ಅನಾರೋಗ್ಯ ಹರಡುತ್ತಿದೆ ಮಲೀನ ನೀರು

•ಕಾರಂಜಾ ಜಲಾಶಯದಿಂದ 13 ಗ್ರಾಮಗಳಿಗೆ ಪೂರೈಕೆ •ಕುಡಿಯಲು ಯೋಗ್ಯವಲ್ಲದ ನೀರಿನಿಂದ ರೋಗ

Team Udayavani, Jul 8, 2019, 10:28 AM IST

08-July-5

ಹುಮನಾಬಾದ: ಕಾರಂಜಾ ಜಲಾಶಯದಿಂದ ರವಿವಾರ ಪೂರೈಕೆ ಮಾಡಿದ ನೀರು.

ಶಶಿಕಾಂತ ಕೆ.ಭಗೋಜಿ
ಹುಮನಾಬಾದ
: ಹುಮನಾಬಾದ- ಚಿಟಗುಪ್ಪ ಸೇರಿ 13 ಗ್ರಾಮಗಳಿಗೆ ಕಾರಂಜಾ ಜಲಾಶಯದಿಂದ ಮಲೀನ ನೀರು ಪೂರೈಕೆಯಾಗುತ್ತಿರುವ ಕಾರಣ ಈ ನೀರನ್ನೇ ನಂಬಿದ ಜನರಿಗೆ ಈಗ ರೋಗಭೀತಿ ಎದುರಾಗಿದೆ.

ಸರ್ಕಾರದ ಮೇಲೆ ಒತ್ತಡ ಹೇರಿ ಸುಮಾರು 20 ಕೋಟಿ ರೂ. ಹಣದಲ್ಲಿ ಅಂದಿನ ಶಾಸಕರು ಹಾಗೂ ಹಾಲಿ ಸಚಿವ ರಾಜಶೇಖರ ಪಾಟೀಲ ಅವರು ಯೋಜನೆ ಪೂರ್ಣಗೊಳಿಸಿ, ಹುಮನಾಬಾದ- ಚಿಟಗುಪ್ಪ- ಹಳಿಖೇಡ(ಬಿ) ಪಟ್ಟಣ, ಬೇನಚಿಂಚೋಳಿ, ನಂದಗಾಂವ್‌, ವಡ್ಡನಕೇರಾ, ಮದರಗಾಂವ್‌, ಕಪ್ಪರಗಾಂವ್‌, ಹುಡಗಿ ಸೇರಿ ಒಟ್ಟು 13 ಗ್ರಾಮಗಳ ಜನರು ಈ ಸೌಲಭ್ಯದಿಂದ ಪ್ರಯೋಜನ ಪಡೆಯುತ್ತಿದ್ದಾರೆ.

ಪದೇಪದೆ ಒಡೆಯುವ ಪೈಪ್‌ಲೈನ್‌: ಯೋಜನೆ ಆರಂಭಗೊಂಡಾಗಿನಿಂದ ವರ್ಷದಲ್ಲಿ ಹತ್ತಾರು ಬಾರಿ ಮುಖ್ಯಪೈಪ್‌ ಒಡೆದು ನೀರು ಪೋಲಾಗುತ್ತಿದೆ. ಆಲ್ಲದೇ ಅದರ ದುರುಸ್ತಿ ಆಗುವವರೆಗೆ ಈ ನೀರನ್ನೇ ಅವಲಂಬಿಸಿರುವ ಜನರು ಪೈಪ್‌ ಒಡೆದಾಗಲೊಮ್ಮೆ ವಾರಗಟ್ಟಲೇ ನೀರಿಗಾಗಿ ಹೈರಾಣು ಆಗುತ್ತಿದ್ದಾರೆ.

ಯೋಜನೆ ಶುರು ಆಗಿದ್ದ ಆರಂಭದಲ್ಲಿ ಕಬೀರಾಬಾದವಾಡಿ ಹತ್ತಿರದ ಜಲಶುದ್ಧೀಕರಣ ಘಟಕದಲ್ಲಿ ಸಂಪೂರ್ಣ ಶುದ್ಧಗೊಂಡ ನಂತರವೇ ನೀರು ಪೂರೈಕೆ ಮಾಡಲಾಗುತ್ತಿತ್ತು. ಇದರಿಂದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿ, ಶುದ್ಧ ನೀರು ಪೂರೈಕೆ ಆಗುತ್ತಿರುವುದು ಸಾರ್ವಜನಿಕರಲ್ಲಿ ಸಾಕಷ್ಟು ಸಂತೃಪ್ತಿ ಮೂಡಿಸಿತ್ತು. ಆದರೆ ಆರಂಭದಲ್ಲಿ ಇದ್ದವ ಉತ್ಸಾಹ ನಂತರದ ದಿನಗಳಲ್ಲಿ ಇಲ್ಲದಾಯಿತು. ಮೂರ್‍ನಾಲ್ಕು ವರ್ಷಗಳಿಂದ ಕಾರಂಜಾ ಜಲಾಶಯದಿಂದ ಮಲೀನ ನೀರು ಪೂರೈಕೆ ಆಗುತ್ತಿದೆ.

