ಬಾರದ ಅನುದಾನ-ಜನರಿಗಿಲ್ಲ ಸಮಾಧಾನ

ವಿವಿಧ ಯೋಜನೆಯಡಿ ಮನೆ ನಿರ್ಮಿಸಿ ಕಾಯುತ್ತಿರುವ ಫಲಾನುಭವಿಗಳುಸುಮಾರು 8 ಕೋಟಿ ಬಾಕಿ

Team Udayavani, Nov 13, 2019, 11:45 AM IST

13-November-04

ಜಗಳೂರು: ಸರ್ಕಾರದ ವಿವಿಧ ವಸತಿ ಯೋಜನೆಯಡಿ 2000ಕ್ಕೂ ಅಧಿಕ ಫಲಾನುಭವಿಗಳು ಮನೆ ನಿರ್ಮಿಸಿಕೊಂಡು 1 ವರ್ಷ ಕಳೆದರೂ ಸಹ ಸರಕಾರದಿಂದ ಅನುದಾನ ಬಿಡುಗಡೆಯಾಗದೇ ಸಾಲ ಸೂಲ ಮಾಡಿ ಮನೆ ನಿರ್ಮಿಸಿಕೊಂಡ ಫಲಾನುಭವಿಗಳು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ತಾಲೂಕಿನ ಫಲಾನುಭವಿಗಳಿಗೆ ಬರಬೇಕಾದ ಮೊತ್ತವೇ ಸುಮಾರು 8 ಕೋಟಿಗಳಷ್ಟಿದೆ ಎಂದು ಅಂದಾಜಿಸಲಾಗುತ್ತಿದೆ. ಸರ್ಕಾರದ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಲ್ಲಿ ಕೆಲವರು ಈಗಾಗಲೇ ಬುನಾದಿ ಹಾಕಿದ್ದು , ಮತ್ತೆ ಕೆಲವರು ಸಜ್ಜಾವರೆಗೆ ಮತ್ತೆ ಕೆಲವರು ಸಂಪೂರ್ಣವಾಗಿ ಮನೆ ನಿರ್ಮಿಸಿಕೊಂಡು ಸರ್ಕಾರದ ಅನುದಾನಕ್ಕೆ ಕಾಯುತ್ತಿದ್ದಾರೆ.

ಸರ್ಕಾರ ವಸತಿ ಯೋಜನೆಗಳಡಿ ಮನೆ ಕಟ್ಟಿಕೊಳ್ಳಲು ನಾಲ್ಕು ಹಂತಗಳಲ್ಲಿ ಹಣ ಬಿಡುಗಡೆ ಮಾಡುತ್ತದೆ. ಫಲಾನುಭವಿಗಳು ಮೊದಲು ಹಣವನ್ನು ಹಾಕಿ ಮನೆ ನಿರ್ಮಿಸಿಕೊಳ್ಳಬೇಕು. ನಂತರ ಮನೆ ನಿರ್ಮಾಣದ ಹಂತ ಗಮನಿಸಿ ಸರಕಾರ ಫಲಾನುಭವಿಯ ಖಾತೆಗೆ ನೇರವಾಗಿ ಹಣ ಜಮಾ ಮಾಡುವ ಪದ್ಧತಿ ಇದೆ. ತಾಲೂಕಿನ 22 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ 2017-18 ನೇ ಸಾಲಿನಲ್ಲಿ ಅಂಬೇಡ್ಕರ್‌ ನಿವಾಸ್‌ ಯೋಜನೆಯಡಿ 2169, ಬಸವ ವಸತಿ ಯೋಜನೆಯಡಿ 440 ಫಲಾನುಭವಿಗಳಿದ್ದಾರೆ.

ಅಂಬೇಡ್ಕರ್‌ ನಿವಾಸ ಯೋಜನೆಯಡಿ 2169 ಫಲಾನುಭವಿಗಳಲ್ಲಿ 39 ಫಲಾನುಭವಿಗಳು ಇನ್ನೂಕಾಮಗಾರಿ ಪ್ರಾರಂಭಿಸಿಲ್ಲ. 451 ಜನ ಬುನಾದಿ ಹಾಕಿದ್ದು, 250 ಜನ ಸಜ್ಜಾವರೆಗೆ ನಿರ್ಮಿಸಿಕೊಂಡಿದ್ದು 253 ಫಲಾನುಭವಿಗಳು ಚಾವಣಿವರೆಗೆ, 279 ಫಲಾನುಭವಿಗಳು ಸಂಪೂರ್ಣ ಮನೆ ನಿರ್ಮಿಸಿಕೊಂಡಿದ್ದಾರೆ. ಆದರೆ ಕಳೆದ 7 ತಿಂಗಳುಗಳಿಂದ ಸರಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ ಎನ್ನುತ್ತಾರೆ ವಸತಿಯೋಜನೆ ನೊಡಲ್‌ ಅಧಿಕಾರಿ ತಿಮ್ಮೇಶ್‌, ಸಾಲ ಸೂಲ ಮಾಡಿ ಮನೆ ನಿರ್ಮಿಸಿಕೊಂಡು ಒಂದೂವರೆ ವರ್ಷ ಕಳೆದರೂ ಸಹ ಸರಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ. ಸಾಲ ಪಡೆದವರಿಗೆ ಬಡ್ಡಿ ಕಟ್ಟಲು ಸಹ ಆಗದಿರುವಂತ ಸ್ಥಿತಿ ನಿರ್ಮಾಣವಾಗಿದೆ. ನಮ್ಮ ಕಷ್ಟವನ್ನು ಯಾರೂ ಕೇಳುತ್ತಿಲ್ಲ ಎನ್ನುತ್ತಾರೆ ಕೆಳಗೊಟೆ ಗ್ರಾಮದ ಫಲಾನುಭವಿ ವಿಶಾಲಮ್ಮ.

ಸಮೀಕ್ಷೆಗೆ ಮಾತ್ರ ಸೀಮಿತವಾದ ಪ್ರಧಾನ ಮಂತ್ರಿ ಆವಾಸ್‌ ಯೋಜನೆ: ತಾಲೂಕಿನಲ್ಲಿ 1205 ಜನ ವಸತಿ ರಹಿತರಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ. ಆದರೆ ಸಮೀಕ್ಷೆ ನಡೆದು ಒಂದೂವರೆ ವರ್ಷ ಕಳೆದರೂ ಸಹ ಒಬ್ಬ ಫಲಾನುಭವಿಗೂ ಮನೆ, ನಿವೇಶನ ದೊರೆತಿಲ್ಲ. ಜನಪ್ರತಿನಿ ಧಿಗಳು ಪೊಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಫಲಾನುಭವಿಗಳು ದೂರಿದ್ದಾರೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.