ಬಳಕೆಯಾಗದೇ ಸಮುದಾಯ ಭವನ ಪಾಳು

ಒಂದೂವರೆ ದಶಕದ ಹಿಂದೆ 40 ಲಕ್ಷದಲ್ಲಿ ನಿರ್ಮಾಣಈಗಲೂ ಪುರಸಭೆಗೆ ಹಸ್ತಾಂತರಗೊಂಡಿಲ್ಲ

Team Udayavani, Oct 5, 2019, 11:44 AM IST

5-0ctober-6

„ಶಶಿಕಾಂತ ಕೆ.ಭಗೋಜಿ
ಹುಮನಾಬಾದ
: ಪಟ್ಟಣದ ಇಂದಿರಾ ನಗರದಲ್ಲಿ 2002-03ನೇ ಸಾಲಿನಲ್ಲಿ ಶಂಕುಸ್ಥಾಪನೆ ನೆರವೇರಿಸಿ, ಲಕ್ಷಾಂತರ ವೆಚ್ಚದಲ್ಲಿ ನಿರ್ಮಿಸಿದ ಮಾಜಿ ಸಂಸದ ದಿ. ರಾಮಚಂದ್ರ ಆರ್ಯ ಸಮುದಾಯ ಭವನ ಉದ್ದೇಶಿತ ಕೆಲಸಕ್ಕೆ ಬಳಕೆಯಾಗದೇ ದುರ್ವೆಸನಿಗಳ ತಾಣವಾಗಿ ಮಾರ್ಪಟ್ಟಿದೆ.

2002-03ನೆ ಸಾಲಿನಲ್ಲಿ ಸಂಸದರಾಗಿದ್ದ ರಾಮಚಂದ್ರ ಆರ್ಯ ಅವರ 40ಲಕ್ಷ ರೂ. ಅನುದಾನದಲ್ಲಿ ಕರ್ನಾಟಕ ಭೂಸೇನಾ ನಿಗಮ ಕಟ್ಟಡವನ್ನು ನಿರ್ಮಿಸಿದೆ. ಕಟ್ಟಡ ನಿರ್ಮಾಣಗೊಂಡು ಒಂದೂವರೆ ದಶಕ ಗತಿಸಿದರೂ ಕೂಡ ಪುರಸಭೆಗೆ ಹಸ್ತಾಂತರಗೊಂಡಿಲ್ಲ. ಅಲ್ಲದೇ ಉದ್ಘಾಟನೆ ಯೋಗ ಕೂಡಿ ಬರುವುದಕ್ಕೂ ಮುನ್ನವೇ ಕಟ್ಟಡ ಶಿಥಿಲಾವಸ್ಥೆ ತಲುಪಿದೆ.

ಕಟ್ಟಡದಲ್ಲೇನಿದೆ?: ನೆಲ ಮಾಳಗೆಯಲ್ಲಿ ಸಭಾಂಗಣ, ವೇದಿಕೆ, ನಾಲ್ಕು ಕೊಠಡಿಗಳಿವೆ. ಮೊದಲ ಮಹಡಿಯಲ್ಲಿ ಒಂದು ಸಭಾಂಗಣ, ವೇದಿಕೆ, ಎರಡು ಕೊಠಡಿಗಳಿವೆ. ಕಟ್ಟಡದ ಬಲ ಬದಿಗೆ ವಿಶಾಲ ಮೈದಾನವಿದೆ. ಕಟ್ಟಡದ ಮುಂಭಾಗದಲ್ಲಿ ಜಾಗವಿದೆ. ನಿರ್ಮಾಣ ಸಂದರ್ಭದಲ್ಲಿ ವಿದ್ಯುತ್‌ ವೈರಿಂಗ್‌ ಕೆಲಸ ಮಾತ್ರ ಪೂರ್ಣಗೊಂಡಿದೆ. ಕಟ್ಟಡದಲ್ಲಿ ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್‌ ಸಂಪರ್ಕ, ಅಡುಗೆ ಕೋಣೆ, ವಸ್ತು ಸಂಗ್ರಹ ಕೊಠಡಿ, ಶೌಚಾಲಯ, ನೀರು ಸಂಗ್ರಹಾಗಾರ ಅತ್ಯಂತ ಅವಶ್ಯವಿದ್ದು, ಮೂಲ ಸೌಲಭ್ಯ ಕೊರತೆ ಕಾರಣ ಸಮುದಾಯ ಭವನದಲ್ಲಿ ಯಾವುದೇ ಸಭೆ ಸಮಾರಂಭಗಳು ನಡೆಯುತ್ತಿಲ್ಲ. 40ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ನಿರ್ವಹಣೆ ಜವಬ್ದಾರಿಯನ್ನು ಯಾರೊಬ್ಬರಿಗೂ ವಹಿಸಿಕೊಡದ ಕಾರಣ ಬಳಕೆ ಇಲ್ಲದೇ ಪಾಳು ಬಿದ್ದಿದೆ. ಆದರೆ ಪುರಸಭೆ ವ್ಯಾಪ್ತಿಗೆ ಒಳಪಡುವ ಕಾರಣ ಈವರೆಗೆ ಎರಡು ಮೂರು ಬಾರಿ ಸಣ್ಣಪುಟ್ಟ ದುರಸ್ತಿ ಕೆಲಸಗಳಿಗಾಗಿ ಪುರಸಭೆ ಅನುದಾನ ನೀಡಿದೆ.

