16 ದಿನದಲ್ಲಿ ಕ್ಷೇತ್ರ ಸುತ್ತಿ ಮತಯಾಚಿಸುವೆ


Team Udayavani, Mar 24, 2019, 1:32 PM IST

m1-16dina

ಮೈಸೂರು: ಚಾಮರಾಜ ನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಮಾ.26ರಂದು ನಾಮಪತ್ರ ಸಲ್ಲಿಸುವುದಾಗಿ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್‌ ತಿಳಿಸಿದರು.

ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಮಪತ್ರ ಸಲ್ಲಿಸಿದ ನಂತರ ನಮಗೆ ಪ್ರಚಾರಕ್ಕೆ 16 ದಿನ ಕಾಲಾವಕಾಶ ಸಿಗುತ್ತದೆ. ಇದು ದೊಡ್ಡ ಸಮರ ಆಗಿರುವುದರಿಂದ ಈ ಚುನಾವಣೆಯನ್ನು ಸುಲಭವಾಗಿ ತೆಗೆದುಕೊಳ್ಳುವುದಿಲ್ಲ. ಬದಲಿಗೆ ಈ ಅವಧಿಯಲ್ಲಿ ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಮತಯಾಚನೆ ಮಾಡುವುದಾಗಿ ಹೇಳಿದರು.

ಈ ಬಾರಿಯೂ ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲೂ ಬಿಜೆಪಿ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಷ್ಟ್ರಮಟ್ಟದಂತೆ ರಾಜ್ಯದಲ್ಲೂ ದುರ್ಬಲವಾಗಿರುವ ಕಾಂಗ್ರೆಸ್‌ ಪಕ್ಷ ಎಂಟು ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಬಗ್ಗೆ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಅಸಮಾಧಾನವಿದ್ದರೆ, ಎರಡೂ ಪಕ್ಷಗಳ ಮೈತ್ರಿಯಲ್ಲಿ ಅಪಸ್ವರ ಎದ್ದಿದೆ ಎಂದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪಕ್ಷದ ಕೇಂದ್ರ ನಾಯಕರಿಗೆ ಕಪ್ಪ ಕಾಣಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್‌ ಡೈರಿ ಬಿಡುಗಡೆ ಮಾಡಿರುವುದು ರಾಜಕೀಯ ಪ್ರೇರಿತ ಆರೋಪ ಅಷ್ಟೆ, ಇದರಿಂದ ಚುನಾವಣೆಯಲ್ಲಿ ಬಿಜೆಪಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ.

ಚುನಾವಣೆ ಸಂದರ್ಭದಲ್ಲಿ ಇಂಥವೆಲ್ಲಾ ಸಹಜ, ಯಾರು ಇದನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದ ಅವರು, ನಾವು ಇಂತಹ ಸಾಕಷ್ಟು ಆರೋಪಗಳನ್ನು ಮಾಡಬಹುದು, ಆದರೆ ನಮಗೆ ಇಂಥದ್ದರಲ್ಲಿ ನಂಬಿಕೆ ಇಲ್ಲ ಎಂದರು.

ಗುರು-ಶಿಷ್ಯ ಸಂಬಂಧ ಈಗ ಉಳಿದಿಲ್ಲ. ಅದೇನಿದ್ದರೂ ರಾಮಾಯಣ-ಮಹಾಭಾರತ ಕಾಲಕ್ಕೇ ಮುಗಿಯಿತು. ಈಗ ಅವರು ಕಾಂಗ್ರೆಸ್‌-ನಾನು ಬಿಜೆಪಿ ಅಭ್ಯರ್ಥಿ ಅಷ್ಟೇ ಎನ್ನುವ ಮೂಲಕ ನಾನು ಶ್ರೀನಿವಾಸಪ್ರಸಾದ್‌ ಅವರ ಶಿಷ್ಯನಲ್ಲ ಎಂಬ ಆರ್‌.ಧ್ರುವನಾರಾಯಣ್‌ ಹೇಳಿಕೆಗೆ ತಿರುಗೇಟು ನೀಡಿದರು.

ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಈಗ ಅವರು ಬೇರೆ ಪಕ್ಷ-ನಾನು ಬೇರೆ ಪಕ್ಷ, ಇಲ್ಲಿ ಗುರು-ಶಿಷ್ಯ ಎಂಬುದೆಲ್ಲಾ ಲೆಕ್ಕಕ್ಕೆ ಬರುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಇದಕ್ಕೆಲ್ಲಾ ಉತ್ತರ ಕೊಡುತ್ತಾರೆ ಎಂದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧೆ ವಿಚಾರ ನಮ್ಮ ಕೈಲಿಲ್ಲ, ಅದು ಪ್ರಧಾನಿ ನರೇಂದ್ರಮೋದಿ, ಪಕ್ಷದ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಬಿಟ್ಟ ವಿಚಾರ, ಇಲ್ಲಿನ ಬೆಳವಣಿಗೆಗಳು ಅವರ ಗಮನದಲ್ಲಿದೆ. ಸುಮಲತಾ ಪಕ್ಷೇತರರಾಗಿ ಸ್ಪರ್ಧೆ ಮಾಡಿರುವುದರಿಂದ ಮಂಡ್ಯ ಕ್ಷೇತ್ರದಲ್ಲಿ ಪರಿಸ್ಥಿತಿ ಬೇರೆಯೇ ಇದೆ.

ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರಿಸ್ಥಿತಿ ಕೆಟ್ಟದಾಗಿದೆ, ಕಾರ್ಯಕರ್ತರನ್ನು ಅಮಾನತು ಮಾಡುತ್ತಿದ್ದಾರೆ. ಈ ಬೆಳವಣಿಗೆಗಳನ್ನು ಗಮನಿಸಿ ಪಕ್ಷದ ವರಿಷ್ಠರು ಸುಮಲತಾ ಅವರಿಗೆ ಬೆಂಬಲ ಕೊಡಬೇಕೋ, ಬೇಡವೋ ಎಂಬುದನ್ನು ನಿರ್ಧರಿಸುತ್ತಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.