ಬರಪೀಡಿತ ಪ್ರದೇಶಕ್ಕೆ ನರೇಗಾ ಯೋಜನೆ ವರದಾನ
Team Udayavani, Nov 20, 2019, 11:44 AM IST
ಜಗಳೂರು: ಬರಪೀಡಿತ ಪ್ರದೇಶಕ್ಕೆ ನರೇಗಾ ಯೋಜನೆ ವರದಾನವಾಗಿದೆ ಎಂದು ಶಾಸಕ ಎಸ್ .ವಿ. ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಗಳವಾರ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ನರೇಗಾ ಯೋಜನೆಗೆ ಸಂಬಂಧಿಸಿದಂತೆ ರೋಜಗಾರ್ ವಾಹಿನಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನ ಪ್ರತಿಯೊಬ್ಬ ಗ್ರಾಮಸ್ಥರು ನರೇಗಾ ಯೋಜನೆಯಡಿ ಕೆಲಸ ಪಡೆಯುವ ಹಕ್ಕು ಹೊಂದಿದ್ದು, ನಿರ್ಭಯವಾಗಿ ಪಂಚಾಯಿತಿಗಳಿಗೆ ತೆರಳಿ ತಮ್ಮ ಹಕ್ಕನ್ನು ಪಡೆದುಕೊಳ್ಳಿ ಎಂದರು.
ನಮಗೆ ಕೆಲಸ ನೀಡುತ್ತಿಲ್ಲ ಎಂಬ ದೂರುಗಳು ಬರಬಾರದು. ತಾಲೂಕು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಂಡಿದ್ದು ಪ್ರತಿಯೊಬ್ಬರಿಗೆ 150 ಮಾನವ ದಿನ ಕೆಲಸ ನೀಡಬಹುದು. ಪ್ರತಿಯೊಬ್ಬರು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಕೂಲಿಯನ್ನು ಪಡೆಯಬಹುದು. ಮಹಿಳೆಯರು ಮತ್ತು ಪುರುಷರಿಗೆ ಸಮಾನ ವೇತನ ಇದೆ. ಪಂಚಾಯಿತಿಗೆ ಬರುವಂತ ಗ್ರಾಮಸ್ಥರನ್ನು ಅಲೆದಾಡಿಸದೇ ಕೆಲಸ ನೀಡಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.
ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕಾಧಿ ಕಾರಿ ಮಲ್ಲನಾಯ್ಕ ಮಾತನಾಡಿ, ಈ ವಾಹಿನಿಯು ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿಗೆ ತೆರಳಿ ನರೇಗಾ ಯೋಜನೆಯ ಮಾಹಿತಿ ನೀಡಲಿದೆ. ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವುದು, ರಸ್ತೆ ಅಭಿವೃದ್ಧಿ ಸೇರಿದಂತೆ ಇತರೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಪ್ರತಿಯೊಬ್ಬರಿಗೆ ಕೆಲಸ ನೀಡಲಾಗುವುದು ಎಂದು ಹೇಳಿದರು.
ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಮುದೇಗೌಡ್ರು ಬಸವರಾಜ್, ವ್ಯವಸ್ಥಾಪಕ ರವಿಕುಮಾರ್, ಸಿಬ್ಬಂದಿ ಚೌಡಪ್ಪ, ಶಿವಕುಮಾರ್, ವಿನಯ್, ಸಿದ್ದಿಕ್, ಸುನೀಲ್, ಬಾಷ, ತಿಪ್ಪೇಸ್ವಾಮಿ, ಮುಖಂಡರಾದ ಗಿರೀಶ್ ಒಡೆಯರ್, ಸುರೇಶ್ ನಾಯ್ಕ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು