ರೋಹಿಣಿ ಸಿಂಧೂರಿಯಿಂದ 6 ಕೋಟಿ ರೂ. ಭ್ರಷ್ಟಾಚಾರ : ಸಾ.ರಾ. ಮಹೇಶ್ ಆರೋಪ
Team Udayavani, Sep 3, 2021, 7:27 PM IST
ಮೈಸೂರು: ಮೈಸೂರು ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ವಾಗ್ದಾಳಿ ಮುಂದುವರೆಸಿದ್ದು, ಈ ಬಾರಿ ಸಿಂಧೂರಿ ಅವರ ಮೇಲೆ 6 ಕೋಟಿ ರೂ. ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದಾರೆ.
ನಗರದ ತಮ್ಮ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಒಂದ ಬಟ್ಟೆ ಬ್ಯಾಗ್ ಮೇಲೆ ಪ್ರಿಂಟ್ ಹಾಕಲು 42 ರೂ. ಬೇಕಾ? ಒಟ್ಟು 14,71,458 ಬಟ್ಟೆ ಬ್ಯಾಗ್ ಖರೀದಿ ಮಾಡಲಾಗಿದೆ. ಈ ಬ್ಯಾಗ್ ಖರೀದಿಯಲ್ಲಿ 6.18 ಕೋಟಿ ರೂ. ಅಕ್ರಮ ನಡೆದಿದೆ.ವಾಸ್ತವವಾಗಿ ಖರೀದಿಗೆ 1.47 ಕೋಟಿ ರೂ. ಆಗುತ್ತಿತ್ತು ಎಂದು ಅಂಕಿ ಅಂಶಗಳನ್ನು ಮುಂದಿಟ್ಟು ರೋಹಿಣಿ ಸಿಂಧೂರಿ ವಿರುದ್ಧ ಆರೋಪಿಸಿದರು.
ದಾಖಲೆಗಳ ಸಮೇತ ಆರೋಪ ಮಾಡುತ್ತಿದ್ದೇನೆ. ಈ ಹಣವನ್ನು ಅವರಿಂದಲೇ ವಸೂಲಿ ಮಾಡಬೇಕು. ಕ್ರಮ ಕೈಗೊಳ್ಳದಿದ್ದರೆ ಮುಖ್ಯ ಕಾರ್ಯದರ್ಶಿಗಳ ಮುಂದೆ ಧರಣಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ನಗರಸಭೆ, ಪುರಸಭೆಗೆ ಇವರೇ ಬ್ಯಾಗ್ ಸರಬರಾಜು ಟೆಂಡರ್ ಗೆ ಅನುಮೋದನೆ ನೀಡಿದ್ದರು. ನಗರಸಭೆ, ಪುರಸಭೆ ಮೇಲೆ ಇವರಿಗೆ ಅಷ್ಟೊಂದು ಆಸಕ್ತಿ ಯಾಕೆ ಇತ್ತು ಎಂದು ಪ್ರಶ್ನಿಸಿದರು.
ಯಾವುದೇ ಸಂದರ್ಭದಲ್ಲಿ, ಯಾವುದೇ ಅಧಿಕಾರಿಗಳ ಬಗ್ಗೆ ರಾಜಕಾರಣಿಗಳು ಮಾತನಾಡುವಾಗ ಸಾರ್ವಜನಿಕವಾಗಿ ಬೇರೆ ರೀತಿ ಮಾತನಾಡುತ್ತಾರೆ. ಇನ್ನುಮಹಿಳಾ ಅಧಿಕಾರಿ ಆದರೆ ದೇವರೇ ಗತಿ. ಆ ಅಧಿಕಾರಿಯ ಹನ್ನೆರಡು ವರ್ಷಗಳ ಸೇವೆಯನ್ನು ನೋಡಿದ್ದೇನೆ. ಸರ್ಕಾರಿ ಕೆಲಸ ಮಾಡುವಲ್ಲಿ ದಕ್ಷತೆ ಇಲ್ಲ. ಅಪ್ರಮಾಣಿಕ ಅಧಿಕಾರಿ ನೇಮಕಕ್ಕೆ ವಿರೋಧ ಮಾಡಿದ್ದೆ. ನಾನು ಎಂಟು ಆರೋಪ ಮಾಡಿದ್ದೆ. ಅದರಲ್ಲಿ ಅವರ ಅಧಿಕಾರಿಗಳೇ ವರದಿ ಕೊಟ್ಟಿದ್ದಾರೆ. ಅವರನ್ನು ಅಮಾನತು ಮಾಡಿ, ಲೋಪ ಆಗಿರುವ ಹಣವನ್ನು ಅವರಿಂದಲೇ ವಸೂಲಿ ಆಗಬೇಕು ಎಂದು ಮುಖ್ಯಮಂತ್ರಿ ಹಾಗೂ ಸರ್ಕಾರದ ಕಾರ್ಯದರ್ಶಿಗಳಿಗೆ ಮನವಿ ಮಾಡಿದ್ದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
MUST WATCH
ಹೊಸ ಸೇರ್ಪಡೆ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