ಹಸಿರೀಕರಣಕ್ಕೆ ಅರಣ್ಯ ಇಲಾಖೆಯಿಂದ ಯೋಜನೆ

•ರೈತರಿಗೆ 50 ಸಾವಿರ ಸಸಿ ವಿತರಿಸಲು ಯೋಜನೆ •ಪಟ್ಟಣ, ಸರಕಾರಿ ಕಚೇರಿ ಇತರೆಡೆ ಸಸಿ ಬೆಳೆಸಲು ಚಿಂತನೆ

Team Udayavani, Jun 3, 2019, 10:19 AM IST

3-June-2

ಜಗಳೂರು: ಅಶ್ವತ್‌ ರೆಡ್ಡಿ ನಗರದ ಸಮೀಪ ವಿರುವ ನರ್ಸರಿಯಲ್ಲಿ ವಿವಿಧ ಜಾತಿಯ ಸಸಿಗಳು ಬೆಳೆದು ನಿಂತಿರುವುದು.

ರವಿಕುಮಾರ್‌
ಜಗಳೂರು:
ತಾಲೂಕಿನಲ್ಲಿರುವ ಅರಣ್ಯ ಪ್ರದೇಶ ಅಭಿವೃದ್ಧಿ ಪಡಿಸುವುದರ ಜತೆಗೆ ನಗರ ಹಸಿರೀಕರಣಗೊಳಿಸಲು ವಿವಿಧ ಯೋಜನೆಗಳಡಿ 1.99 ಲಕ್ಷ ವಿವಿಧ ಜಾತಿಯ ಸಸಿಗಳನ್ನು ವಲಯ ಅರಣ್ಯ ಇಲಾಖೆ ಸಮೃದ್ಧವಾಗಿ ಬೆಳೆಸಿದೆ.

ಜಗಳೂರು ತಾಲೂಕಿನ ವಲಯ ಅರಣ್ಯ ಇಲಾಖೆ ವತಿಯಿಂದ ಪಟ್ಟಣದ ಅಶ್ವತ್‌ರೆಡ್ಡಿ ನಗರದ ಸಮೀಪವಿರುವ ನರ್ಸರಿಯಲ್ಲಿ 2018-19ರಿಂದ ವಿವಿಧ ಜಾತಿಯ ಸಸಿಗಳನ್ನು ಆರೈಕೆ ಮಾಡಿ ಬೆಳೆಸಿದೆ

ಪರಿಸರ ಉಳಿಸಿ ಬೆಳೆಸುವ ಉದ್ದೇಶದಿಂದ ಸರಕಾರ ಕೋಟಿಗಟ್ಟಲೇ ಹಣ ಖರ್ಚು ಮಾಡಿ ಕಳೆದು ಒಂದು ವರ್ಷದಿಂದ ಸಸಿ ಬೆಳೆಸುವ ಕಾಯಕದಲ್ಲಿ ನಿರತವಾಗಿದೆ. ಬೆಳೆಸಿರುವ ಸಸಿಗಳನ್ನು ರಸ್ತೆ ಬದಿ, ಅರಣ್ಯದಲ್ಲಿ ನೆಡು ತೋಪುಗಳಲ್ಲಿ ನಡುವುದರ ಮೂಲಕ ಪರಿಸರ ಅಭಿವೃದ್ಧಿಗೆ ಶ್ರಮಿಸುತ್ತಿದೆ.

ವಿವಿಧ ಯೋಜನೆಗಳು: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಧಿ, ನಗರ ಹಸಿರೀಕರಣ, ಪರ್ಯಾಯಾತ್ಮಕ ಯೋಜನೆ, ರಕ್ಷಿತ ಅರಣ್ಯ, ರಸ್ತೆ ಬದಿ ನೆಡುತೋಪು ಸೇರಿದಂತೆ ವಿವಿಧ ಯೋಜನೆಗಳನ್ನು ಬಳಸಿಕೊಂಡು ವಲಯ ಅರಣ್ಯ ಇಲಾಖೆ ಸಸಿಗಳನ್ನು ಬೆಳೆಸುತ್ತಿದೆ.

