ಢವಳೇಶ್ವರ ಸೇತುವೆ ಸಂಚಾರಕ್ಕೆ ಮುಕ್ತ : ನೂರಾರು ಎಕರೆ ಕಬ್ಬು ನಾಶ


Team Udayavani, Aug 3, 2021, 8:48 PM IST

ghjkjfyityty

ಮಹಾಲಿಂಗಪುರ: ಮಹಾರಾಷ್ಟ್ರ ಹಾಗೂ ಪಶ್ಚಿಮ ಘಟ್ಟಗಳಲ್ಲಿನ ಮಹಾಮಳೆಯಿಂದಾಗಿ ಉಂಟಾದ ಪ್ರವಾಹದಿಂದಾಗಿ ಕಳೆದ 12 ದಿನಗಳಿಂದ ಘಟಪ್ರಭಾ ನದಿಯು ಉಕ್ಕಿ ಹರಿಯುತ್ತಿರುವ ಕಾರಣ ನದಿಪಾತ್ರದ ಗ್ರಾಮಗಳು ಜಲಾವೃತವಾಗಿ ಸಾಕಷ್ಟು ಆವಾಂತರಗಳನ್ನು ಸೃಷ್ಠಿಸಿದೆ.

ನೂರಾರು ಎಕರೆ ಕಬ್ಬಿನ ಬೆಳೆ ನಾಶ : ಘಟಪ್ರಭಾ ಪ್ರವಾಹದಿಂದಾಗಿ ಸುಮಾರು 8-10 ದಿನಗಳವರೆಗೆ ಮಾರಾಪೂರ, ಢವಳೇಶ್ವರ, ಮದಭಾಂವಿ, ನಂದಗಾಂವ, ನಾಗರಾಳ, ಮಿರ್ಜಿ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿನ ನೂರಾರು ಎಕರೆ ಕಬ್ಬಿನ ಬೆಳೆಯು ಸಂಪೂರ್ಣ ಜಲಾವೃತವಾಗಿತ್ತು. ಕಳೆದ 3-4 ದಿನಗಳಿಂದ ನದಿಯ ನೀರಿನ ಹರಿವು ಕಡಿಮೆಯಾಗುತ್ತಿದೆ. ಆದರೆ ಜಲಾವೃತವಾಗಿದ್ದ ಕಬ್ಬು ನಾಶವಾಗಿ ರೈತರು ಕಣ್ಣಿರು ಸುರಿಸುವಂತಾಗಿದೆ.

ಮೂರನೇ ವರ್ಷವು ಪ್ರವಾಹ ಸಂಕಟ : ನದಿ ಪಾತ್ರದಲ್ಲಿನ ಗ್ರಾಮಗಳು ಹಾಗೂ ರೈತರ ಬೆಳೆಗಳು ಪ್ರವಾಹ ಪರಿಣಾಮ ಎದುರಿಸುತ್ತಿರುವುದು ಇದು ಸತತ ಮೂರನೇ ವರ್ಷ. ಇದರಿಂದಾಗಿ ರೈತರು ಕಷ್ಟಪಟ್ಟ ಬೆಳೆಸಿದ ಬೆಳೆಗಳು ಜಲಾವೃತವಾಗಿ ಹಾನಿಯನ್ನು ಅನುಭವಿಸುವಂತಾಗಿದೆ. ಅದರಲ್ಲೂ ಎರಡು ವರ್ಷದಿಂದ ಕೋವಿಡ್ ಲಾಕಡೌನ್ ಹಾಗೂ ಮೂರು ವರ್ಷಗಳಿಂದ ಪ್ರವಾಹ ಪರಿಣಾಮದಿಂದಾಗಿ ರೈತರ ಪರಿಸ್ಥಿತಿಯು ಬಹಳ ಗಂಭೀರವಾಗಿದೆ ಎಂಬುವದು ನದಿಪಾತ್ರದ ಗ್ರಾಮಗಳ ರೈತರ ಅಳಲಾಗಿದೆ.

