ಐಪಿಎಲ್ ಟಿ-20 ಪಂದ್ಯ; ಮೆಟ್ರೋ ಹೆಚ್ಚುವರಿ ಸೇವೆ
Team Udayavani, Mar 24, 2019, 12:37 PM IST
ಬೆಂಗಳೂರು: ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.28 ರಿಂದ ಮೇ 04 ರವರೆಗೂ ನಡುಲಿರುವ ವಿವಿಧ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯ ಹಿನ್ನೆಲೆ, ಪಂದ್ಯ ವೀಕ್ಷಣೆಗೆ ಬರುವವರ ಅನುಕೂಲಕ್ಕಾಗಿ “ನಮ್ಮ ಮೆಟ್ರೋ’ ಸೇವೆಯನ್ನು ಮಧ್ಯರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.28, ಏಪ್ರಿಲ್ 5, 21,24, 30 ಹಾಗೂ ಮೇ 4 ರಂದು ಐಪಿಎಲ್ ಪಂದ್ಯಾವಳಿಗಳು ನಿಗದಿಗೊಂಡಿವೆ. ಈ ಹಿನ್ನೆಲೆಯಲ್ಲಿ ಮೆಟ್ರೋ ತನ್ನ ವಾಣಿಜ್ಯ ಸಂಚಾರ ಸೇವೆಯನ್ನು ವಿಸ್ತರಿಸಿದ್ದು, ಆ ದಿನಗಳಲ್ಲಿ ರಾತ್ರಿ 12.30ಕ್ಕೆ ಬೈಯಪ್ಪನಹಳ್ಳಿ, ಮೈಸೂರು ರಸ್ತೆ, ಯಲಚೇನಹಳ್ಳಿ ಮತ್ತು ನಾಗಸಂದ್ರದಿಂದ ಮೆಜೆಸ್ಟಿಕ್ ಕಡೆ ರೈಲು ಹೊರಡಲಿದೆ.
ಕೊನೆದಿನ ಸೇವೆಯು ಕೆಂಪೇಗೌಡ ನಿಲ್ದಾಣದಿಂದ ಎಲ್ಲ ನಾಲ್ಕೂ ದಿಕ್ಕುಗಳಿಗೂ ಮಧ್ಯರಾತ್ರಿ 1 ಗಂಟೆ ವರೆಗೆ ಸಿಗಲಿದೆ. ಪಂದ್ಯ ಮುಗಿದ ನಂತರ ಪ್ರಯಾಣಿಕರು ಟೋಕನ್ಗಾಗಿ ಕಾಯದಿರಲು “ರಿಟರ್ನ್ಜರ್ನಿ ಪೇಪರ್’ ಟಿಕೆಟ್ ಪರಿಚಯಿಸಲಾಗಿದೆ. ಈ ಟಿಕೆಟ್ಗಳನ್ನು ಪ್ರಯಾಣಿಕರು ಮಧ್ಯಾಹ್ನ 3 ಗಂಟೆಯಿಂದ ಸಂಜೆ 7ರವರೆಗೆ ಯಾವುದೇ ಮೆಟ್ರೋ ನಿಲ್ದಾಣಗಳಿಂದ ಖರೀದಿಸಬಹುದು.
ಈ ಪೇಪರ್ ಟಿಕೆಟ್ಗಳು ಪಂದ್ಯಾವಳಿ ದಿನದ ಕೊನೆಯ ಮೆಟ್ರೋ ರೈಲು ಸೇವೆವರೆಗೆ ಮಾತ್ರ ಅನ್ವಯ ಆಗಲಿದೆ. ಪಂದ್ಯದ ದಿನದಂದು ಕಬ್ಬನ್ ಪಾರ್ಕ್ ಮೆಟ್ರೋ ರೈಲು ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಗಳಿಗೆ ರಾತ್ರಿ 10 ಗಂಟೆ ನಂತರ ಪ್ರಯಾಣ ದರ 50 ರೂ. ಇರಲಿದೆ.
ಈ ದಿನಗಳಲ್ಲಿ ರಾತ್ರಿ 10ರ ನಂತರ ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಸಾಮಾನ್ಯ ಟೋಕನ್ ಮಾರಾಟವಿರುವುದಿಲ್ಲ. ಇಲ್ಲಿನಿಂದ ಪ್ರಯಾಣಿಸುವಾಗ ಪೇಪರ್ ಟಿಕೆಟ್ ಮಾತ್ರ ಉಪಯೋಗಿಸಬೇಕು. ಇನ್ನು ಏ.7ರಂದು ಸಂಜೆ 4 ಗಂಟೆಗೆ ಪಂದ್ಯವಿರುವುದರಿಂದ ಅಂದು ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಬೆಳಗ್ಗೆ 11 ಮಧ್ಯಾಹ್ನ 3 ಗಂಟೆವರೆಗೆ ಪೇಪರ್ ಟಿಕೆಟ್ ಲಭ್ಯವಿರುತ್ತವೆ. ಉಳಿದಂತೆ ಟೋಕನ್, ಸ್ಪಾರ್ಟ್ಕಾರ್ಡ್ ಉಪಯೋಗ ಎಂದಿನಂತೆ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್