ರೈತರಿಗೆ ವರದಾನ: ಅರಣ್ಯ ಇಲಾಖೆ ವತಿಯಿಂದ ರೈತರಿಗೆ 3 ರೂಪಾಯಿಗೆ ಒಂದು ಸಸಿ ನೀಡಿ ಆ ಗಿಡ ಸಮೃದ್ಧವಾಗಿ ಬದುಕಿದರೆ ಪ್ರಥಮ ವರ್ಷಕ್ಕೆ 30 ರೂ., ಎರಡನೇ ವರ್ಷಕ್ಕೆ 30 ರೂ., 3ನೇ ವರ್ಷಕ್ಕೆ 40 ರೂ. ಒಟ್ಟು 100 ರೂಪಾಯಿ ಇಲಾಖೆ ನೀಡುತ್ತದೆ. ರೈತರು ಈ ಯೋಜನೆಯಡಿ ತಮ್ಮ ಜಮೀನಿನ ಬದುಗಳಲ್ಲಿ ಬೆಳೆಸುವುದರಿಂದ ಅರಣ್ಯ ಅಭಿವೃದ್ಧಿಗೆ ಒತ್ತು ನೀಡುವುದಲ್ಲದೆ ರೈತರಿಗೆ ತುಸು ಆರ್ಥಿಕ ಸಹಾಯ ದೊರೆಯುತ್ತದೆ.

ವಿವಿಧ ಜಾತಿಯ ಸಸಿಗಳು: ಬೇವು, ಹುಣಸೆ, ಜಂಬು ನೇರಳೆ, ಅರಳಿ, ಆಲ, ಗೋಣಿ, ಹೊಂಗೆ, ಬಸರಿ, ಕಾಡು ಬಾದಾಮಿ, ಸಿಹಿ ಹುಣಸೆ, ಕಮರ, ಮಹಾಘನಿ, ಸಿಲ್ವರ್‌, ಸೀಮರೋಬ ಸೇರಿದಂತೆ ವಿವಿಧ ಜಾತಿಯ 1ಲಕ್ಷದ 99 ಸಾವಿರ ಸಸಿಗಳನ್ನು ಬೆಳೆಸಿ ಆರೈಕೆ ಮಾಡಲಾಗಿದೆ. ಇದರಲ್ಲಿ ರೈತರಿಗೆ 50 ಸಾವಿರ ಸಸಿಗಳನ್ನು ನೀಡಲಾಗುವುದು

ನಗರದ ಹಸಿರೀಕರಣಕ್ಕೆ ಆದ್ಯತೆ: ಪಟ್ಟಣದ ಪ್ರತಿಯೊಂದು ಸರಕಾರಿ ಕಚೇರಿ, ಶಾಲಾ ಕಾಲೇಜು, ಮನೆಗಳ ಮುಂದೆ ಇಲಾಖೆ ವತಿಯಿಂದ ಸಸಿ ನೆಡುವ ಕಾರ್ಯವನ್ನು ಇಲಾಖೆ ಮಾಡುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡುತ್ತಾರೆ.

ಪ್ರತಿವರ್ಷವು ಸಹ ಲಕ್ಷಾನುಗಟ್ಟಲೆ ಸಸಿಗಳನ್ನು ಬೆಳೆಸಿ ರೈತರಿಗೆ ಹಾಗೂ ಮತ್ತಿತರರಿಗೆ ವಿತರಿಸುತ್ತ ಬಂದಿದೆ. ಪ್ರಸಕ್ತ ವರ್ಷವೂ ಸಹ ಸಸಿಗಳನ್ನು ಬೆಳೆಸಿದ್ದು, ಪರಿಸರಾಸಕ್ತರಿಗೆ, ರೈತರಿಗೆ, ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು.
ಶಿವರೆಡ್ಡಿ, ಅರಣ್ಯ ರಕ್ಷಕ

ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯು ರೈತರಿಗೆ ಕೃಷಿಯ ಜೊತೆಗೆ ಆದಾಯ ತರುವ ಯೋಜನೆಯಾಗಿದೆ. ಪ್ರತಿಯೊಬ್ಬ ರೈತರು ಈ ಯೋಜನೆ ಸದುಪಯೋಗಪಡಿಸಿಕೊಳ್ಳಬೇಕು.
ಓಬಯ್ಯ , ರೈತ

ಪ್ರತಿ ವರ್ಷ ಸಸಿಗಳನ್ನು ನೆಡುವುದರ ಮೂಲಕ ಅವುಗಳನ್ನು ಉಳಿಸಿ ಬೆಳೆಸುವಂತ ಕೆಲಸ ಅರಣ್ಯ ಇಲಾಖೆಯವರು ಮಾಡಿದರೆ ಕೆಲವೇ ವರ್ಷಗಳಲ್ಲಿ ಬರದನಾಡು ಮಲೆನಾಡು ಆಗುವುದರಲ್ಲಿ ಅನುಮಾನವಿಲ್ಲ ಎಂಬುವುದು ಪ್ರಗತಿ ಪರ ಚಿಂತಕರ ಅಭಿಪ್ರಾಯವಾಗಿದೆ.

 

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.