ಡಿಸಿ ಕಚೇರಿ ಮುತ್ತಿಗೆಗೆ ರೈತ ಸಂಘ ನಿರ್ಧಾರ

ಕಬ್ಬಿನ ಬಾಕಿ-ಬೆಂಬಲ ಬೆಲೆ ಹಣ ಚುಕ್ತಾ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹ

Team Udayavani, Apr 14, 2019, 3:02 PM IST

14-April-20

ಹುಮನಾಬಾದ: ಭವಾನಿ ದೇವಸ್ಥಾನದಲ್ಲಿ ನಡೆದ ರೈತ ಸಂಘದ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿದರು.

ಹುಮನಾಬಾದ: ಕಬ್ಬಿನ ಬಾಕಿ ಪಾವತಿಸುವುದು ಒಳಗೊಂಡಂತೆ ಐದಕ್ಕೂ ಅ ಧಿಕ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಏ.18ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಹೇಳಿದರು.

ಪಟ್ಟಣದ ಭವಾನಿ ದೇವಸ್ಥಾನದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಾವತಿಸದೇ ಬಾಕಿ ಉಳಿದುಕೊಂಡ ಕಬ್ಬಿನ ಹಣ, ತೊಗರಿ ಬೆಂಬಲ
ಬೆಲೆ, ಬರ ಪರಿಹಾರ, ಬೆಳೆ ವಿಮೆ, ದನ ಕರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ನಡೆಸಲಾಗುವ ಜಿಲ್ಲಾ
ಧಿಕಾರಿ ಕಚೇರಿಗೆ ಮುತ್ತಿಗೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಸಾವಿರಕ್ಕೂ ಅ ಧಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಮೇವು ಖರೀದಿ ಗುತ್ತಿಗೆದಾರರಿಗೆ ವಹಿಸಿಕೊಡುವುದರಿಂದ ಸರ್ಕಾರದ ಹಣ ಅಧಿಕಾರಿ ಮತ್ತು ಗುತ್ತಿಗೆದಾರರ ಜೇಬಿಗೆ ಭರ್ತಿ
ಆಗುತ್ತಿದೆ. ಆದ್ದರಿಂದ ಈ ಬಾರಿ ನೇರವಾಗಿ ರೈತರ ಖಾತೆಗೆ ಜಮಾ ಆಗವಂತೆ ನೋಡಿಕೊಳ್ಳಲು ಮುತ್ತಿಗೆ ಸಂದರ್ಭಧಲ್ಲಿ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ರೈತರ ಪಾಲಿನ ಭಯೋತ್ಪಾದಕ: ಚಂದ್ರಶೇಖರ ಜಮಖಂಡಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಪ್ರತಿ ಟನ್‌ ಕಬ್ಬಿಗೆ 2,200 ರೂ. ಪಾವತಿಸಲಾಗುವುದು ಎಂದು
ಹೇಳಿ ಈಶ್ವರ ಖಂಡ್ರೆ ಮೋಸ ಮಾಡಿದ್ದಾರೆ. ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಯ ವಾರ್ಷಿಕ ಮಹಾಸಭೆಯಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳದಿರುವ ಕುರಿತು ಪ್ರಶ್ನಿಸಿದಾಗ ರೈತರನ್ನೇ
ಬೆದರಿಸಿದ್ದಾರೆ. ಖಂಡ್ರೆ ಒಂದು ರೀತಿಯಲ್ಲಿ ರೈತರ ಪಾಲಿಗೆ ಭಯೋತ್ಪಾದಕರಾಗಿದ್ದಾರೆ. ಅಂಥವರಿಗೆ ಜಿಲ್ಲೆಯ ರೈತರು ಹಾಲಿ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.ಸಂಘದ ಜಿಲ್ಲಾ ಅಧ್ಯಕ್ಷರನ್ನು ಹೊರತುಪಡಿಸಿ ಉಳಿದೆಲ್ಲರೂ
ಹಾಗೆ ಮಾಡಬೇಕೆಂದು ಧ್ವನಿಗೂಡಿಸಿದರು.

