ವಿಶ್ವಾಸಕ್ಕೆ ಮಾದರಿ ಹಡಪದ ಅಪ್ಪಣ್ಣನವರು

ಕಾರ್ಯದರ್ಶಿಯಾಗಿ ನೇಮಿಸಿಕೊಂಡಿದ್ದರು ಬಸವಣ್ಣ •ಹಡಪದ ಸಮಾಜದಿಂದ 885ನೇ ಜಯಂತಿ ಆಚರಣೆ

Team Udayavani, Aug 14, 2019, 1:03 PM IST

14-AGUST-24

ಹುಮನಾಬಾದ: ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷ ಶಿವಶಂಕರ ಹಡಪದ ಮತ್ತುಪದಾಧಿಕಾರಿಗಳು, ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ ಅವರಿಗೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು.

ಹುಮನಾಬಾದ: ವಿಶ್ವಾಸಕ್ಕೆ ಇನ್ನೊಂದು ಹೆಸರೇ ಶರಣ ಹಡಪದ ಅಪ್ಪಣ್ಣನವರು. ಬಸವಣ್ಣನವರು ತಮ್ಮ ಖಾಸಗಿ ವಿಷಯದಲ್ಲೂ ಹಡಪದ ಅಪ್ಪಣ್ಣನವರ ಮೇಲೆ ಅತ್ಯಂತ ವಿಶ್ವಾಸ ಹೊಂದಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪದ ಸಂಗಮೇಶ ದೇವರು ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಹಡಪದ ಅಪ್ಪಣ್ಣ ಸಮಾಜ ಸಂಘ ಮಂಗಳವಾರ ಹಮ್ಮಿಕೊಂಡಿದ್ದ ಶರಣ ಹಡಪದ ಅಪ್ಪಣ್ಣನವರ 885ನೇ ಜಯಂತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಹಡಪದ ಅಪ್ಪಣ್ಣನವರ ಮೇಲೆ ಅತ್ಯಂತ ವಿಶ್ವಾಸ ಹೊಂದಿದ್ದ ಕಾರಣ, ಅನೇಕ ಶರಣರಿದ್ದರೂ ಆಪ್ತ ಕಾರ್ಯದರ್ಶಿಯನ್ನು ನೇಮಕ ಮಾಡಿಕೊಳ್ಳುವ ಪ್ರಸಂಗದಲ್ಲಿ ಅಪ್ಪಣ್ಣನವರನ್ನೇ ಆಯ್ಕೆ ಮಾಡಿಕೊಂಡಿದ್ದರು ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಡಪದ, ಗಾಣಿಗ, ಕಂಬಾರ, ಕುಂಬಾರ, ಅಕ್ಕಸಾಲಿಗ, ಮಡಿವಾಳ, ಸಮಗಾರ, ನೂಲುಗಾರ, ಕುರುಬ ಇವೆಲ್ಲ ಕಾಯಕದ ಹೆಸರೇ ಹೊರತು ಜಾತಿಗಳಲ್ಲ ಎಂದರು. ಎದ್ದ ತಕ್ಷಣ ಗಾಣಿಗರ ಮುಖ, ಹಡಪದರ ಮುಖ ನೋಡಿದರೆ ಕೆಲಸಗಳೆಲ್ಲವೂ ಕೆಡುತ್ತವೆ ಎಂಬುದು ಶುದ್ಧ ಅಪನಂಬಿಕೆ ಎಂದರು.

ನಮ್ಮ ಮನೆ ಹಿಂದೆ ಹಡಪದರು, ಎದುರಿಗೆ ಗಾಣಿಗರ ಮನೆ ಇದೆ. ಪ್ರತಿನಿತ್ಯ ಎದ್ದ ತಕ್ಷಣ ಅವರ ದರ್ಶನವೇ ಆಗುತ್ತದೆ. ಅವರ ದರ್ಶನ ಭಾಗ್ಯದಿಂದಲೇ ನಮ್ಮ ತಂದೆ ದಿ.ಬಸವರಾಜ ಪಾಟೀಲ ಅವರು ಮೂರು ಬಾರಿ ಸಚಿವರಾದರು. ಸಹೋದರ ರಾಜಶೇಖರ ಪಾಟೀಲ ಶಾಸಕ ಹುದ್ದೆಯೊಂದಿಗೆ ಸಂಪುಟ ದರ್ಜೆ ಸಚಿವರಾದರು. ಅವರ ಸಹೋದರ ನಾನೀಗ ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್‌ ಸದಸ್ಯನಾಗಿದ್ದೇನೆ. ನನ್ನ ಮತ್ತೂಬ್ಬ ಸಹೋದರ ಭಿಮರಾವ್‌ ಪಾಟೀಲ ಜಿಲ್ಲಾ ಸಹಕಾರ ಬ್ಯಾಂಕ್‌ ಉಪಾಧ್ಯಕ್ಷರಾಗಿದ್ದಾರೆ. ನಮ್ಮ ಪ್ರಕಾರ ಪಾಟೀಲ ಈ ಮಟ್ಟಕ್ಕೆ ಬೆಳೆಯಲು ಗಾಣಿಗರು ಮತ್ತು ಹಡಪದರ ಮನೆ ನಮ್ಮ ಅಕ್ಕಪಕ್ಕದಲ್ಲಿರುವುದೇ ಕಾರಣ. ಹಾಗೆ ಹೇಳಲು ಹೆಮ್ಮೆ ಎನಿಸುತ್ತದೆ ಎಂದರು.

