ಇಂಡಿಯಲ್ಲಿ ಜನರ ದಾಹ ತಣಿಸುತ್ತಿರುವ ಸಂಜು

ಸ್ವಂತ ಹಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ

Team Udayavani, May 12, 2019, 10:53 AM IST

11-March-7

ಇಂಡಿ: ಪಟ್ಟಣದ ಬಸ್‌ ನಿಲ್ದಾಣದ ಮುಂಭಾಗದಲ್ಲಿ ಮಡಿಕೆಗಳನ್ನಿಟ್ಟು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ ಯುವಕ ಸಂಜು ಪವಾರ

ಇಂಡಿ: ಭೀಕರ ಬರಗಾಲಕ್ಕೆ ತುತ್ತಾದ ತಾಲೂಕು. ಕೆಂಡದಂತಹ ಬಿಸಿಲು ಸುಡು ಗಾಳಿಯಿಂದ ಬಸವಳಿದು ನೀರಿಗಾಗಿ ಹುಡುಕಾಡುವ ಜನಕ್ಕೆ ಹೋಟೆಲ್ಗಳಿಗೆ ಹೋದರೆ ಕನಿಷ್ಠ ಐದು ರೂ. ಖರ್ಚು ಮಾಡಿ ಚಹಾ ಕುಡಿದರೆ ಒಂದು ಲೋಟ ನೀರು ನೀಡುವ ಸಮಯದಲ್ಲಿ ಉಚಿತವಾಗಿ ತಣ್ಣನೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಯುವಕನೊಬ್ಬ ಇತರರಿಗೆ ಮಾದರಿಯಾಗಿದ್ದಾನೆ.

ಬಸ್‌ ನಿಲ್ದಾಣದ ಮುಂಭಾಗ, ಸಿಂದಗಿ ರಸ್ತೆಯ ಮಿನಿ ವಿಧಾನಸೌಧ ಮುಂಭಾಗ, ಪೊಲೀಸ್‌ ಠಾಣೆ ಹತ್ತಿರ, ಅಂಬೇಡ್ಕರ್‌ ಹಾಗೂ ಮಹಾವೀರ ವೃತ್ತದಲ್ಲಿ ಮಡಿಕೆಗಳಲ್ಲಿ ತಣ್ಣನೆ ನೀರು ತುಂಬಿಸಿ ಬಿಸಿಲಿನಿಂದ ಬಾಯಾರಿದ ಜನರ ದಾಹ ತಣಿಸುತ್ತಿರುವ ಪಟ್ಟಣದ ಬೀರಪ್ಪ ನಗರದ ನಿವಾಸಿ ಸಂಜು ಪವಾರ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ಮಾ. 15ರಿಂದಲೇ ಪಟ್ಟಣದ ವಿವಿಧೆಡೆ ತನ್ನ ಸ್ವಂತ ಖರ್ಚಿನಿಂದ 30 ಮಡಿಕೆ ಖರೀದಿಸಿ ಪ್ರತಿ ದಿನ ಕನಿಷ್ಠ ಎರಡು ಬಾರಿಯಾದರೂ ಅವುಗಳಿಗೆ ನೀರು ತುಂಬಿಸುತ್ತಾನೆ. ಗ್ರಾಮೀಣ ಭಾಗದಿಂದ ಬಂದ ಜನರಿಗೆ ಹಾಗೂ ಬಿಸಿಲಿನಲ್ಲಿ ತಿರುಗಾಡಿ ಬಾಯಾರಿದ ಸ್ಥಳೀಯರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದ್ದು ಕಳೆದ ನಾಲ್ಕು ವರ್ಷಗಳಿಂದ ನೀರಿನ ಸೇವೆ ಮಾಡುತ್ತಿದ್ದಾನೆ. ಪಟ್ಟಣಕ್ಕೆ ಬರುವ ಪ್ರವಾಸಿಗರು, ವಿವಿಧ ಗ್ರಾಮಗಳ ಜನರು ಬಾಯ್ತುಂಬ ಹರಸಿ ಹಾರೈಸುತ್ತ ಹೋಗುತ್ತಿದ್ದಾರೆ.

