ಸೊಕ್ಕೆಯಲ್ಲಿ 3 ದಿನಕ್ಕೊಮ್ಮೆ 4 ಬಿಂದಿಗೆ ನೀರು!

ನೀರಿಗೆ ಹಾಹಾಕಾರವಿದ್ದರೂ ಟ್ಯಾಂಕರ್‌ ನೀರು ಪೂರೈಕೆಗೆ ನಿರ್ಲಕ್ಷ್ಯ •ನೀರು ಹುಡುಕಿ ತರುವುದೇ ಗ್ರಾಮಸ್ಥರ ಕೆಲಸ

Team Udayavani, May 17, 2019, 10:41 AM IST

17-MAY-5

ಜಗಳೂರು: ಸೊಕ್ಕೆ ಗ್ರಾಮದಲ್ಲಿ ಜನರು ಖಾಲಿ ಕೊಡಗಳನ್ನು ನೀರು ಸಂಗ್ರಹಣಾ ತೊಟ್ಟಿಯ ಎದುರು ಸರದಿ ಸಾಲಲ್ಲಿ ಇರಿಸಿರುವುದು.

ಜಗಳೂರು: ಸೊಕ್ಕೆ ಗ್ರಾಮದಲ್ಲಿ 3 ದಿನಕ್ಕೊಮ್ಮೆ ಮನೆಗೆ 4 ಬಿಂದಿಗೆ ನೀರು ಮಾತ್ರ ತಾಲೂಕಾಡಳಿತ ಪೂರೈಸುತ್ತಿದ್ದು, ಈ ನೀರು ಸಾಕಾಗದೇ ಗ್ರಾಮಸ್ಥರು ಸುಮಾರು ಒಂದೂವರೆ ಕಿ.ಮಿ ದೂರದ ಜಮಿನುಗಳಿಗೆ ತೆರಳಿ ನೀರು ತರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನ ಸೊಕ್ಕೆ ಗ್ರಾಮವು ಹೋಬಳಿ ಮತ್ತು ಪಂಚಾಯಿತಿಯ ಕೇಂದ್ರ ಸ್ಥಾನವಾಗಿದ್ದು ಸುಮಾರು ನಾಲ್ಕು ಸಾವಿರ ಜನಸಂಖ್ಯೆ ಹೊಂದಿದೆ.

12 ಬೋರಿದ್ದರೂ ನೀರಿಲ್ಲ: ಗ್ರಾಮದ‌ಲ್ಲಿ 12 ಬೋರ್‌ವೆಲ್ ಪೈಕಿ 5 ಬೋರ್‌ಗಳಲ್ಲಿ ಮಾತ್ರ ಸ್ವಲ್ಪ ಪ್ರಮಾಣದ ನೀರು ಬರುತ್ತಿದ್ದು ಉಳಿದ ಬೋರ್‌ಗಳು ಬತ್ತಿವೆ. ನೀರಿರುವ ಬೋರ್‌ಗಳಿಂದ ಸಂಗ್ರಹಣಾ ತೊಟ್ಟಿ ಭರ್ತಿ ಮಾಡಿ ಗ್ರಾಮಸ್ಥರಿಗೆ ನೀರು ಪೂರೈಸಲಾಗುತ್ತಿದೆ. ಗ್ರಾಮದಲ್ಲಿ ನೀರಿನ ಸಮಸ್ಯೆ ಇದ್ದರೂ ಸಹ ಖಾಸಗಿ ಬೋರ್‌ವೆಲ್ನಿಂದ ನೀರು ಸರಬರಾಜು ಮಾಡಲು ಅಧಿಕಾರಿಗಳು ಮುಂದಾಗುತ್ತಿಲ್ಲ ಅಥವಾ ಟ್ಯಾಂಕರ್‌ ನೀರು ಪೂರೈಸಲು ಮುಂದಾಗುತ್ತಿಲ್ಲ ಎನ್ನುವುದು ಗ್ರಾಮಸ್ಥರ ಆರೋಪವಾಗಿದೆ.

1.5 ಕಿ.ಮೀ ದೂರದಿಂದ ನೀರು: ಸೊಕ್ಕೆ ಗ್ರಾಮದ ಸುತ್ತ ಮುತ್ತಲಿನ ಜಮಿನುಗಳಿಂದ ಪ್ರತಿದಿನ ಜನರು ಕೈಗಾಡಿಯಲ್ಲಿ ನೀರು ತರುವ ಸ್ಥಿತಿ ಇದೆ. ಕೆಲಸ ಕಾರ್ಯಗಳನ್ನು ಬದಿಗೊತ್ತಿ ಸುಡು ಬಿಸಿಲಿನಲ್ಲಿ ನೀರು ತರುವುದೇ ಗ್ರಾಮಸ್ಥರ ಕಾಯಕವಾಗಿದೆ. ಎಲ್ಲರಿಗೂ ನೀರು ಸಿಗದೇ ಮಹಿಳೆಯರು ನಿತ್ಯ ಜಗಳವಾಡುವುದು ಸಾಮಾನ್ಯವಾಗಿದೆ.

ಇರುವ ಬೋರ್‌ವೆಲ್ಗಳಲ್ಲಿ ಗ್ರಾಮಸ್ಥರಿಗೆ ನೀರನ್ನು ನೀಡಲಾಗುತ್ತಿತ್ತು. ಈಗ ಸಮಸ್ಯೆ ತೀವ್ರಗೊಳ್ಳುತ್ತಿದ್ದು ಈ ಕೂಡಲೇ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುವಂತೆ ಪಿಡಿಓಗೆ ಸೂಚನೆ ನೀಡಲಾಗುವುದು.
ಕೆ.ಓ.ಜಾನಕಿರಾಮ್‌,
ತಾಪಂ ಇಓ, ಜಗಳೂರು.

ಗ್ರಾಮದಲ್ಲಿ ನೀರಿನ ಸಮಸ್ಯೆ ಇದ್ದರೂ ಸಹ ಟ್ಯಾಂಕರ್‌ ಅಥವಾ ಖಾಸಗಿ ಬೋರ್‌ವೆಲ್ ಮೂಲಕ ನೀರು ತರುವ ವ್ಯವಸ್ಥೆಯನ್ನು ಗ್ರಾಮ ಪಂಚಾಯಿತಿಯವರು ಮಾಡುತ್ತಿಲ್ಲ.
ಪರಶುರಾಮ, ಲಕ್ಷ್ಮಣ, ಗ್ರಾಮಸ್ಥರು

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.