ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು
Team Udayavani, Jul 1, 2019, 3:05 PM IST
ಹೂವಿನಹಡಗಲಿ: ಹ್ಯಾರಡ ಗ್ರಾಮದ ಕೆರೆಗೆ ತುಂಗಭದ್ರಾ ನದಿಯಿಂದ ಪೈಪ್ ಲೈನ್ ಮೂಲಕ ನೀರು ಹರಿಯುವುದನ್ನು ಸಚಿವ ಪಿ.ಟಿ. ಪರಮೇಶ್ವರನಾಯ್ಕ ವೀಕ್ಷಿಸಿದರು.
ಹೂವಿನಹಡಗಲಿ: ತಾಲೂಕಿನ ಹ್ಯಾರಡ, ದಾಸನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಕುಡಿಯುವ ನೀರಿಗಾಗಿ ಸುಮಾರು 30ಕ್ಕೂ ಹೆಚ್ಚು ಕೊಳವೆ ಬಾವಿ ಕೊರೆಸಿದರೂ ಸಹ ನೀರು ದೊರಕದಂತಾಗಿದೆ ಎಂದು ಸಚಿವ ಪಿ.ಟಿ. ಪರಮೇಶ್ವರನಾಯ್ಕ ಆತಂಕ ವ್ಯಕ್ತಪಡಿಸದರು.
ತಾಲೂಕಿನ ಹ್ಯಾರಡ ಹಾಗೂ ದಾಸನಹಳ್ಳಿ ಗ್ರಾಮದ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರುಣಿಸುವ ಕಾರ್ಯಕ್ಕೆ ಸಚಿವರು ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ್ದು, ಹರಿಸಲಾಗಿರುವ ನೀರನ್ನು ತಡೆಯಲು ಶಾಕಾರ ಬಳಿ ಮರಳು ಚೀಲ ಹಾಕಿ ನಿಲ್ಲಿಸಲಾಗಿದೆ. ನೀರನ್ನು ಮೂರು ಕೆರೆಗಳಿಗೆ ಹರಿಸಲಾಗಿದೆ ಎಂದರು.
ಮಳೆಗಾಲ ಸಂದರ್ಭದಲ್ಲಿ ಈ ಕೆರೆಗಳಿಗೆ ನೀರು ತುಂಬಿಸಬೆಕಾಗಿದ್ದು, ಕಾರಣಾಂತರಗಳಿಂದ ಕಳೆದ ವರ್ಷದ ಮಳೆಗಾಲದಲ್ಲಿ ನೀರು ತುಂಬಿಸಲು ಆಗಲಿಲ್ಲ. ಈ ಬಾರಿ ಸಾಕಷ್ಟು ಮುಂಜಾಗ್ರತ ಕ್ರಮ ಕೈಗೊಂಡು ಕೆರೆ ತುಂಬಿಸಲು ಮುಂದಾಗಿದ್ದೇವೆ ಎಂದರು. ತುಂಗಭದ್ರಾ ನದಿಗೆ ಒಳ ಹರಿವು ಹೆಚ್ಚಾಗುತ್ತಿದ್ದಂತೆ ಮಾಗಳ ಜಾಕೋಲ್ ಮೂಲಕವಾಗಿ ತಾಲೂಕಿನ ಕೆರೆಗಳಿಗೆ ನೀರುಣಿಸಲಾಗುತ್ತದೆ. ಇದರಿಂದಾಗಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವುದಲ್ಲದೆ. ನೀರಿನ ಆಂತರ್ಜಲ ಮಟ್ಟ ಹೆಚ್ಚಾಗುತ್ತದೆ. ಇದರಿಂದಾಗಿ ರೈತರಿಗೆ ತಮ್ಮ ಕೃಷಿ ಚಟುವಟಿಕೆಗೆ ಅನುಕೂಲವಾಗಿ ಉತ್ತಮ ಬೆಳೆ ಬೆಳೆಯಲು ಅನುಕೂಲವಾಗುತ್ತದೆ ಎಂದರು.
ತಾಪಂ ಅಧ್ಯಕ್ಷೆ ಕೆ. ಶಾರದಮ್ಮ, ತಹಶೀಲ್ದಾರ್ ಕೆ. ರಾಘವೇಂದ್ರರಾವ್, ತಾಪಂ ಇಒ ಯು.ಎಚ್. ಸೋಮಶೇಖರ್, ಸಿಪಿಐ ಮಾಲತೇಶ್ ಕೋನಬೇವು, ಮುಖಂಡರಾದ ಕೊಟ್ರೇಶ್, ಜ್ಯೋತಿ ಮಲ್ಲಣ್ಣ ಎಲ್. ಚಂದ್ರನಾಯ್ಕ, ಜಿ. ವಸಂತ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