್ತ ಸಮೀಪದ ಜೋಡು ಬಸವಣ್ಣ ಕಟ್ಟೆ ಆಸುಪಾಸು ಸಂಗ್ರಹಗೊಂಡ ತ್ಯಾಜ್ಯ ತೆರವುಗೊಳಿಸಿದ್ದರು.

ಸರ್ಕಾರಿ ಆಸ್ಪತ್ರೆ ಪ್ರಾಂಗಣ, ಮಾಣಿಕನಗರದ ಸಂಗಮ ಪುಷ್ಕರಣಿ ಸೇರಿದಂತೆ ಅನೇಕ ಕಡೆ ಇಂಥ ಕೆಲಸ ಮಾಡಿ ಪ್ರಜ್ಞಾವಂತ ನಾಗರಿಕರ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಈ ತಂಡದ 50ಕ್ಕೂ ಅಧಿಕ ಕಾರ್ಯಕರ್ತರು ರವಿವಾರ, ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಅಲ್ಲಲ್ಲಿ ಬಿದ್ದ ದೇವರ ಚಿತ್ರಗಳನ್ನು ಸಂಗ್ರಹಿಸಿ ಗುಂಡಿ ತೋಡಿ ಹೂಳುವ ಮೂಲಕ ಅಲ್ಲಿ ಸಸಿಯನ್ನೂ ನೆಟ್ಟಿದ್ದಾರೆ.

ಚಕ್ರವರ್ತಿ ಜತೆ ಕೈ ಜೋಡಿಸಿದ ತಂಡ: ರಾಜ್ಯದಲ್ಲಿ ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದಲ್ಲಿ 2018ರಲ್ಲಿ ನಡೆದ ನದಿ ಸ್ವತ್ಛತೆ ವೇಳೆ ಕಾವೇರಿ, ಭೀಮೆ ಸೇರಿದಂತೆ ರಾಜ್ಯದ ಇತರೆ ನದಿಗಳ ಸ್ವತ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಸೂಲಿಬೆಲೆ ಅವರ ವಿಶ್ವಾಸಕ್ಕೂ ಪಾತ್ರವಾಗಿದೆ.

ಕರೆದಾಗ ರಾಜ್ಯದ ಯಾವುದೇ ಮೂಲೆಗೆ ಬಂದು ನನ್ನೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈ ಹುಮನಾಬಾದ (ಜಯಸಿಂಹನಗರ) ಯುವಕರ ಕಾರ್ಯ ಪ್ರಶಂಸನೀಯ ಎಂದು ನಗರದಕ್ಕೆ ಆಗಮಿಸಿದ ಸಂದರ್ಭದಲ್ಲಿ ಈ ತಂಡವನ್ನು ಶ್ಲಾಘಿಸಿದ್ದರು.
ಈ ಕಾರ್ಯದಲ್ಲಿ ಪ್ರಮುಖ ಪದಾ ಧಿಕಾರಿಗಳಾದ ತಾಲೂಕು ಸಂಚಾಲಕ ಪ್ರಶಾಂತ ಶೇರಿಕಾರ, ಸಹ ಸಂಚಾಲಕ ಅಮೀತ ವರ್ಮಾ, ಕಾಶಿನಾಥ ರಾಂಪೂರೆ, ವಿಕ್ರಂ ಶಂಭುಶಂಕರ, ರಂಜಿತ್‌ ಮೇತ್ರೆ, ಕರಬಸಪ್ಪ ಛತ್ರಿ, ದಿಲೀಪ ಪಂಚಾಳ, ಅನೀಲರೆಡ್ಡಿ, ಬಲರಾಮ ಪೋಲ್ದಾಸ್‌, ಸಂತೋಷ ಜಮಾದಾರ, ಗೋಪಿ ಗುಪ್ತಾ, ಬಸವರಾಜ ಅಷ್ಟಗಿ, ನಿಲೇಶ ಪುಟಾಣಗಾರ, ಪ್ರಕಾಶ ಬಾವಗಿ, ಪ್ರಸಾದ ಸ್ವಾಮಿ, ಸುದರ್ಶ ಕಾಳಗಿ, ಬಾಲರೆಡ್ಡಿ ಯಾಚಾ, ಮಾಣಿಕ ರಾಜನಾಳೆ, ಅಶೊತೋಷ ಜಾಜಿ ಸೇರಿದಂತೆ 50ಕ್ಕೂ ಅಧಿಕ ಯುವಕರ ತಂಡ ಈ ಕಾರ್ಯದಲ್ಲಿ ತೊಡಗಿದೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.