ಶೆಡ್‌ ವ್ಯಾಪಾರಿಗಳಿಗೆ ಅತಂತ್ರ ಸ್ಥಿತಿ

ಹೊಸ ಅಂಗಡಿ ಪೂರ್ಣಗೊಳ್ಳುವವರೆಗೆ ಅವಕಾಶ ನೀಡಲು ಮನವಿ

Team Udayavani, Dec 23, 2019, 3:30 PM IST

23-December-14

ಶಶಿಕಾಂತ ಕೆ. ಭಗೋಜಿ
ಹುಮನಾಬಾದ:
ಪುರಸಭೆ ಏಕಾಏಕಿ ಶೆಡ್‌ ತೆರವುಗೊಳಿಸಲು ಮುಂದಾದ ಹಿನ್ನೆಲೆಯಲ್ಲಿ ಕಲ್ಲೂರ ರಸ್ತೆಯಲ್ಲಿ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳಿಗೆ ಈಗ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ಪ್ರವಾಸಿ ಮಂದಿರದಿಂದ ಕೆಇಬಿ ಬೈಪಾಸ್‌ ವರೆಗಿನ ರಸ್ತೆ ಬಲಬದಿ ಸಣ್ಣಪುಟ್ಟ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳಿಗೆ ಕಲ್ಲೂರ ರಸ್ತೆಯಲ್ಲಿ ಸ್ಥಳಾವಕಾಶ ಕಲ್ಪಿಸಲಾಗಿತ್ತು. ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಗಣ್ಯರು ಮತ್ತು ಅಧಿಕಾರಿಗಳ ಸಲಹೆ ಮೇರೆಗೆ ಸ್ವಯಂ ಪ್ರೇರಣೆಯಿಂದ ಕಳೆದ ವರ್ಷ ಶೆಡ್‌ ತೆರವುಗೊಳಿಸಿ ತಾತ್ಕಾಲಿಕವಾಗಿ ಕಲ್ಲೂರ ರಸ್ತೆಯಲ್ಲಿ ವ್ಯಾಪಾರ ಮಾಡಿ ಬದುಕು ಸಾಗಿಸುತ್ತಿದ್ದರು. ಪುರಸಭೆ ಈಗ ಶೆಡ್‌ ತೆರವುಗೊಳಿಸಲು ಮುಂದಾಗಿದೆ. ಇದರಿಂದ ವ್ಯಾಪಾರಿಗಳಿಗೆ ಅತಂತ್ರ ಸ್ಥಿತಿ ಎದುರಾಗಿದೆ.

ಶೆಡ್‌ ಹಾಕಿದ ಕೆಲವೇ ತಿಂಗಳಲ್ಲಿ ತೆರವುಗೊಳಿಸುವಂತೆ ಒತ್ತಡ ಹೇರಿದ್ದರು. ಗಣ್ಯರಲ್ಲಿ ಮೊರೆ ಹೋಗಿದ್ದರಿಂದ ತಾತ್ಕಾಲಿಕವಾಗಿ ಮುಂದೂಡಿದ್ದರಿಂದ ಬಡ ವ್ಯಾಪಾರಿಗಳು ಕೆಲವು ತಿಂಗಳ ಕಾಲ ನಿಶ್ಚಿಂತೆಯಿಂದ ಇದ್ದರು. ಆದರೆ ಮತ್ತೆ ಈಗ ಶೆಡ್‌ ತೆರವುಗೊಳಿಸಿ ಇಲ್ಲದಿದ್ದರೆ ಜೆಸಿಬಿ ಮೂಲಕ ತೆರವುಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ನಾವು ಇದನ್ನೇ ನಂಬಿ ಜೀವನ ನಿರ್ವಹಣೆ ಮಾಡುತ್ತಿದ್ದೇವೆ. ತೆರವುಗೊಳಿಸಿದರೆ ಮುಂದಿನ ಗತಿ ಏನು ಎಂಬುದು ವ್ಯಾಪಾರಿಗಳ ಅಳಲು. ವೀರಭದ್ರೇಶ್ವರ ಅಗ್ನಿಕುಂಡ ಆಸುಪಾಸು ನಿರ್ಮಿಸಲಾಗುತ್ತಿರುವ ಹೊಸ ಅಂಗಡಿಗಳಲ್ಲಿ ನಮಗೂ ಅಂಗಡಿ ನೀಡುವುದಾಗಿ ಗೌಡರು ತಿಳಿಸಿದ್ದಾರೆ. ಕೊಟ್ಟೇ ಕೊಡುತ್ತಾರೆ.

ಅದೇ ಭರವಸೆ ಮೇಲೆ ಈವರೆಗೆ ಇಲ್ಲಿ ತತ್ಕಾಲಿಕವಾಗಿ ಅಂಗಡಿ ಹಾಕಿಕೊಂಡಿದ್ದೇವೆ. ಈಗ ಏಕಾಏಕಿ ತೆರವುಗೊಳಿಸಿದರೆ ಇದನ್ನೇ ನಂಬಿ ಬದುಕುತ್ತಿರುವ ನಮ್ಮ ಹಾಗೂ ನಮ್ಮನ್ನೇ ನಂಬಿರುವ ಕುಟುಂಬದ ಹೊಟ್ಟೆ ಪಾಡು ಏನು? ತೆರವುಗೊಳಿಸಲು ನಮ್ಮದೇನೂ ಆಕ್ಷೇಪವಿಲ್ಲ. ಆದರೆ ಜಾತ್ರೆ ಮುಗಿದು ಅಗ್ನಿಕುಂಡ ಪಕ್ಕದಲ್ಲಿನ ಅಂಗಡಿಗಳು ಸಿದ್ಧಗೊಳ್ಳುವರೆಗೆ ಇಲ್ಲೇ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿದರೆ ಅನುಕೂಲವಾಗುತ್ತದೆ ಎಂಬುದು ವ್ಯಾಪಾರಿಗಳ ಅನಿಸಿಕೆ. ಅಭಿವೃದ್ಧಿ ವಿಷಯದಲ್ಲಿ ಯಾರೂ ಹಸ್ತಕ್ಷೇಪ ಮಾಡುವುದು ತರವಲ್ಲ. ಅದನ್ನು ಪ್ರತಿಯೊಬ್ಬರು ಒಪ್ಪಲೇಬೇಕು. ಆದರೆ ಉಳ್ಳವರಾಗಿದ್ದರೆ ಚಿಂತೆ ಇರಲಿಲ್ಲ. ಅಂಗಡಿ ತೆರವುಗೊಂಡರೆ ಅವರ ಜೀವನ ನಿರ್ವಹಣೆ ಮೇಲೆ ಪರಿಣಾಮ ಉಂಟಾಗುತ್ತದೆ. ಅವರ ಬೇಡಿಕೆ ಪ್ರಕಾರ ಮಾನವೀಯತೆ ದೃಷ್ಟಿಯಿಂದ ವೀರಭದ್ರೇಶ್ವರ ಅಗ್ನಿಕುಂಡ ಪಕ್ಕದ ಅಂಗಡಿ ನಿರ್ಮಾಣಗೊಳ್ಳುವರೆಗೆ ಇಲ್ಲೇ ಅವಕಾಶ ಕಲ್ಪಿಸಿದರೆ ಅನುಕೂಲವಾಗುತ್ತದೆ ಎಂಬುದು ನಿರ್ಗತಿಕರು ಹಾಗೂ ಬಡವರ ಹಿತಚಿಂತಕರ ಅಂಬೋಣ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.