ನೀಲಕಂಠರಾಯನಗಡ್ಡಿಯಲ್ಲಿ ಮತ ಜಾಗೃತಿ

ಪ್ರವಾಹದ ಊರಿಗೆ ಮೊದಲ ಸಲ ಭೇಟಿ ನೀಡಿದ ಸಿಇಒ ಕವಿತಾ ಮನ್ನಿಕೇರಿ

Team Udayavani, Apr 13, 2019, 11:46 AM IST

13-April-9

ಹುಣಸಗಿ: ಮತದಾನ ಜಾಗೃತಿಗೆ ನೀಲಕಂಠರಾಯನಗಡ್ಡಿಗೆ ಅಧಿಕಾರಿಗಳೊಂದಿಗೆ ತೆರಳಿದ ಜಿಪಂ ಸಿಇಒ ಕವಿತಾ ಮನ್ನಿಕೇರಿ.

ಹುಣಸಗಿ: ಪ್ರತಿವರ್ಷ ಪ್ರವಾಹ ಎದುರಾಗಿ ಎಲ್ಲ ಕಡೆಗೂ ಸುದ್ದಿಯಾಗುವ ಕೃಷ್ಣಾನದಿ ದಂಡೆ ಆಚೆಗಿನ ನೀಲಕಂಠರಾಯನಗಡ್ಡಿ ಗ್ರಾಮ ಅದು. ದಶಕ ಕಳೆದರೂ ಇವರೆಗೂ ಮತದಾನ ಜಾಗೃತಿ ಆಗಿರಲಿಲ್ಲ. ಅಲ್ಲಿನ ಜನರಿಗೆ ಮತದಾನದ ಜಾಗೃತಿ ಮೂಡಿಸಲೇಬೇಕು ಎಂಬ ನಿರ್ಧಾರ ಮಾಡಿದ ಯಾದಗಿರಿ ಜಿಲ್ಲೆ ಸಿಇಒ ಹಾಗೂ ಚುನಾವಣಾ ಸ್ವೀಪ್‌ ಕಮಿಟಿ ಅಧ್ಯಕ್ಷೆ ಕವಿತಾ ಮನ್ನಿಕೇರಿ ಅವರು ಶುಕ್ರವಾರ ಸಂಜೆ ಗಡ್ಡಿಗೆ ಭೇಟಿ ನೀಡಿದರು.

ನೀಲಕಂಠರಾಯನಗಡ್ಡಿಗೆ ಹೋಗಲು ಸರಿಯಾದ ರಸ್ತೆ ಇಲ್ಲ. ಕೃಷ್ಣಾನದಿ ದಾಟಿಕೊಂಡೇ ಹೋಗುವ ಅನಿವಾರ್ಯತೆ ಇದೆ. ಹೀಗಾಗಿ ಎಷ್ಟೋ ಚುನಾವಣೆಗಳು ಬಂದರೂ ಗ್ರಾಮಸ್ಥರಿಗೆ ಯಾವುದೇ ಜಾಗೃತಿ ಕಾರ್ಯಕ್ರಮ ನಡೆಸಿ ಪ್ರಜ್ಞೆ ಮೂಡಿಸಿರಲಿಲ್ಲ. ಈ ಬಾರಿ ಲೋಕಸಭಾ ಚುನಾವಣಾ ಉದ್ದೇಶ ಹಾಗೂ ಮತದಾನದ ಶೇಕಡಾವಾರು ಫಲಿತಾಂಶ ಹೆಚ್ಚಿಸುವ ಸಲುವಾಗಿ
ನೀಲಕಂಠರಾಯನಗಡ್ಡಿಗೆ ಕಲಾ ತಂಡದೊಂದಿಗೆ ಸ್ವೀಪ್‌ ಕಮಿಟಿ ಅಧ್ಯಕ್ಷೆ ಕವಿತಾ ಮನ್ನಿಕೇರಿ ತೆರಳಿ ಜಾಗೃತಿ ಮೂಡಿಸಿದರು.

