ಕೋಲಾಟವಾಡಿ ಪ್ರತಿಭಟನೆ
26 ದಿನ ಪೂರೈಸಿದ ಭದ್ರಾ ಮೇಲ್ದಂಡೆ ಹೋರಾಟ
Team Udayavani, Jul 13, 2019, 10:19 AM IST
ಜಗಳೂರು: ಚಿಕ್ಕ ಮಲ್ಲನಹೊಳೆ ಗ್ರಾಮದ ರೈತರು ಮತ್ತು ಗ್ರಾಮಸ್ಥರು ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಜಗಳೂರು: ಚಿಕ್ಕ ಮಲ್ಲನಹೊಳೆ ಗ್ರಾಮದ ರೈತರು ಮತ್ತು ಗ್ರಾಮಸ್ಥರು ಶುಕ್ರವಾರ ಕೋಲಾಟ ಆಡುವ ಮೂಲಕ ಹಾಗೂ ಮತ್ತು ತಮಟೆ ಬಡಿಯುವ ಮೂಲಕ ವಿನೂತನವಾಗಿ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಹೋರಾಟಕ್ಕೆ ಬೆಂಬಲ ಸೂಚಿಸಿ, 26ನೇ ದಿನದ ಧರಣಿಯಲ್ಲಿ ಪಾಲ್ಗೊಂಡರು.
ಚಿಕ್ಕ ಮಲ್ಲನಹೊಳೆ ಗ್ರಾಮಸ್ಥರು ಪಟ್ಟಣದ ಪ್ರವಾಸಿ ಮಂದಿರದಿಂದ ಕೋಲಾಟವಾಡುತ್ತ, ತಮಟೆ ಬಡಿಯುತ್ತ ಪ್ರತಿಭಟನಾ ಸ್ಥಳವಾದ ತಾಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ಆಗಮಿಸಿದರು.
ಈ ವೇಳೆ ರೈತ ಮುಖಂಡ ಲಕ್ಷಣ್ ಮಾತನಾಡಿ, ನೀರಿನ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ನಮ್ಮ ತಾಲೂಕಿಗೆ ಮುಂಜೂರಾಗಿರುವ ನೀರು ನಮಗೆ ದೊರೆಯಬೇಕು ಮತ್ತು ಬೆಳಘಟ್ಟ ಮಾರ್ಗದ ಮೂಲಕವೇ ಶಾಸಖಾ ನಾಲೆ ಬರಬೇಕು. ಈ ಮಾರ್ಗದಿಂದ ಬಂದರೆ ರೈತರಿಗೆ ಅನುಕೂಲವಾಗಲಿದೆ ಎಂದರು.
ಮಳೆಯನ್ನೇ ನಂಬಿ ಜೀವನ ನಡೆಸುತ್ತಿರುವ ನಮ್ಮ ತಾಲೂಕನ್ನು ಅಭಿವೃದ್ಧಿಪಡಿಸಬೇಕು ಎಂಬ ಆಸಕ್ತಿ ಯಾವ ಜನಪ್ರತಿನಿಧಿಗಳಿಗೂ ಇಲ್ಲ. ಇನ್ನು ಬರುವ ಯೋಜನೆಗಳನ್ನು ತಡೆಯುವಂತಹ ಹುನ್ನಾರ ನಡೆಯುತ್ತಿದೆ. ನಮಗೆ ನ್ಯಾಯ ದೊರೆಯುವ ತನಕ ನಾವು ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಲಿಂಗರಾಜ್, ಓಬಳೇಶ್, ಗಡಿಮಾಕುಂಟೆ ಬಸವರಾಜಪ್ಪ, ಜಯದೇವಪ್ಪ, ಬಾಲರಾಜ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