ತಗ್ಗಿದ ನೆರೆ: ನದಿ ತೀರದಲ್ಲಿ ಜನಜೀವನ ಸಹಜಸ್ಥಿತಿಗೆ
ಗ್ರಾಮಗಳು ಸಂಪೂರ್ಣ ಅಸ್ತವ್ಯಸ್ತ
Team Udayavani, Aug 18, 2019, 11:19 AM IST
ಹೂವಿನಹಡಗಲಿ: ತಾಲೂಕಿನ ನದಿ ತೀರದ ಪ್ರದೇಶಗಳಲ್ಲಿ ನೆರೆ ಹಾವಳಿಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು ಕಳೆದ 3-4 ದಿನಗಳಿಂದ ಸುಸ್ಥಿತಿಗೆ ಬರುತ್ತಿದೆ.
ಈ ಹಿನ್ನೆಲೆಯಲ್ಲಿ ನೆರೆ ನಷ್ಟ ಲಕ್ಷಾಂತರ ರೂಗಳಾಗಿದ್ದು ಜನತೆ ಆಸ್ತಿ ಪಾಸ್ತಿ ನಷ್ಟವಾಗಿರುವುದಲ್ಲದೆ ನೆರೆ ಬಂದ ಗ್ರಾಮಗಳಲ್ಲಿ ಈಗ ಸ್ವಚ್ಛತೆ ಸಮಸ್ಯೆ ಕಾಡುತ್ತಿದೆ. ರಸ್ತೆ ಚರಂಡಿಗಳು, ಕೆಲ ಕಡೆಗಳಲ್ಲಿ ಸಂಪೂರ್ಣ ಹಾಳಾಗಿದ್ದು ಇನ್ನೂ ಕೆಲವೊಂದು ಪ್ರದೇಶದಲ್ಲಿ ಅಲ್ಲಲ್ಲಿ ನಿಂತಿರುವ ನೀರನ್ನು ತೆರವುಗೊಳಿಸಬೇಕಾಗಿದೆ. ಜೊತೆಯಲ್ಲಿ ಯಾವುದೇ ರೀತಿಯಲ್ಲಿ ಸಾಂಕ್ರಾಮಿಕ ರೋಗಗಳು ಬಾರದಂತೆ ತಾಲೂಕು ಆಡಳಿತ ಮುಂಜಾಗ್ರತೆ ವಹಿಸಬೇಕಾಗಿದೆ.
ಕ್ರಮ: ತಾಲೂಕಿನ ಹಿರೇಬನ್ನಿ ಮಟ್ಟಿ, ಚಿಕ್ಕಬನ್ನಿ ಮಟ್ಟಿ, ಮಾಗಳ,ಕುರುವತ್ತಿ, ಮೊದಲಗಟ್ಟಿ ಗ್ರಾಮಗಳಲ್ಲಿ ಈಗಾಗಲೇ ಸ್ಥಳೀಯ ಗ್ರಾಪಂ ವತಿಯಿಂದಾಗಿ ಚರಂಡಿ, ಸ್ವಚ್ಛತೆ, ಫಾಗಿಂಗ್ ಹೊಡೆಯುವ ಕೆಲಸ ಸಾಗಿದೆ.
ನಷ್ಟದ ಅಂದಾಜು: ತಾಲೂಕಿನಲ್ಲಿ ನೆರೆ ಹಾವಳಿಯಿಂದಾಗಿ ಕೃಷಿಗೆ ಸಂಬಂಧಪಟ್ಟಂತೆ ಬೆಳೆ ಹಾನಿ 60.67 ಲಕ್ಷ ರೂಗಳಲ್ಲಿ 1567.55 ಹೆಕ್ಟೇರ್ ಪ್ರದೇಶದಲ್ಲಿ ನಷ್ಟವಾಗಿದ್ದರೆ, ತೋಟಗಾರಿಕೆಗೆ ಸಂಬಂಧಪಟ್ಟಂತೆ 64,100ರೂಗಳ 10 ಮನೆಗಳು, ತೀವ್ರಹಾನಿಯಾಗಿದ್ದು 19,65600 ರೂಗಳ ನಷ್ಟವಾಗಿದೆ. ಒಟ್ಟಾರೆಯಾಗಿ ತಾಲೂಕಿ ನಲ್ಲಿ ಅಂದಾಜು 81,29,700 ರೂ ನಷ್ಟ ಅಂದಾಜಿಸಲಾಗಿದೆ.
ಪರಿಹಾರ: ಈಗಾಗಲೇ ತಾಲೂಕಿನಲ್ಲಿ ನೆರೆ ಸಂತ್ರಸ್ತರಿಗೆ ತಾಲೂಕು ಆಡಳಿತ ಮಾಹಿತಿ ಪ್ರಕಾರವಾಗಿ ರೂ 5200ರಂತೆ ಒಟ್ಟು 342 ಜನರಿಗೆ ಪರಿಹಾರ ಧನ ವಿತರಣೆಯಾಗಿದೆ. ಇನ್ನೂ ಕೆಲ ಕಡೆ ವಿತರಣೆಯಾಗಿಲ್ಲ. ಈ ಕೂಡಲೇ ಪರಿಹಾರ ಧನ ವಿತರಿಸಬೇಕೆಂದು ಸಂತ್ರಸ್ತರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