ಸಿರಿಧಾನ್ಯ ಆರೋಗ್ಯಕ್ಕೆ ಪೂರಕ

ರಾಸಾಯನಿಕ ಗೊಬ್ಬರ ಬಳಸಬೇಡಿ ಲೋಣಿ ಗ್ರಾಮದಲ್ಲಿ ಸಿರಿಧಾನ್ಯ ಕ್ಷೇತ್ರೋತ್ಸವ

Team Udayavani, Oct 21, 2019, 1:36 PM IST

21-October-13

ಇಂಚಗೇರಿ: ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರು ಸದೃಢವಾಗಿರಲುಅವರು ಸೇವನೆ ಮಾಡುವ ಆಹಾರ ಕಾರಣವಾಗಿತ್ತು. ರೈತರು ಜಮೀನಿನಲ್ಲಿ ತಮ್ಮ ಕುಟುಂಬದ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಸಿರಿಧಾನ್ಯ ಬೆಳೆ ಬೆಳೆದು ಬಳಸಬೇಕು ಎಂದು ಮಹಾಂತೇಶ ಮಹಾಸ್ವಾಮಿಗಳು ಹೇಳಿದರು.

ಲೋಣಿ ಗ್ರಾಮದ ಮಲ್ಲೇಶಪ್ಪ ಕಲ್ಯಾಣಶೆಟ್ಟಿ ಅವರ ತೋಟದಲ್ಲಿ ಕೃಷಿ ಇಲಾಖೆ ಇಂಡಿ, ಆತ್ಮಾಯೋಜನೆಯಡಿ ಕೃಷಿ ವಿಜ್ಞಾನಕೇಂದ್ರ,
ಸಹಯೋಗದಲ್ಲಿ ಹಮ್ಮಿಕೊಮಡಿದ್ದ ಕಿಸಾನ್‌ ಗೋಷ್ಠಿ ಮತ್ತು ಸಿರಿಧಾನ್ಯ ಕ್ಷೇತ್ರೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತರು ಹೆಚ್ಚಿನ ಆದಾಯಕ್ಕೊಸ್ಕರ ಕಬ್ಬು, ತೊಗರಿ, ಜೋಳ, ಮೆಕ್ಕೆಜೋಳ, ಇನ್ನು ಅನೇಕ ಬೆಳೆಗಳು ನಾವು ಬೆಳೆಯುತ್ತಿದ್ದೇವೆ. ನಮ್ಮ ತೋಟದಲ್ಲಿ ನೈಸರ್ಗಿಕ ಸಾವಯುವ ಪದ್ದತಿಯಿಂದ ಬೆಳೆಯುತ್ತಿದ್ದೇವೆ. ವಿಷಕಾರಿ ರಾಸಾಯನಿಕ ಗೊಬ್ಬರಗಳಿಲ್ಲದೆ ಆರೋಗ್ಯಕ್ಕೆ ಹೆಚ್ಚು ಲಾಭವಾಗುವ ಸಿರಿಧಾನ್ಯ ಬೆಳೆಗಳಾದ ನವಣಿ, ಹಾರಕ, ಸಾಮೆ, ಕೊರಲೆ, ಬರಗು, ಊದಲು, ಸಜ್ಜೆ, ಜೋಳ, ರಾಗಿಗೆ ಮಾರು ಕಟ್ಟೆಯಲ್ಲಿ ಉತ್ತಮ ಬೆಲೆಯಿದೆ. ಎಂದರು.