ತಾರಕಕ್ಕೇರಿದ ವಾಗ್ವಾದ: ಈ ಮಧ್ಯ ಸಂಘದ ಬಸವಕಲ್ಯಾಣ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಜಮಖಂಡಿ ಮಾತನಾಡಿ, ಸಂಘದ ಜಿಲ್ಲಾ ಘಟಕ ಅಧ್ಯಕ್ಷರು ಸಂಘವನ್ನು ತಮ್ಮ
ಖಾಸಗಿ ಎಂದು ಭಾವಿಸಿ, ತಮಗೆ ಬೇಕಾದವರಿಗೆ ಮಾತ್ರ ಸೂಕ್ತ ಸ್ಥಾನಮಾನ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಸಂಘದ ಎಲ್ಲ ತಾಲೂಕು ಘಟಕಗಳು ಒಂದೆಡೆಯಾದರೆ ಭಾಲ್ಕಿ ಮೂಲದವರಾದ ಜಿಲ್ಲಾ ಘಟಕ ಅಧ್ಯಕ್ಷರಾದ ಮಲ್ಲಿಕಾರ್ಜುನ ಸ್ವಾಮಿ ಸರ್ಕಾರದಲ್ಲಿ ಅಧಿಕಾರದಲ್ಲಿರುವವರ ಕುರಿತು ಚಕಾರ ಎತ್ತದೆ ಮೌನಕ್ಕೆ ಶರಣಾಗುವ ನಮ್ಮೆಲ್ಲರನ್ನು ಮೌನವಾಗಿ ಕೊಲ್ಲುತ್ತಿದ್ದಾರೆ. ಇಂಥ ಅಧ್ಯಕ್ಷರಿಂದ ರೈತರ ಸಮಸ್ಯೆ ಬಗೆಹರಿಯುವುದು ದೂರದ ಮಾತು, ಮತ್ತಷ್ಟು ಉಲ್ಬಣಗೊಳ್ಳುತ್ತವೆ. ಮೊದಲು ಅವರನ್ನು ಹುದ್ದೆಯಿಂದ ಉಚ್ಛಾಟಿಸುವಂತೆ ಆಗ್ರಹಿಸಿದರು. ಪರಸ್ಪರ ನಡೆದ ವಾಗ್ವಾದ ಕೈಕೈ
ಮಿಲಾಯಿಸುವ ಹಂತಕ್ಕೆ ತಲುಪಿದಾಗ ಸಂಘದ ಹುಮನಾಬಾದ ತಾಲೂಕು ಅಧ್ಯಕ್ಷ ಸತೀಶ ನನ್ನೂರೆ ಪರಿಸ್ಥಿತಿ ಶಾಂತಗೊಳಿಸಿದರು.

ರಾಜ್ಯ ಉಪಾಧ್ಯಕ್ಷ ಖಾಸೀಂ ಅಲಿ, ಔರಾದ ತಾಲೂಕು ಅಧ್ಯಕ್ಷ ಶ್ರೀಮಂತರಾವ್‌ ಬಿರಾದಾರ, ಸಿದ್ರಾಮಪ್ಪ ಬಾಲಕುಂದೆ, ಸಿದ್ದಣ್ಣ ಭೂಶೆಟ್ಟಿ, ಗುರುಲಿಂಗಪ್ಪ ಮೇಲ್ದೊಡ್ಡಿ, ವಿಶ್ವನಾಥರಾವ್‌ ಚಿಲಶೆಟ್ಟಿ, ಕರಬಸಪ್ಪ ಮಲಶೆಟ್ಟಿ, ಟಿಮೇತ್ರೆ, ಜಗನ್ನಾಥ ಪಾಂಚಾಳ, ವೈಜಪ್ಪ ನಿಡೋದೆ, ಅಣ್ಣಾರಾವ್‌ ಚಿಕ್ಕಪಾಟೀಲ, ಚನ್ನಬಸಪ್ಪ ಹುಚ್ಚೆ, ಎಂ.ಡಿ.ಖಾಜಾ ಮೈನೋದ್ದೀನ್‌, ರಿಯಾಜ್‌
ಪಟೇಲ ಇದ್ದರು.

ನನ್ನ ಅಧಿಕಾರ ಅವಧಿಯಲ್ಲಿ ಯಾರಿಗೂ ಅನ್ಯಾಯ ಮಾಡಿಲ್ಲ. ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಸಂಘದ ಜಿಲ್ಲಾ ಅಧ್ಯಕ್ಷನಾಗಿ ನಾನೇ ಮುಂದುವರಿಯಬೇಕೆಂಬ ಹುಚ್ಚು ಖಂಡಿತಾ ನನಗಿಲ್ಲ, ಏ.18ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಬಳಿಕ ಎಲ್ಲ ತಾಲೂಕು ಘಟಕಗಳಿಗೆ ನೂತನ ಅಧ್ಯಕ್ಷರನ್ನು ನಿಯೋಜಿಸಿದ ನಂತರ ಖುದ್ದು ನಾನೇ ನಿಂತು ಜಿಲ್ಲಾ ಘಟಕಕ್ಕೆ ಹೊಸ ಅಧ್ಯಕ್ಷರನ್ನು ನಿಯೋಜಿಸುತ್ತೇನೆ.
ಮಲ್ಲಿಕಾರ್ಜುನ ಸ್ವಾಮಿ,
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.