ಮಹಿಳೆಯರು ಸೌಲಭ್ಯ ಪಡೆಯಲು ಮಾಹಿತಿ ಅರಿತುಕೊಳ್ಳಿ
ಮಹಿಳೆಯರು ಹಕ್ಕಿಗಾಗಿ ಹೋರಾಟ ಮಾಡುವುದಿಲ್ಲವೋ ಅಲ್ಲಿಯವರೆಗೆ ಅವು ದೊರೆಯುವುದಿಲ್ಲ
Team Udayavani, May 1, 2019, 1:34 PM IST
ಜಗಳೂರು: ಅಂಬೇಡ್ಕರ್ ವೃತ್ತದಿಂದ ಡೊಳ್ಳುವಾದ್ಯಗಳ ಮೂಲಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶರಾದ ಅಂಬದಾಸ್ ಜಿ. ಕುಲಕರ್ಣಿ ಹಾಗೂ ಇತರೆ ನ್ಯಾಯಾಧೀಶರನ್ನು ಸ್ವಾಗತಿಸಲಾಯಿತು.
ಜಗಳೂರು: ಮಹಿಳೆಯರಿಗೆ ಹಲವಾರು ಸೌಲಭ್ಯಗಳಿದ್ದು, ಮಾಹಿತಿ ಕೊರತೆಯಿಂದ ಅವರಿಗೆ ದೊರೆಯುತ್ತಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಂಬದಾಸ್ ಜಿ. ಕುಲಕರ್ಣಿ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತಾಪಂ ಆಶ್ರಯದಲ್ಲಿ ಆಯೋಜಿಸಿದ್ದ ಮಹಿಳೆ ಮತ್ತು ಕಾನೂನು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನಿನಲ್ಲಿ ಎಷ್ಟೇ ಅವಕಾಶಗಳು ಹಾಗೂ ನ್ಯಾಯಯುತ ಸೇವೆಗಳು ಇದ್ದರೂ ಸಹ ಗ್ರಾಮೀಣ ಭಾಗದ ಮಹಿಳೆಯರಿಗೆ ತಮ್ಮ ಹಕ್ಕುಗಳ ಬಗ್ಗೆ ಮಾಹಿತಿ ಇಲ್ಲದೇ ಇರುವುದರಿಂದ ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಎಲ್ಲಿಯವರೆಗೆ ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಹೋರಾಟ ನಡೆಸುದಿಲ್ಲವೊ ಅಲ್ಲಿಯವರೆಗೆ ಹಕ್ಕುಗಳು ದೊರೆಯುವುದಿಲ್ಲ ಎಂದರು.
2ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ನಾಗಶ್ರೀ ಮಾತನಾಡಿ, ಸಮಾಜದಲ್ಲಿ ಮಹಿಳೆಗೆ ಮೊದಲು ಗೌರವ ನೀಡಲಾಗುತಿತ್ತು. ಹೆಣ್ಣನ್ನು ಲಕ್ಷಿ ್ಮೕಗೆ ಹೋಲಿಕೆ ಮಾಡಲಾಗುತ್ತಿತ್ತು. ಆನಾದಿ ಕಾಲದಿಂದಲು ಮಹಿಳೆಗೆ ದೇವರ ಸ್ಥಾನ ಕೊಡಲಾಗಿದೆ. ಯಾವುದೇ ಪುರುಷ ಪ್ರಧಾನ ದೇವಸ್ಥಾನಗಳಲ್ಲಿ ಮಹಿಳಾ ದೇವತೆಗಳಿಗೆ ಸ್ಥಾನ ನೀಡಲಾಗಿದೆ ಎಂದು ಹೇಳಿದರು.
ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ಜನನಕ್ಕೆ ಒತ್ತು ನೀಡುತ್ತಿರಲಿಲ್ಲ. ವಿಜ್ಞಾನವನ್ನು ಉತ್ತಮ ಕೆಲಸಕ್ಕೆ ಬಳಸದೆ ಭ್ರೂಣ ಪತ್ತೆ ಮಾಡಿ, ಭ್ರೂಣ ತೆಗೆಯುವಂತ ಕೆಲಸ ಮಾಡಲಾಗುತ್ತಿತ್ತು . ಇದನ್ನು ನಿಯಂತ್ರಿಸಲು ಭ್ರೂಣ ಹತ್ಯೆ ಕಾನೂನನ್ನು ಜಾರಿಗೆ ತರಲಾಯಿತು ಎಂದರು.
ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಸಿನವರ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರದಂತಹ ಅಮಾನವೀಯ ಕೃತ್ಯಗಳು ನಡೆಯುತ್ತಿವೆ. ಇವುಗಳನ್ನು ಹತೋಟಿಗೆ ತರಲು ಕಠಿಣ ಕಾನೂನುಗಳು ಜಾರಿಯಲ್ಲಿವೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆ ಹೋರಾಟ ಮಾಡಬೇಕಾಗಿದೆ. ಆದ್ದರಿಂದ ಮಹಿಳೆಯರು ಶಿಕ್ಷಣವಂತರಾಗಬೇಕು. ಮ್ಕಕಳ ಮೇಲೆ ಪೋಷಕರು ನಿಗಾ ಇಡಬೇಕು. ಸಮಾಜದಲ್ಲಿ ಮಕ್ಕಳು ದಾರಿ ತಪ್ಪಲು ಮೊಬೈಲ್ ಪ್ರಮುಖ ಕಾರಣವಾಗುತಿದೆ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಾಬಪ್ಪ ಮೇಲುಗಲ್ ಮಾತನಾಡಿ, ಪ್ರತಿಯೊಂದು ಕುಟುಂಬದಲ್ಲಿಯೂ ಮಹಿಳೆಯರಿಗೆ ತಮ್ಮ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕು ಇದೆ. 2005ರ ನಂತರ ಆಸ್ತಿಹಕ್ಕು ಕಾಯ್ದೆಯ ಪ್ರಕಾರ ತಂದೆ ಜೀವಂತ ಇದ್ದಾಗ ಆಸ್ತಿಯಲ್ಲಿ ಹೆಣ್ಣು, ಗಂಡು ಸಮಾನ ಹಕ್ಕನ್ನು ಹೊಂದಿರುತ್ತಾರೆ. ಕುಟುಂಬಗಳಲ್ಲಿ ವೈಮನಸ್ಸುಗಳು ಹೆಚ್ಚಾದಾಗ ಆಸ್ತಿಯ ಪಾಲುಗಳು ಹೆಚ್ಚಾಗಲಿವೆ ಎಂದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಪಿ.ಜೆ. ಸೋಮಶೇಖರ್, ಜೆಎಂಎಫ್ಸಿ ನ್ಯಾಯಾಧೀಶರಾದ ಮಹೇಂದ್ರ, ಸಹಾಯಕ ಸರ್ಕಾರಿ ಅಭಿಯೋಜಕಿ ಎಂ. ರೂಪಾ, ಸಿಡಿಪಿಒ ಭಾರತಿ ಬಣಕಾರ್, ಡಿವೈಎಸ್ಪಿ ಸೋಮಲಿಂಗ ಕುಂಬಾರ, ವಕೀಲರ ಸಂಘದ ಅಧ್ಯಕ್ಷ ಬಸವರಾಜಪ್ಪ, ಕಾರ್ಯದರ್ಶಿ ತಿಪ್ಪೇಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