ನರೇಗಾ ಭ್ರಷ್ಟಾಚಾರದ ತನಿಖೆ ಶುರು

ಜಗಳೂರು ತಾಲೂಕಿನ 22 ಗ್ರಾಪಂಗಳಲ್ಲಿ ಅಕ್ರಮ-ದೂರುತನಿಖಾ ತಂಡದಿಂದ ಕಾಮಗಾರಿ ಪರಿಶೀಲನೆ

Team Udayavani, Oct 18, 2019, 11:23 AM IST

18-October-4

ಜಗಳೂರು: ಬೆಳಗ್ಗೆಯಿಂದ ತನಿಖಾ ತಂಡದವರು ಬರುತ್ತಾರೆ ಎಂದು ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾದು ಕಾದು, ಸಂಜೆ ಇನ್ನೇನು ಮನೆಗೆ ಹೋಗೋಣ ಎನ್ನುವ ವೇಳೆ ಆಗಮಿಸಿದ ತನಿಖಾ ತಂಡದವರು ಕತ್ತಲಲ್ಲಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ತಾಲೂಕಿನ 22 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ವ್ಯಾಪಕ ಅಕ್ರಮ ನಡೆದಿರುವ ಬಗ್ಗೆ ದೂರುಗಳ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಆಯುಕ್ತರು ಒಟ್ಟು 7 ತನಿಖಾ ತಂಡಗಳನ್ನು ರಚಿಸಿದ್ದು, ಒಂದು ವಾರದೊಳಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

ತಾಲೂಕಿನ ಹಿರೇಮಲ್ಲನಹೊಳೆ, ಮುಸ್ಟೂರು, ದೋಣಿಹಳ್ಳಿ. ಕಲ್ಲೇದೇವರಪುರ, ತೋರಣಗಟ್ಟೆ, ಬಿದರಕೆರೆ. ಬಿಸ್ತುವಳ್ಳಿ, ಗುತ್ತಿದುರ್ಗ, ಹಾಲೇಕಲ್ಲು ಗ್ರಾಮಗಳ ವ್ಯಾಪ್ತಿ ಹೊಂದಿರುವ ತನಿಖಾ ತಂಡಗಳು ಅ. 17ರಿಂದ ತನಿಖೆ ಆರಂಭಿಸಬೇಕಿತ್ತು.

ತನಿಖಾ ತಂಡಗಳು ಬರುವ ಹಿನ್ನಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒ ಮತ್ತು ಅಧಿಕಾರಿಗಳು ದಾಖಲಾತಿಗಳನ್ನು ಸಿದ್ಧಪಡಿಸಿಕೊಂಡು ಬೆಳಗ್ಗೆಯಿಂದ ಕಾಯುತ್ತಿದ್ದರೂ ಸಂಜೆಯವರೆಗೆ ತನಿಖಾ ತಂಡದ ಸುಳಿವೇ ಇರಲಿಲ್ಲ ಸಂಜೆ 6 ಗಂಟೆ ವೇಳೆ ತಾಲೂಕಿನ ಮುಸ್ಟೂರು ಗ್ರಾಮಕ್ಕೆ ಹಾಸನ ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಮಹೇಶ್‌, ನೋಡಲ್‌ ಅಧಿಕಾರಿ ಲಕ್ಷ್ಮೀಕಾಂತ್‌, ತುಮಕೂರು ಜಿಲ್ಲಾ ಪಂಚಾಯತ್‌ನ ಡಿಎಂಐಎಸ್‌ ಮಲ್ಲಿಕಾರ್ಜುನ ಸ್ವಾಮಿ, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್‌ನ ತಾಂತ್ರಿಕ ಸಂಯೋಜಕ ಪುನೀತ್‌ ಎ.ಎಸ್‌ ಒಳಗೊಂಡ ತಂಡ ಆಗಮಿಸಿತು. ತಂಡ ನರೇಗಾ ಯೋಜನೆಯಡಿ ನಿರ್ಮಿಸಿದ ಶಾಲಾ ಕಾಂಪೌಂಡ್‌, ರಸ್ತೆ ಸೇರಿದಂತೆ ಇತರೆ ಕಾಮಗಾರಿಗಳನ್ನು ಕತ್ತಲೆಯಲ್ಲಿಯೇ ಪರಿಶೀಲಿಸಿತು.

ತಾಲೂಕಿನ ಹಿರೇಮಲ್ಲನಹೊಳೆ, ಗುರುಸಿದ್ದಪುರ, ಕೆಚ್ಚೇನಹಳ್ಳಿ, ಹನುಮಂತಪುರ , ದಿದ್ದಿಗಿ, ಕ್ಯಾಸೇನಹಳ್ಳಿ ಗ್ರಾಮ ಪಂಚಾಯಿತಿಗಳು ಸೇರಿದಂತೆ ಬಹುತೇಕ ಗ್ರಾಂ ಪಂಚಾಯಿತಿಗಳಲ್ಲಿ ನಕಲಿ ಜಾಬ್‌ ಕಾರ್ಡ್‌ಗಳನ್ನು ಶಾಲಾ ಮಕ್ಕಳು ಮತ್ತು ಸತ್ತವರ ಹೆಸರಿನಲ್ಲಿ ಕೂಡ ಸೃಷ್ಟಿಸಿ 10 ಕೋಟಿಗೂ ಹೆಚ್ಚಿನ ಅಕ್ರಮ, ಒಂದು ಕಾಮಗಾರಿಗೆ ನಾಲ್ಕೈದು ಬಾರಿ ಬಿಲ್‌ ಪಾವತಿ, ಕೆರೆ, ಗೊಕಟ್ಟೆ ಗಳ ಹೂಳೆತ್ತದೇ ಹಣ ಗುಳುಂ, ಪಿಡಿಓ ಸಂಬಂಧಿ ವೆಂಡರ್‌ಗಳ ಖಾತೆಗೆ ಸಾಮಗ್ರಿ ವೆಚ್ಚ ಹಾಕಿಕೊಂಡು ಕೋಟಿಗಟ್ಟಲೆ ಅನುದಾನ ದುರುಪಯೋಗ ಸೇರಿದಂತೆ ಮೊದಲಾದ ದೂರುಗಳು ಜಿಲ್ಲಾ ಪಂಚಾಯಿತಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಹೋದ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಸರಕಾರ ಆದೇಶ ನೀಡಿದೆ.

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಶಕ ವೀರಭದ್ರಸ್ವಾಮಿ, ಎಡಿ ಶಿವಕುಮಾರ್‌, ಪಿಡಿಒ ಮತ್ತು ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.