ಬಿಇಒ ಸರ್ವಾಧಿಕಾರಿ ಧೋರಣೆ ಸಹಿಸಲಾಗದು: ಸಜ್ಜನಶೆಟ್ಟಿ

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವಾರ್ಷಿಕ ಕ್ರಿಯಾಯೋಜನೆಗೆ ಸಭೆ

Team Udayavani, Jul 5, 2019, 2:50 PM IST

05-July-24

ಹುಮನಾಬಾದ: ಗುರುಭವನದಲ್ಲಿ ನಡೆದ ದೈಹಿಕ ಶಿಕ್ಷಣ ಶಿಕ್ಷಕರ ವಾರ್ಷಿಕ ಕ್ರಿಯಾಯೋಜನೆ ಮತ್ತು ಕ್ರೀಡಾಕೂಟದ ಪೂರ್ವಭಾವಿ ಸಭೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಮುರಗೇಂದ್ರ ಸಜ್ಜನಶೆಟ್ಟಿ ಮಾತನಾಡಿದರು.

ಹುಮನಾಬಾದ: ಶಿಕ್ಷಕರ ಸಂಘದ ಪ್ರಮುಖರ, ಪ‌ದಾಧಿಕಾರಿಗಳ ಮಾತಿಗೆ ಮಾನ್ಯ ಮಾಡದೇ ಬಿಇಒ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದು ಕರ್ನಾ‌ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮುರಗೇಂದ್ರ ಸಜ್ಜನಶೆಟ್ಟಿ ಹೇಳಿದರು.

ಪಟ್ಟಣದ ಗುರು ಭವನದಲ್ಲಿ ಗುರುವಾರ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವಾರ್ಷಿಕ ಕ್ರಿಯಾಯೋಜನೆ, ಹೋಬಳಿ-ವಲಯ ಮತ್ತು ತಾಲೂಕು ಮಟ್ಟದ ಕ್ರೀಡಾಕೂಟ ಆಯೋಜನೆ ನಿಮಿತ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನಿವೃತ್ತ ಶಿಕ್ಷಕರು ಪಿಂಚಣಿಗಾಗಿ ಪ್ರತಿನಿತ್ಯ ಅಲೆದಾಡುತ್ತಿದ್ದರೂ ಅವರ ಕಷ್ಟ ಅರ್ಥ ಮಾಡಿಕೊಳ್ಳುವ ಕನಿಷ್ಟ ಸೌಜನ್ಯ ತೋರಿಸದಿರುವುದು ಆಡಳಿತದ ಬೇಜವಾಬ್ದಾರಿಗೆ ನಿದರ್ಶನವಾಗಿದೆ. ಅಧಿಕಾರಿಗಳು ಅವರ ಸ್ಥಾನದಲ್ಲಿದ್ದುಕೊಂಡು ಚಿಂತಿಸಬೇಕು. ತಾಲೂಕಿನಲ್ಲಿ ಆಡಳಿತ ಸುಧಾರಣೆಯಾಗುತ್ತಿದೆ ಎಂದು ಪ್ರತಿಯೊಬ್ಬರಲ್ಲೂ ಸಂತಸ ಮೂಡಿತ್ತು. ಅದೀಗ ಹುಸಿಯಾದ ಅನುಭವಾಗುತ್ತಿದೆ ಎಂದು ಬೇಸರದಿಂದ ನುಡಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರರೆಡ್ಡಿ ಮಾಲಿ ಪಾಟೀಲ ಮಾತನಾಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ನೊಂದ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿ ತಾಲೂಕು ಮೆಚ್ಚುವ ಅಧಿಕಾರಿಯಾಗಬೇಕು ಎಂದು ಸಲಹೆ ನೀಡಿದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರವಣಕುಮಾರ ಮಾತನಾಡಿ, ವಿವಿಧ ಹಂತದ ಕ್ರೀಡಾಕೂಟ ನಡೆಯುವ ದಿನಾಂಕವನ್ನು ಜುಲೈ 5ರಂದು ಪ್ರಕಟಿಸಲಾಗುವುದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಚಪ್ಪ ವಾಲಿ ಮಾತನಾಡಿ, ಎಲ್ಲ ಶಿಕ್ಷಕರ ಸಂಘಟನೆಗಳು ಸಹಕರಿಸುತ್ತಿರುವ ಕಾರಣ ಪಾರದರ್ಶಕ ಆಡಳಿತ ನೀಡುತ್ತಿರುವ ನನಗೆ ಸುಧಾರಣೆ ಮಾಡಲು ಸಾಧ್ಯವಾಗಿದೆ. ಕಣ್ತಪ್ಪಿ ಆಗಿರುವ ತಪ್ಪುಗಳನ್ನು ಸುಧಾರಿಸಿಕೊಂಡು ಮುಂದಿನ ದಿನಗಳಲ್ಲಿ ಹಾಗಾದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ದೈಹಿಕ ಶಿಕ್ಷಣ ಗ್ರೇಡ್‌(1) ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಸಂಜೀವಕುಮಾರ ಸೂರ್ಯವಂಶಿ ಮಾತನಾಡಿ, ಜು.30ಕ್ಕೆ ತಾಲೂಕು ದೈಹಿಕ ಶಿಕ್ಷಕ ಶಿಕ್ಷಣ ಶಿಕ್ಷಕರ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಆ.10ಕ್ಕೆ ತಾಲೂಕು ಪದಾಧಿಕಾರಿಗಳ ನೇಮಕ ನಡೆಯುವುದು. ಆ.20ಕ್ಕೆ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದು ತಿಳಿಸಿದರು.

ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖ್‌ ಮೆಹೆಬೂಬ್‌ ಪಟೇಲ ಮತ್ತಿತರರು ಮಾತನಾಡಿದರು.

ನಿವೃತ್ತ ಶಿಕ್ಷಣಾಧಿಕಾರಿ ಕಾಶೀನಾಥ ಪಾಟೀಲ, ಪಜಾ-ಪಪಂ ಶಿಕ್ಷಕರ ಸಂಘದ ಅಧ್ಯಕ್ಷ ರಾಜಕುಮಾರ ಹರನಾಳ, ಕಾರ್ಯದರ್ಶಿ ತಾತ್ಯಾರಾವ್‌ ಕಾಂಬ್ಳೆ, ಕೋಶಾಧ್ಯಕ್ಷ ಶಿವರಾಜ ಮೇತ್ರೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.