ಸಂಘದ ತಾಲೂಕು ಘಟಕ ಅಧ್ಯಕ್ಷ ಶಿವಶಂಕರ ಹಡಪದ ಮಾತನಾಡಿ, ಡಾ|ಬಿ.ಆರ್‌.ಅಂಬೇಡ್ಕರ್‌ ಅವರು ಹೇಳಿದಂತೆ ಶಿಕ್ಷಣ-ಸಂಘಟನೆ-ಹೋರಾಟದಿಂದ ಮಾತ್ರ ಸಮುದಾಯದ ಸರ್ವಾಂಗೀಣ ಪ್ರಗತಿ ಸಾಧ್ಯ. ಈ ನಿಟ್ಟಿನಲ್ಲಿ ಕುಲ ಬಾಂಧವರು ತಮ್ಮ ಮಕ್ಕಳನ್ನು ಸಾಕ್ಷರರಾಗಿಸಬೇಕು ಎಂದರು. ಹಿಂದಿನ ಸರ್ಕಾರ ಅವಧಿಯಲ್ಲಿ ಹಡಪದ ಅಪ್ಪಣ್ಣ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತಾಗಲು ಸಿದ್ಧರಾಮಯ್ಯ ಅವರೇ ಪ್ರಮುಖ ಕಾರಣ ಎಂದರು. ತಾಲೂಕು ಕೇಂದ್ರದಲ್ಲಿ ಸಮುದಾಯ ಭವನಕ್ಕಾಗಿ 1ಎಕರೆ ಜಮೀನು, ಕಟ್ಟಡ ನಿರ್ಮಾಣಕ್ಕೆ ರೂ.25ಲಕ್ಷ ಅನುದಾನ ಬಿಡುಗಡೆಗೊಳಿಸಬೇಕು.

ಅವಮಾನಕರ ಪದ ಬಳಸುವವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರಬೇಕು. ನಮ್ಮ ಸಮಾಜಕ್ಕೂ ಪುರಸಭೆ, ತಾಪಂ, ಜಿಪಂ ಮತ್ತಿತರ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು ಎಂದರು. ಈ ಎಲ್ಲದರ ಜೊತೆ ರದ್ದುಗೊಂಡಿರುವ ಹಡಪದ ಅಪ್ಪಣ್ಣ ಅಭಿವೃದ್ಧಿ ನಿಗಮವನ್ನು ಪುನಃ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂಬುದು ಸೇರಿದಂತೆ ಮತ್ತಿತರ ಬೇಡಿಕೆಯಳ್ಳ ಮನವಿಪತ್ರವನ್ನು ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ ಅವರಿಗೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಗೈದ ಗಣ್ಯರು ಹಾಗೂ ಎಸ್‌ಎಸ್‌ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಿರಸ್ತೇದಾರ್‌ ಕರೀಂಸಾಬ್‌, ಕಲಬುರಗಿ ವಿಭಾಗೀಯ ಅಧ್ಯಕ್ಷ ವೀರಣ್ಣ ಹಡಪದ, ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುರಾವ್‌ ತರನಳ್ಳಿ, ಚಿಟಗುಪ್ಪ ತಾಲೂಕು ಅಧ್ಯಕ್ಷ ಶ್ರೀಧರ ಹಡಪದ, ಭಾಲ್ಕಿ ತಾಲೂಕು ಅಧ್ಯಕ್ಷ ಬಸವರಾಜ ಹಡಪದ, ಬಸವಕಲ್ಯಾಣದ ಭೀಮಶಾ ಹಡಪದ, ರಾಜೇಶ್ವರದ ಉದಯಕುಮಾರ ಇಸ್ಲಂಪೂರೆ, ಮಚೇಂದ್ರನಾಥ ಹಡಪದ, ಸೂರ್ಯಕಾಂತ ಹಡಪದ, ರಮೇಶ ಹಡಪದ ಇದ್ದರು. ಸೂರ್ಯಕಾಂತ ಪ್ರಾರ್ಥಿಸಿದರು. ಗೋರಖನಾಥ ಹಡಪದ ಸ್ವಾಗತಿಸಿದರು. ಮಲ್ಲಿಕಾರ್ಜುನ ನೀಲಕಂಠೆ ನಿರೂಪಿಸಿದ‌ರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.