ಢವಳೇಶ್ವರ ಸೇತುವೆ ಸಂಚಾರಕ್ಕೆ ಮುಕ್ತ : ಮಂಗಳವಾರ ಮಧ್ಯಾಹ್ನವರೆಗೂ ಢವಳೇಶ್ವರ ಸೇತುವೆ ಮೇಲೆ ಎರಡು ಅಡಿಗಳಷ್ಟು ನದಿ ಇರುವ ಕಾರಣ ಸಂಚಾರವಿರಲಿಲ್ಲ. ಮಂಗಳವಾರ ಸಂಜೆ ೬ರ ನಂತರ ಸೇತುವೆಯ ಮೇಲೆ ಒಂದು ಅಡಿಯಷ್ಟು ನೀರಿದ್ದರು ಸಹ ಪ್ರಯಾಣಿಕರು ಮತ್ತು ವಾಹನಗಳ ಸಂಚಾರ ಪ್ರಾರಂಭವಾಗಿದೆ. ಈ ಮೂಲಕ ಜುಲೈ 22 ರಂದು ಜಲಾವೃತವಾಗಿದ್ದ ಢವಳೇಶ್ವರ ಸೇತುವೆಯು ಆಗಸ್ಟ್ ೪ ಬುಧವಾರ ಮುಂಜಾನೆಯಿಂದ ಸಂಪೂರ್ಣ ಸಂಚಾರಕ್ಕೆ ಮುಕ್ತವಾಗಲಿದೆ. ಈ ಮೂಲಕ ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ಗಡಿಗ್ರಾಮಗಳ ಸಂಪರ್ಕ ಪುನಃ ಕಲ್ಪಿಸುವ ರಬಕವಿ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಓಡಾಟ ಮೊದಲಿನಂತೆ ಮುಂದುವರೆಯಲಿದೆ.

ಮಂಗಳವಾರದ ಮಧ್ಯಾಹ್ನದ ಮಾಹಿತಿಯಂತೆ ದುಪದಾಳ ಜಲಾಶಯಕ್ಕೆ ಹಿಡಕಲ್ ಜಲಾಶಯದಿಂದ ೯೩೦೦ ಕ್ಯೂಸೆಕ್, ಹಿರಣ್ಯಕೇಶಿ ನದಿಯಿಂದ ೪೨೭೩ ಕ್ಯೂಸೆಕ್ ಸೇರಿ ೧೩೫೭೩ ಕ್ಯೂಸೆಕ್ ನೀರಿನ ಒಳಹರಿವು ಇದ್ದು, ಅದರಲ್ಲಿ ೧೧೧೭೩ ಕ್ಯೂಸೆಕ್ ಘಟಪ್ರಭಾ ನದಿಗೆ, ೨೪೦೦ ಕ್ಯೂಸೆಕ್ ನೀರನ್ನು ಜಿಎಲ್‌ಬಿಸಿ ಕಾಲುವೆಗೆ ಹರಿಸಲಾಗುತ್ತಿದೆ. ೫೧ ಟಿಎಂಸಿ ನೀರಿನ ಸಂಗ್ರಹವುಳ್ಳ ಹಿಡಕಲ್ ಜಲಾಶಯದಲ್ಲಿ ಮಂಗಳವಾರ ಮುಂಜಾನೆವರೆಗೆ ೪೮.೯೬೯ ನೀರು ಸಂಗ್ರಹವಾಗಿದೆ. ೭೭೧೫ ಕ್ಯೂಸೆಕ್ ಒಳಹರಿವು ಇದ್ದು, ಜಿಆರ್‌ಬಿಸಿ ಕಾಲುವೆಗೆ ೧೫೦೦ ಹಾಗೂ ನದಿಗೆ ೧೦೦೩೯ ಸೇರಿ ಒಟ್ಟು ೧೧೬೬೦ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ ಎಂದು ನೀರಾವರಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.