ಜಗಳೂರು ರಸ್ತೆಗಳೆಲ್ಲ ಗುಂಡಿಮಯ…!
Team Udayavani, Oct 13, 2019, 11:04 AM IST
ರವಿಕುಮಾರ ಜೆ.ಓ.
ಜಗಳೂರು: ಪಟ್ಟಣದ ಮುಖ್ಯ ಸೇರಿದಂತೆ ಬಹುತೇಕ ರಸ್ತೆಗಳಲ್ಲಿ ಡಾಂಬರ್ ಕಿತ್ತು ಹೋಗಿ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದ್ದರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಪಟ್ಟಣದಲ್ಲಿ ಇರುವುದೊಂದೇ ಮುಖ್ಯ ರಸ್ತೆ ಅದು ಕೂಡ ರಾಜ್ಯ ಹೆದ್ದಾರಿಯಾಗಿ ಪರಿವರ್ತನೆಯಾಗಿದ್ದು, ಪ್ರತಿನಿತ್ಯ ನೂರಾರು ವಾಹನಗಳ ಸಂಚಾರ ನಡೆಸುತ್ತಿವೆ. ಜತೆಗೆ ಬೃಹದಾಕಾರದ ಲಾರಿಗಳು ಸಹ ಓಡಾಟ ನಡೆಸುವುದರಿಂದ ರಸ್ತೆ ಹದಗೆಡಲು ಪ್ರಮುಖ ಕಾರಣ ಎನ್ನಲಾಗಿದೆ.
ರಸ್ತೆಗೆ ಡಾಂಬರೀಕರಣ ಮಾಡಿ ಹಲವಾರು ವರ್ಷಗಳೇ ಕಳೆದಿವೆ. ಇಲಾಖೆಯುವರು ಮರು ಡಾಂಬರೀಕರಣ ಮಾಡಿಲ್ಲ. ಪಟ್ಟಣಕ್ಕೆ ಮುಖ್ಯಮಂತ್ರಿ, ಸಚಿವರು ಬರುತ್ತಾರೆಂದರೆ ಮಾತ್ರ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುತ್ತಾರೆ ವಿನಃ ಶಾಶ್ವತ ಪರಿಹಾರ ಇದುವರೆಗೂ ಮಾಡಿಲ್ಲ. ಇದರಿಂದಾಗಿ ಗುಂಡಿ ಬಿದ್ದ ರಸ್ತೆಗಳಲ್ಲಿ ವಾಹನ ಸವಾರರು ಸಂಚಾರ ಮಾಡುವಂತಾಗಿದೆ ಎನ್ನುತ್ತಾರೆ ವ್ಯಾಪಾರಿ ನಿಂಗಪ್ಪ.
ಪಟ್ಟಣದ ಮಹಾತ್ಮಾ ಗಾಂಧಿಧೀಜಿ (ಹಳೆ ಬಸ್ ನಿಲ್ದಾಣ) ದಿಂದ ಅಂಬೇಡ್ಕರ್ ವೃತ್ತ, ಬಿದರಕೆರೆ ರಸ್ತೆ, ದಾವಣಗೆರೆ ರಸ್ತೆ ಸೇರಿದಂತೆ ಬಹುತೇಕ ರಸೆಗಳಲ್ಲಿ ಡಾಂಬರ್ ಕಿತ್ತು ಹೋಗಿರುವುದರಿಂದ ರಸ್ತೆಯ ತುಂಬ ಹದಗೆಟ್ಟಿದೆ. ಹಳೆ ಬಸ್ ನಿಲ್ದಾಣವು ಚಳ್ಳಕೆರೆ, ಚಿತ್ರದುರ್ಗ, ಕೊಟ್ಟೂರಿಗೆ ಪ್ರತಿನಿತ್ಯ ನೂರಾರು ಬಸ್ಗಳು ಮತ್ತು ಬೃಹತ್ ಲಾರಿಗಳು ಸಂಚರಿಸುತ್ತಿವೆ. ವಾಹನಗಳಿಂದಲೇ ಬೃಹದಾಕಾರದ ಗುಂಡಿಗಳು ಬಿದ್ದಿವೆ. ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿರುವುದರಿಂದ ರಸ್ತೆಗಳು ಇನ್ನಷ್ಟು ಹದಗೆಟ್ಟಿದ್ದು, ಅರ್ಧ ಅಡಿಗೂ ಹೆಚ್ಚು ಹಳದವರೆಗೆ ಗುಂಡಿಗಳು ನಿರ್ಮಾಣವಾಗಿವೆ. ಈ ರಸೆಯಲ್ಲಿ ಚಿಕ್ಕಪುಟ್ಟ ವಾಹನಗಳು ಸಂಚರಿಸಲು ಹರಸಾಹಸ ಪಡುವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