ಶುಕ್ರವಾರ ಸಂಜೆ 7:00ಗಂಟೆ ಆಗುತ್ತಲೇ ಕೃಷ್ಣಾನದಿ ದಂಡೆಯಲ್ಲಿ ಇಳಿದ ಅವರು ಕಲ್ಲು ಬಂಡೆ ಮೆಟ್ಟಿದ ಅನುಭವದೊಂದಿಗೆ ಅರ್ಧ ಕಿಮೀ ನಡೆದುಕೊಂಡು ಗಡ್ಡಿ ತಲುಪಿ ಸಾಹಸ ಮೆರೆದರು. ಗಡ್ಡಿಯೊಳಗೆ ಬರುತ್ತಿದ್ದಂತೆ
ಗ್ರಾಮಸ್ಥರು ಬರುವಿಕೆಗಾಗಿ ಕಾಯುತ್ತಿದ್ದರು. ಅಲ್ಲಿನ ಜನರ ವೇಷ ಮತ್ತು ಮನೆಗಳ ನೋಡಿ ಆಶ್ಚರ್ಯವಾದರು. ಹಾಗೇ ಜಾಗೃತಿ ವೇಳೆ ಹಿರಿಯ ಮತದಾರರಿಗೆ ಸನ್ಮಾನ ಮಾಡಿ ಮಾನವೀಯತೆ ಮೆರೆದ ಅವರು ಅವರೊಂದಿಗೆ ಕುಳಿತು ಮತದಾನದ ಜಾಗೃತಿ ಕಾರ್ಯಕ್ರಮ ವೀಕ್ಷಿಸಿದರು. ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎನಿಸುವಂತಿತ್ತು.

ಜಾಗೃತಿ ಮೂಡಿಸಿದ ನಂತರ ರಾತ್ರಿ 8:00ಕ್ಕೆ ಮರಳಿ ಯಾದಗಿರಿಯತ್ತ ಪ್ರಯಾಣಿಸಲು ಕಲ್ಲು ಮುಳ್ಳು ತಾಗಿಸಿಕೊಂಡು ಒಂದೊಂದು ಹೆಜ್ಜೆ ಮೆಲ್ಲಗೆ ಇಡುತ್ತ ಮೊಬೈಲ್‌ ಟಾರ್ಚ್‌ ಬೆಳಕಿನಲ್ಲಿ ನಡೆದು ಬಂದರು.

ಹೊಸ ಅನುಭವ: ನೀಲಕಂಠರಾಯನಗಡ್ಡಿಗೆ ಬರುತ್ತೇನೆ ಎಂದುಕೊಂಡಿರಲಿಲ್ಲ. ಆದರೆ ಕರ್ತವ್ಯ ಏನೂ ಮಾಡುವಂತಿಲ್ಲ. ಚುನಾವಣೆ ಬೇರೆ. ಹೀಗಾಗಿ ಮತದಾನದ ಜಾಗೃತಿ ಮೂಡಿಸುವುದು ಅಗತ್ಯವಾಗಿತ್ತು. ಸಂಚಾರ ಸಮಸ್ಯೆ ನಡೆವೆಯೇ ಕಲ್ಲು, ಮುಳ್ಳಿನ ದಾರಿಯಲ್ಲಿ ನಡೆದ ಹೊಸ ಅನುಭವ ನನ್ನಗಾಗಿದೆ ಎಂದು ಕವಿತಾ ಮನ್ನಿಕೇರಿ ಅವರು ಉದಯವಾಣಿಗೆ ಜತೆಗೆ ಅನಿಸಿಕೆ ಹಂಚಿಕೊಂಡರು.

ನೀರಿಗಾಗಿ ಅಳಲು ತೋಡಿಕೊಂಡ ಜನರು: ನಮಗೆ ಕುಡಿಯಲು ನೀರಿನ ಸಮಸ್ಯೆ ಇದೆ. ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಅಲ್ಲಿನ ಜನರು ಅಳಲು ತೋಡಿಕೊಂಡರು. ಪ್ರತಿಜ್ಞಾನವಿಧಿ ಬೋಧನೆ: 40 ಕುಟುಂಬ ಇರುವ ಇಲ್ಲಿ 132 ಮತಗಳು ಇವೆ. ಹೀಗಾಗಿ ಎಲ್ಲ ಮತಗಳು ಚಲಾವಣೆ ಆಗಲೇಬೇಕು ಎಂಬ ನಿರ್ಧಾರದೊಂದಿಗೆ ಹಿರಿಯ ಮತದಾರರು ಸೇರಿದಂತೆ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿದರು. ಗುಳೆ ಹೋದ ಎಲ್ಲರನ್ನು ಮರಳಿ ಕರಿಸಿ ಮತದಾನ ಮಾಡಬೇಕು. ವೃದ್ಧರಿಗೆ, ಅಂಗವಿಕಲರಿಗೆ ವಾಹನ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಮತದಾನ ಮಾಡಲು ಯಾವುದೇ ತೊಂದರೆ ಇಲ್ಲ ಎಂದು ಅಲ್ಲಿನ ಜನರಿಗೆ ಮನವರಿಕೆ ಮಾಡಿಕೊಟ್ಟರು.

ಬಾಲಪ್ಪ ಎಂ. ಕುಪ್ಪಿ

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.