ವಿಷಕಾರಿ ಕ್ರಿಮಿನಾಶಕ ಗೊಬ್ಬರ, ಔಷಧಯುಕ್ತ ಬೆಳೆಗಳನ್ನು ಬೆಳೆದು ತಿನ್ನುವುದರಿಂದ ಆರೋಗ್ಯಕ್ಕೆ ಹಾನಿಕಾರಕ. ಆತ್ಮ ಉಪ ಯೋಜನಾ ನಿರ್ದೇಶಕ ಡಾ| ಎಂ.ಬಿ. ಪಟ್ಟಣಶೆಟ್ಟಿ ಮಾತನಾಡಿ, ಕಡಿಮೆ ಮಳೆ ಮತ್ತುಎಲ್ಲ ಹವಾಮಾನಕ್ಕೆ ತಕ್ಕಂತೆ ಬೆಳೆಯುವ ಸಿರಿಧಾನ್ಯವನ್ನು ರೈತರು ಹೆಚ್ಚಾಗಿ ಬೆಳೆಯಬೆಕು. ವಿಜಯಪುರ ಜಿಲ್ಲೆಯಲ್ಲಿ ಅತಿ ಕಡಿಮೆ ಮಳೆ ಆಗುವ ಪ್ರದೇಶ. ಅದಕ್ಕಾಗಿ ರೈತರು ಸಿರಿಧಾನ್ಯ ಬೆಳೆಗೆ ಅವಲಂಬನೆಯಾಗಬೇಕು. ಸಿರಿಧಾನ್ಯ ಬೆಳೆಗಳು ಬೆಳೆದ ನಂತರ ಮಾರುಕಟ್ಟೆ ಬೇಡಿಕೆ ಇಲ್ಲ, ಅವುಗಳನ್ನು ತೆಗೆದುಕೊಳ್ಳಲು ಹಿಂಜರಿಯುತ್ತಾರೆ ಎನ್ನುವ ಭಯ ರೈತರಲ್ಲಿ ಇದೆ. ನಿಮ್ಮ ಜಮೀನಿನಲ್ಲಿ ನಿಮ್ಮ ಕುಟುಂಬಕ್ಕೆ ಬೇಕಾಗುವಷ್ಟು ಬೆಳೆದು ಉಳಿದ ಧಾನ್ಯ ನಮ್ಮ ಕೃಷಿ ಕೇಂದ್ರದಲ್ಲಿ ಮಾರಟ ಮಾಡಬಹುದುಎಂದು ಹೇಳಿದರು.

ಕೃಷಿ ವಿಜ್ಞಾನ ಕೇಂದ್ರದ ಡಾ| ವೈ.ರವಿ ಮಾತನಾಡಿ, ಸಿರಿಧಾನ್ಯ ಬೆಳೆಯ ಮಹತ್ವ ಮತ್ತು ಆರೋಗ್ಯಕ್ಕೆ ಆಗುವ ಲಾಭಗಳ ಕುರಿತು ಮಾಹಿತಿ ನೀಡಿದರು. ಚಡಚಣ ಕೃಷಿ ಅಧಿಕಾರಿ ಲಕ್ಷ್ಮೀ ಕಾಮಗೊಂಡ ಮಾತನಾಡಿದರು, ಲೋಣಿ ಗ್ರಾಪಂಅಧ್ಯಕ್ಷೆ ಸುರೇಖಾ ಮಾಳಾಬಗಿ, ಪ್ರಗತಿಪರ ರೈತರಾದ ಅಣ್ಣಾರಾಯ ಮೇತ್ರಿ, ಸಿದ್ದಣ್ಣ ಕೋಳಿ, ಬಾಪುರಾಯ ಪಾಟೀಲ, ರಾಜಶೇಖರ ನಿಂಬರಗಿ, ಎಸ್‌.ಟಿ. ಪಾಟೀಲ, ಮುದ್ದುಗೌಡ ಪಾಟೀಲ, ಮಲ್ಲಪ್ಪ ಕುಂಬಳಿ, ಮಲ್ಲಯ್ಯ ಕಾಂಬಳೆ, ಗಜಾನಂದ ಬನಸೋಡೆ, ರವಿ ವಾಘಮೋರೆ, ತುಕಾರಾಮ ನಾಯಕ ಇದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.