ಬರದ ನಾಡಿನಲ್ಲಿ ನೀರು ನೀಡುತ್ತಿರುವ ಸಂಜು ಪವಾರ ಅವರ ಕಾರ್ಯವನ್ನು ಜನ ಸಾಮಾನ್ಯರು ಶ್ಲಾಘಿಸುತ್ತಿದ್ದಾರೆ. ಸರ್ಕಾರ ಮಾಡದಿರುವ ಕಾರ್ಯವನ್ನು ಸಂಜು ಪವಾರ ಮಾಡುತ್ತಿದ್ದಾರೆ. ಸ್ವಂತ ಟ್ರ್ಯಾಕ್ಟರ್‌ ಹೊಂದಿರುವ ಅವರು ಬೇರೆಯವರ ಹತ್ತಿರ ಹಣ ಕೊಟ್ಟು ನೀರು ತುಂಬಿಸಿಕೊಂಡು ಬಂದು ಮಡಿಕೆ ತುಂಬಿಸುತ್ತಿದ್ದಾರೆ. ಮಡಿಕೆಯಲ್ಲಿ ನೀರು ಖಾಲಿಯಾದೊಡನೆ ಅವರು ತಡಮಾಡದೆ ಮತ್ತೆ ನೀರು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ.

ಈ ಮಡಿಕೆ ಇಟ್ಟ ದಿನದಿಂದ ಬಾಟಲ್ ನೀರಿಗೆ ಮೊರೆ ಹೋಗಿದ್ದ ಇಂಡಿ ಪಟ್ಟಣದ ಜನ ಮಡಿಕೆ ನೀರಿಗೆ ಮರಳಿರುವುದು ವಿಶೇಷವಾಗಿದೆ. ಸಂಜು ಪವಾರ ಮಾಡಿದ ಈ ಕಾರ್ಯವನ್ನು ಪ್ರತಿ ಗ್ರಾಮ ಹಾಗೂ ಪಟ್ಟಣಗಳಲ್ಲಿ ಗ್ರಾಪಂ, ಪಪಂ, ಪುರಸಭೆಯವರು ಮಾಡಿದರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದೆಂದು ಜನ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಪ್ರತಿ ಬಾರಿಯೂ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗುತ್ತಿದೆ. ಹಳ್ಳಿಗಳಿಂದ ಬಂದ ಜನ, ಕಾಲೇಜು ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗುತ್ತಿರುವುದನ್ನು ಕಂಡು ಈ ಕಾರ್ಯ ಮಾಡಿದ್ದೇನೆ. ನನ್ನದೇ ಸ್ವಂತ ಟ್ಯಾಂಕರ್‌ ಇರುವುದರಿಂದ ನೀರು ಕೊಟ್ಟು ಹಣ ತುಂಬಿಕೊಂಡು ಮಡಿಕೆ ತುಂಬಿಸಿ ಕೈಲಾದಷ್ಟು ಸೇವೆ ಮಾಡುತ್ತಿದ್ದೇನೆ.
ಸಂಜು ಪವಾರ, ಬೀರಪ್ಪ ನಗರದ ನಿವಾಸಿ

ಕಳೆದ ನಾಲ್ಕು ವರ್ಷಗಳಿಂದ ಪಟ್ಟಣದ ಯುವಕ ಸಂಜು ಪವಾರ ಜನರ ನೀರಿನ ದಾಹ ತೀರಿಸುವ ಕೆಲಸ ಮಾಡುತ್ತಿದ್ದಾನೆ. ನೀರು ಪೂರೈಸುತ್ತಿರುವವನಿಗೆ ಒಳ್ಳೆಯದಾಗುತ್ತದೆ. ಬೇಸಿಗೆಯಲ್ಲಿ ಇಂತಹ ಕಾರ್ಯ ಮಾಡಿದ ಕಾರ್ಯ ಶ್ಲಾಘನೀಯ. ತಾಲೂಕಿಗೆ ಸಂಜು ಪವಾರ ಒಬ್ಬ ಮಾದರಿ ಯುವಕನಾಗಿದ್ದಾನೆ.
ಅಶೋಕಗೌಡ ಬಿರಾದಾರ,
ಸ್ಥಳೀಯ ನಿವಾಸಿ

ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.