ದುರ್ವ್ಯಸನಿಗಳ ತಾಣ: ಯಾರೂ ನಿರ್ವಹಿಸದ ಈ ಕಟ್ಟಡವೀಗ ಅನಾಥವಾಗಿದೆ. ದುರ್ವ್ಯಸನಿಗಳು ಈ ಕಟ್ಟಡವನ್ನು ತಮ್ಮ ವ್ಯಸನಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎನ್ನುವುದಕ್ಕೆ ಅಲ್ಲಿ ಬಿದ್ದಿರುವ ಮದ್ಯದ ಬಾಟಲ್‌, ಗೋಡೆಗಳ ಮೇಲೆ ಗುಟಕಾ ತಿಂದು ಉಗಿದಿರುವ ಕಲೆಗಳೇ ಸಾಕ್ಷಿ. ಕಿಟಗಿ ಗಾಜುಗಳು ಪುಡಿಪುಡಿಯಾಗಿವೆ. ಬಾಗಿಲು ಸಹ ಹಾಳಾಗಿವೆ. ಕಟ್ಟಡದ ಬಿಡಿ ಭಾಗವೆಲ್ಲ ಗಿಡಗಂಟೆಗಳ ತಾಣವಾಗಿದ್ದು, ಬೆಳಗ್ಗೆ ಅದೆಷ್ಟೋ ಜನರು ಈ ಕಟ್ಟಡದ ಬಿಡಿ ಭಾಗವನ್ನು ರಾತ್ರಿ ಶೌಚಕ್ಕೆ, ಹಗಲಲ್ಲಿ ಮೂತ್ರ ವಿಸರ್ಜನೆಗೆ ಬಳಸುತ್ತಿರುವ ಕಾರಣ ಸಮುದಾಯ ಭವನದ ಬಿಡಿ ಭಾಗ ಸದಾ ನಾರುತ್ತದೆ.

ಲಕ್ಷಾಂತರ ರೂ.ವೆಚ್ಚದಲ್ಲಿ ನಿರ್ಮಿಸಿರುವ ಕಟ್ಟಡಕ್ಕೆ ಕೊರತೆ ಇರುವ ಮೂಲ ಸೌಲಭ್ಯ ಕಲ್ಪಿಸಿ, ಪುರಸಭೆ ಅಥವಾ ನಿರ್ವಹಣೆಗೆ ಮುಂದಾಗುವವರಿಗೆ ಜವಾಬ್ದಾರಿ ವಹಿಸಿ ಕೊಡುವ ಮೂಲಕ, ದುಬಾರಿ ಕಲ್ಯಾಣ ಮಂಟಪದಲ್ಲಿ ಮದುವೆ ಮಾಡುವ ಪಾಲಕರಿಗೆ ಅತ್ಯಲ್ಪ ದರದಲ್ಲಿ ನೀಡಿದರೆ ಬಡ ಹಾಗೂ ಮಧ್ಯಮ ವರ್ಗದವರ ಆರ್ಥಿಕ ಹೊರೆ ಕಡಿಮೆಯಾಗುತ್ತದೆ. ಈನ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣ ಜವಾಬ್ದಾರಿ ಹೊತ್ತವರು ಸಾಧ್ಯವಾದಷ್ಟು ಶೀಘ್ರದಲ್ಲಿ ಮೂಲಸೌಲಭ್ಯ ಕಲ್ಪಿಸಿಕೊಡುವ ಮೂಲಕ ಉದ್ದೇಶಿತ ಕೆಲಸಕ್ಕೆ ಬಳಕೆ ಆಗುವಂತೆ ನೋಡಿಕೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಸೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.