ರಕ್ತದಾನ ಶಿಬಿರ ಆಯೋಜನೆ ಶ್ಲಾಘನೀಯ

ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯೋತ್ಸವ •ಮಾಜಿ ಸೈನಿಕರಿಗೆ ಸನ್ಮಾನ-ಶಾಸಕ ಪಾಟೀಲ ಪ್ರಶಂಸೆ

Team Udayavani, Aug 16, 2019, 10:23 AM IST

16-Agust-6

ಹುಮನಾಬಾದ: ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯೋತ್ಸವ ನಿಮಿತ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಶಾಸಕ ರಾಜಶೇಖರ ಪಾಟೀಲ ಇದ್ದರು.

ಹುಮನಾಬಾದ: ಸ್ವಾತಂತ್ರ್ಯ ದಿನಾಚರಣೆ ಶುಭ ದಿನದಂದು ಮಾಜಿ ಸೈನಿಕರ ಸನ್ಮಾನ ಜೊತೆಗೆ ರಕ್ತದಾನ ಶಿಬಿರ ಆಯೋಜಿಸಿರುವ ಆಸ್ಪತ್ರೆಯ ವೈದ್ಯಾಧಿಕಾರಿಗಳ ಕಾರ್ಯ ಪ್ರಶಂಸನೀಯ. ಈ ಆಸ್ಪತ್ರೆ ವೈದ್ಯರ ಕಾರ್ಯ ಇಡೀ ಜಿಲ್ಲೆಗೆ ಮಾದರಿ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ 73ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ವೈದ್ಯರು ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ನೀಡುವ ಸಂಬಳಕ್ಕೆ ಬದ್ಧರಾಗಿ ಕರ್ತವ್ಯ ನಿರ್ವಹಿಸುವವರೆ ವಿರಳ ಆಗಿರುವ ಈ ಸಂದರ್ಭಧಲ್ಲಿ ತಮ್ಮ ವೃತ್ತಿ ಜೊತೆಗೆ ಜನೋಪಯೋಗಿ ಚಟುವಟಿಕೆ ನಡೆಸಿದ್ದು ಆರೋಗ್ಯಕರ ಬೆಳವಣಿಗೆ. ವ್ಯವಸ್ಥೆ ಮಾಡಿರುವ ಆಸ್ಪತ್ರೆಯ ಮುಖ್ಯ ಆರೋಗ್ಯ ಅಧಿಕಾರಿ ಡಾ|ನಾಗನಾಥ ಹುಲ್ಸೂರೆ, ತಾಲೂಕು ಆರೋಗ್ಯ ಅಧಿಕಾರಿ ಅಶೋಕ ಮೈಲಾರೆ, ತಜ್ಞ ವೈದ್ಯರಾದ ಡಾ|ಬಸವಂತರಾವ ಗುಮ್ಮೇದ್‌, ಡಾ|ದಿಲೀಪ ಡೋಂಗ್ರೆ, ಡಾ|ಚೈತ್ರಾನಂದ, ಡಾ|ಪ್ರವೀಣ, ಸ್ತ್ರೀರೋಗ ತಜ್ಞೆ ಡಾ|ಸಂಗೀತಾ ಅಗಡಿ ಹಾಗೂ ಇತರ ವೈದ್ಯರ ಕಾರ್ಯ ಮೆಚ್ಚಲೇಬೇಕು ಎಂದರು.

