ಜಿಟಿಟಿಸಿ ತರಬೇತಿ ಕೇಂದ್ರ ಮಂಜೂರು
ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಸಚಿವ ಪರಮೇಶ್ವರನಾಯ್ಕ ಹೇಳಿಕೆ
Team Udayavani, Jul 14, 2019, 11:09 AM IST
ಹೂವಿನಹಡಗಲಿ: ಪಟ್ಟಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ತರಬೇತಿಗಳ ಉದ್ಘಾಟನಾ ಕಾರ್ಯಕ್ರಮವನ್ನು ರಾಜ್ಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಸಚಿವ ಪಿಟಿ.ಪರಮೇಶ್ವರನಾಯ್ಕ ಉದ್ಘಾಟಿಸಿದರು.
ಹೂವಿನಹಡಗಲಿ: ಈ ಭಾಗದ ಬಡವರಿಗೆ, ರೈತರ ಮಕ್ಕಳಿಗೆ ಅನುಕೂಲವಾಗಲು ಜಿಟಿಟಿಸಿ ತರಬೇತಿ ಕೇಂದ್ರವನ್ನು ಮಂಜೂರು ಮಾಡಲಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಪಿ.ಟಿ. ಪರಮೇಶ್ವರನಾಯ್ಕ ಹೇಳಿದರು.
ಪಟ್ಟಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂದಾಜು 27.50 ಕೋಟಿ ರೂ. ವೆಚ್ಚದಲ್ಲಿ ತರಬೇತಿ ಕೇಂದ್ರ ಮಂಜೂರು ಮಾಡಲಾಗಿದ್ದು ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೋಮಾ ಇತರೆ ವಿದ್ಯಾವಂತ ಯುವಕರಿಗೆ ಇದರ ಅವಶ್ಯಕತೆ ಇದೆ. ಅಲ್ಲದೆ ಈ ಭಾಗದಲ್ಲಿನ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಅನುಕೂಲವಾಗುತ್ತದೆ ಎಂದರು.
ಪ್ರಸ್ತುತ ಕೇಂದ್ರ ಪ್ರಾರಂಭ ಮಾಡಲು ಸರ್ಕಾರಿ ಐಟಿಐ ಕಾಲೇಜಿನ ಸುಮಾರು 14 ಎಕರೆ ಜಮೀನು ಇದ್ದು ಅಲ್ಲಿ ಎಲ್ಲ ಅನುಕೂಲ ಕಲ್ಪಿಸುವಂಥ ಕಟ್ಟಡ ನಿರ್ಮಿಸಲಾಗುವುದು. ಈ ಕಾಮಗಾರಿ ಪೂರ್ಣಗೊಳ್ಳುವವರೆಗೆ ಮಿನಿ ವಿಧಾನಸೌಧದ ಹಳೇ ಕಟ್ಟಡದಲ್ಲಿ ತರಬೇತಿ ಕೇಂದ್ರ ನಡೆಸಲಾಗುವುದು ಎಂದರು.
ಇನ್ನು ಈ ಭಾಗದಲ್ಲಿ ಲಂಬಾಣಿ ಸಮುದಾಯ ಒಳಗೊಂಡಂತೆ ಬಹುತೇಕ ಗ್ರಾಮೀಣ ಭಾಗದ ಜನ ಉದ್ಯೋಗ ಅರಸಿ ಕಾಫಿ ಸೀಮೆಗೆ ಹೋಗುತ್ತಿರುತ್ತಾರೆ. ಇದನ್ನು ತಡೆಯಲು ಸುಮಾರು 70-80 ಲಕ್ಷ ರೂ. ವೆಚ್ಚದಲ್ಲಿ ಕಸೂತಿ ಕೇಂದ್ರ ಪ್ರಾರಂಭಿಸಲಾಗುವುದು. ತರಬೇತಿ ಸಮಯದಲ್ಲಿ 5000ರೂ. ತರಬೇತಿ ಭತ್ತೆ ನೀಡಲಾಗುವುದು. ಇದಕ್ಕಾಗಿ ಈಗಾಗಲೇ ತಾಲೂಕಿನ ಸುಮಾರು 8 ತಾಂಡಾಗಳಿಂದ 387 ಆಸಕ್ತರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಮುಖಂಡರುಗಳಾದ ಐಗೊಳ್ ಚಿದಾನಂದ್, ವಾರದ ಗೌಸು ಮೊಹದ್ದಿನ್, ಅಟವಾಳಗಿ ಕೊಟ್ರೇಶ್ ಅರವಳ್ಳಿ ವೀರಣ್ಣ, ಬಿ.ಹನುಮಂತಪ್ಪ, ಜ್ಯೋತಿ ಮಲ್ಲಣ್ಣ, ತಾಪಂ ಅಧ್ಯಕ್ಷೆ ಕೆ. ಶಾರದಮ್ಮ, ಜಿಪಂ ಸದಸ್ಯೆ ವೀಣಾ ಪರಮೇಶ್ವರಪ್ಪ, ಎಸ್.ಎಂ. ಲಲಿತಾಬಾಯಿ ಸೋಮ್ಯಾನಾಯ್ಕ, ತಾಪಂ ಉಪಾಧ್ಯಕ್ಷೆ ಪುಷ್ಪಾವತಿ, ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ಎಚ್. ರಾಘವೇಂದ್ರ, ಜಿಲ್ಲಾ ಬಿಸಿಎಂ ಅಧಿಕಾರಿ ರಾಜಣ್ಣ, ತಹಶೀಲ್ದಾರ್ ಕೆ. ರಾಘವೇಂದ್ರರಾವ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯು.ಎಚ್. ಸೋಮಶೇಖರ್ ಮುಂತಾದವರು ಇದ್ದರು.
ಜಿಟಿಟಿಸಿ ಕಾಲೇಜು ಪ್ರಾಚಾರ್ಯ ಪುಂಡಲೀಕಾಕ್ಷ ಸ್ವಾಗತಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!