ನಿರ್ವಹಣೆ ಕೊರತೆ: ಸಾರ್ವಜನಿಕರ ಪ್ರಕಾರ ಆರಂಭದಲ್ಲಿ ಇದ್ದ ನಿರ್ವಹಣೆ ವ್ಯವಸ್ಥೆ ಈಗ ಅಲ್ಲಿ ಉಳಿದಿಲ್ಲ. ಪೈಪ್‌ ಒಡೆದಾಗ ಜೋಡಿಸಲು, ವಿದ್ಯುತ್‌ ಕಂಬ ಉರುಳಿ ಬಿದ್ದಾಗ ಅಳವಡಿಸುವ ವಿಷಯದಲ್ಲಿ ತೋರಿಸುವ ಆಸಕ್ತಿಯನ್ನು ಶುದ್ಧ ಕುಡಿಯುವ ನೀರು ಪೂರೈಕೆ ವಿಷಯದಲ್ಲಿ ಪುರಸಭೆ ಆಡಳಿತ ನಿರೀಕ್ಷಿತ ಪ್ರಮಾಣದಲ್ಲಿ ತೋರದಿರುವುದೇ ಅಶುದ್ಧ ನೀರು ಪೂರೈಕೆಗೆ ಪ್ರಮುಖ ಕಾರಣ ಎಂಬುದು ಸಾರ್ವಜನಿಕರ ಆರೋಪ.

ಜನರಿಗೆ ನಿತ್ಯ ವಾಂತಿ-ಬೇಧಿ: ಅಶುದ್ಧ ನೀರು ಪೂರೈಕೆ ಆಗುತ್ತಿರುವ ಕಾರಣ ಹುಮನಾಬಾದ ಪಟ್ಟಣ ಮಾತ್ರವಲ್ಲದೇ ಈ ನೀರನ್ನು ಸೇವಿಸುತ್ತಿರುವ ಎಷ್ಟೋ ಜನರು ಪ್ರತಿನಿತ್ಯ ವಾಂತಿಬೇಧಿಯಿಂದ ನರಳಿ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಆಗಮಿಸುತ್ತಿದ್ದಾರೆ. ವಾಂತಿ-ಬೇಧಿ ಮತ್ತಿತರ ಕಾಯಿಲೆಗಳಿಂದ ನರಳುವ ಸಾವಿರಾರು ಮಂದಿ ಪುರಸಭೆ ಆಡಳಿತದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಪುರಸಭೆ ಅಧಿಕಾರಿಗಳು ಹಾಗೂ ಸದಸ್ಯರು ಕಾರಿನಲ್ಲಿ ಮಿನರಲ್ ನೀರು ಇಟ್ಟುಕೊಂಡು ಅಲೆದಾಡುವುದು, ಮನೆಯಲ್ಲಿ ಫಿಲ್ಟರ್‌ ಯಂತ್ರವಿರುವ ಕಾರಣ ಬಡವರ ಈ ನೋವು ಅವರಿಗೆ ಅರ್ಥವಾಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿ ಹಾಗೂ ಚುನಾಯಿತ ಪ್ರತಿನಿಧಿಗಳು ಒಂದೊಮ್ಮೆ ತಮ್ಮ ಪರಿವಾರಕ್ಕೂ ಈ ನೀರು ಕುಡಿಸಿದರೆ ಅವರಿಗೂ ಇದರ ಬಿಸಿ ತಟ್ಟುತ್ತದೆ. ಸಾರ್ವಜನಿಕರ ಈ ಸಮಸ್ಯೆ ವಿಕೋಪಕ್ಕೆ ಹೋಗುವ ಮುನ್ನ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಆಡಳಿತದ ವಿರುದ್ಧ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

ಕಾರಂಜಾ ಜಲಾಶಯದಿಂದ ಮಲೀನ ನೀರು ಪೂರೈಕೆ ಆಗುತ್ತಿದೆ. ಪರಿಣಾಮ ಮಕ್ಕಳು ಸೇರಿದಂತೆ ಇಡೀ ಪರಿವಾರಕ್ಕೆ ವಾಂತಿಬೇಧಿಯಿಂದ ನರಳುವ ಸ್ಥಿತಿ ಎದುರಾಗಿದೆ. ಫಿಲ್ಟರ್‌ ಬೆಡ್‌ನಿಂದ ಪೂರೈಕೆ ಆಗುವ ನೀರು ಮಳೆ ನೀರಿನಂತೆ ಇರುತ್ತದೆಯೇ. ಊರ ಉದ್ಧಾರ ಮಾಡುವ ವ್ಯಕ್ತಿಗಳು ಜನರ ಜೊತೆಗೆ ಚೆಲ್ಲಾಟ ಆಡದೇ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಮಸ್ಯೆಯನ್ನು ತಕ್ಷಣ ಬಗೆಹರಿಸಬೇಕು.
ಜೆ.ಎನ್‌.ಮಲ್ಲಿಕಾರ್ಜುನ, ಹುಮನಾಬಾದ ನಿವಾಸಿ

ಮೂರ್‍ನಾಲ್ಕು ತಿಂಗಳಿಂದ ಸಮರ್ಪಕ ನಿರ್ವಹಣೆ ಆಗದ ಕಾರಣ ಅಶುದ್ಧ ನೀರು ಪೂರೈಕೆ ಆಗಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಾಣುತ್ತಿದೆ. ವಿಷಯ ಗಮನಕ್ಕೆ ಬಂದಿದೆ. ನಾಳೆ ಎಂದು ಕಾದು ಕುಳಿತುಕೊಳ್ಳದೇ ಈ ಕ್ಷಣವೇ ಅಲ್ಲಿಗೆ ಭೇಟಿನೀಡಿ, ಸಮಸ್ಯೆ ಬಗೆಹರಿಸುತ್ತೇನೆ.
• ಶಂಭುಲಿಂಗ ದೇಸಾಯಿ,ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.