ಕೇಂದ್ರ ಸರ್ಕಾರದ 370 ಕಾಯ್ದೆ ತಿದ್ದುಪಡಿ ನಿರ್ಧಾರದಿಂದ ಕಾಶ್ಮೀರದ ಜನತೆ ನೆಮ್ಮದಿಯಿಂದ ಜೀವಿಸುತ್ತಿದ್ದಾರೆ. ಸೇನಾಸೇವೆ ಜೀವನದಲ್ಲಿ ಅತ್ಯಂತ ನೆಮ್ಮದಿ ನೀಡಿದೆ. ಹೇಗೋ ಹುಟ್ಟಿ, ಹೇಗೋ ಸಾವನ್ನಪ್ಪು ಬದಲು ದೇಶದ ರಕ್ಷಣೆಗಾಗಿ ಶ್ರಮಿಸುತ್ತಿದ್ದೇವೆ ಎಂಬ ಹೆಮ್ಮೆ ಇದೆ ಎಂದು ಮಾಜಿ ಯೋಧರಾದ ಮಧುಕರ್‌ ಲೋಕನ್ನವರ್‌, ವೈಜಿನಾಥ‌ ಚಂದನಹಳ್ಳಿ, ಬಾಬುರಾವ ಸೂರ್ಯವಂಶಿ, ವಿಜಯರಾಜ ರಾಜೇಶ್ವರ, ಜಾನ್‌ ಲೋಬೊ ಅನಿಸಿಕೆ ವ್ಯಕ್ತಪಡಿಸಿದರು.

ಆಸ್ಪತ್ರೆ ಮುಖ್ಯ ಆರೋಗ್ಯ ಅಧಿಕಾರಿ ಡಾ|ನಾಗನಾಥ ಹುಲ್ಸೂರೆ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಯೋಧರ ಸೇವೆ ಸ್ಮರಿಸಿದರು. ಆಸ್ಪತ್ರೆ ಸಮಸ್ತ ಸಿಬ್ಬಂದಿ ಸಹಕಾರದಿಂದ ರಕ್ತದಾನ ಶಿಬಿರ ಆಯೋಜನೆ ಸಾಧ್ಯವಾಯಿತು ಎಂದರು.

ಈ ವೇಳೆ 60 ಜನ ರಕ್ತದಾನ ಮಾಡಿದರು. ತಾಲೂಕು ಆರೋಗ್ಯ ಅಧಿಕಾರಿ, ಡಾ|ಅಶೋಕ ಮೈಲಾರಿ, ಡಾ|ಬಸವಂತರಾವ್‌ ಗುಮ್ಮೇದ, ಡಾ|ಸಂಗೀತಾ ಹುಲಸೂರೆ, ಡಾ|ದಿಲೀಪ ಡೊಂಗ್ರೆ, ಡಾ|ಚೈತ್ರಾನಂದ ಚಿಮಕೊಡೆ, ಡಾ|ಪ್ರವೀಣಕುಮಾರ ಕಡಲೆ, ಡಾ|ವಿಶ್ವ ಸೈನೀರ್‌, ಡಾ|ಅರ್ಚನಾ, ಡಾ|ನುಫೇಲ್ ಸಿಬ್ಬಂದಿಗಳಾದ ಶಿವರಾಜ, ಬಾಬುರೆಡ್ಡಿ, ಪ್ರಕಾಶ, ಶ್ರೀಶೈಲ, ಮಹಾರಾಜ, ಬಸಲಿಂಗಯ್ಯ, ಭಗವಂತ್ರಾಯ, ಸುನೀಲ, ಚಂದ್ರಕಾಂತ, ಆಸ್ಪತ್ರೆಯ ಶುಶ್ರೂಷಕರು, ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು, ಗ್ರೂಪ್‌ ಡಿ ನೌಕರರು ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ತಾಲೂಕು ಆರೋಗ್ಯಾಧಿಕಾರಿ ಡಾ|ಅಶೋಕ ಮೈಲಾರಿ ಅಧ್ಯಕ್ಷತೆ ವಹಿಸಿದ್ದರು, ತೀರ್ಥಪ್ಪ ಭೀಮಶೆಟ್ಟಿ ಪ್ರಾರ್ಥಿಸಿದರು, ಮಲ್ಲಿಕಾರ್ಜುನ ಸಂಗಮಕರ ಸ್ವಾಗತಿಸಿದರು. ಶಿವಕುಮಾರ ಕಂಪ್ಲಿ ನಿರೂಪಿಸಿದರು. ಭಗವಂತರಾವ್‌ ವಂದಿಸಿದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.