ಸಮಸ್ಯೆಗಳ ಮಧ್ಯೆ ಜನಜೀವನ

ಅಭಿವೃದ್ಧಿ ಮರೀಚಿಕೆ-ಸಾಂಕ್ರಾಮಿಕ ರೋಗ ಭೀತಿ•ಆಯ ತಪ್ಪಿದರೆ ಅನಾಹುತ ನಿಶ್ಚಿತ

Team Udayavani, Jul 8, 2019, 9:59 AM IST

08-July-1

ಜೇವರ್ಗಿ: ಹಂಚಿನಾಳ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆ ಹಾಳಾಗಿದೆ.

ವಿಜಯಕುಮಾರ ಎಸ್‌. ಕಲ್ಲಾ
ಜೇವರ್ಗಿ:
ಹೆಮ್ಮರವಾಗಿ ಬೆಳೆದ ಜಾಲಿ ಕಂಟಿ, ಸಂಪೂರ್ಣ ಹದಗೆಟ್ಟ ರಸ್ತೆ, ಬಲ್ಬ್ಗಳಿಲ್ಲದ ವಿದ್ಯುತ್‌ ಕಂಬ, ರಸ್ತೆ ಮೇಲೆ ಚರಂಡಿ ನೀರು ಹೀಗೆ ಅನೇಕ ಸಮಸ್ಯೆ ಹೊತ್ತಿರುವ ತಾಲೂಕಿನ ಹಂಚಿನಾಳ ಎಸ್‌.ಎ ಗ್ರಾಮ ಹಾಳು ಕೊಂಪೆಯಾಗಿದೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಗ್ರಾಮೀಣ ಅಭಿವೃದ್ಧಿಗಾಗಿ ಪ್ರತಿ ವರ್ಷ ಕೋಟ್ಯಂತರ ರೂ.ಅನುದಾನ ಬಿಡುಗಡೆ ಮಾಡಲಾಗುತ್ತಿದೆಯಾದರೂ ನಾಗರಿಕರ ಮೂಲ ಸಮಸ್ಯೆ ನಿವಾರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.

ತಾಲೂಕು ಕೇಂದ್ರದಿಂದ 20 ಕಿ.ಮೀ ದೂರದಲ್ಲಿರುವ ಹಂಚಿನಾಳ ಎಸ್‌.ಎ ಗ್ರಾಮ ಹರನೂರ ಗ್ರಾಪಂ ವ್ಯಾಪ್ತಿಗೆ ಒಳಪಟ್ಟಿದ್ದು, 950 ಜನಸಂಖ್ಯೆ ಹೊಂದಿದೆ. ಈ ಗ್ರಾಮದಲ್ಲಿ ಹಿಂದುಳಿದ, ಕೂಲಿಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಗ್ರಾಮಕ್ಕೆ ತೆರಳಲು ಸಮರ್ಪಕ ರಸ್ತೆಯಿಲ್ಲ, ತಗ್ಗು ಗುಂಡಿಗಳಿರುವ ಅನಾಹುತ ರಸ್ತೆ ಇಲ್ಲಿದೆ. ಸ್ವಲ್ಪ ಆಯ ತಪ್ಪಿದರೇ ಸಾಕು ಅನಾಹುತ ನಿಶ್ಚಿತ. ಈ ಗ್ರಾಮಕ್ಕೆ ಹೋಗಿ ಬರೋಣ ಎಂದರೇ ಯಾರೂ ಮುಂದೆ ಬರೋದಿಲ್ಲ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಶಾಸಕ ಡಾ| ಅಜಯಸಿಂಗ್‌ ಪ್ರಚಾರಕ್ಕೆ ತೆರಳಿದ್ದರು. ಗ್ರಾಮಸ್ಥರು ವಾಹನದಲ್ಲಿ ಹೋದರೆ ನಮ್ಮ ಗ್ರಾಮದ ರಸ್ತೆ ಬಗ್ಗೆ ಗೊತ್ತಾಗುವುದಿಲ್ಲ, ಬೈಕ್‌ ಮೇಲೆ ಹೋಗೋಣ ಎಂದು ದ್ವಿಚಕ್ರ ವಾಹನದ ಮೇಲೆ ಕರೆದುಕೊಂಡು ಹೋಗಿ ರಸ್ತೆಯ ನರಕ ದರ್ಶನ ಮಾಡಿಸಿದ್ದರು.

ಚುನಾವಣೆ ನಂತರ ಈ ರಸ್ತೆ ನಿರ್ಮಾಣ ಮಾಡಿಕೊಡುವ ಭರವಸೆಯನ್ನು ಶಾಸಕರು ನೀಡಿದ್ದರು. ಆದರೆ ಇಲ್ಲಿಯ ವರೆಗೆ ಈ ಗ್ರಾಮದ ಕಡೆ ಇಣುಕಿಯೂ ನೋಡಿಲ್ಲ. ಕಳೆದ 25 ವರ್ಷದ ಹಿಂದೆ ಈ ಗ್ರಾಮಕ್ಕೆ ರಸ್ತೆ ನಿರ್ಮಿಸಲಾಗಿತ್ತು. ಆದರೆ ಇಲ್ಲಿಯವರೆಗೆ ಯಾವೊಬ್ಬ ಜನಪ್ರತಿನಿಧಿಯೂ ಹಿಡಿ ಮಣ್ಣನ್ನು ಈ ರಸ್ತೆಗೆ ಹಾಕದಿರುವುದು ದುರ್ದೈವದ ಸಂಗತಿ.

ಹಂಚಿನಾಳ ಗ್ರಾಮದಲ್ಲಿ ಕಸದ ರಾಶಿ ತುಂಬಿ ಕೆಟ್ಟ ವಾಸನೆ ಬೀರುತ್ತಿದೆ. ಜನತೆ ಮೂಗು ಮುಚ್ಚಿಕೊಂಡು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸುತ್ತಮುತ್ತಲಿನ ಜನ ಸಾಂಕ್ರಾಮಿಕ ರೋಗಗಳು ಹರಡುವ ಭಯದಲ್ಲಿ ಜೀವನ ಸಾಗಿಸುವಂತಾಗಿದೆ. ರಸ್ತೆಯಂಚಿನಲ್ಲಿ ಕೆಲವರು ತಿಪ್ಪೆಗುಂಡಿ ಹಾಕಿಕೊಂಡಿದ್ದಾರೆ. ಸಿಸಿ ರಸ್ತೆ, ಚರಂಡಿ ಇಲ್ಲದ ಕಾರಣ ಮನೆ ಬಳಕೆ ನೀರು ಸಂಗ್ರಹವಾಗಿ ಗಬ್ಬು ವಾಸನೆ ಬರುತ್ತಿದೆ. ಈ ಗ್ರಾಮದಲ್ಲಿ ಕಳೆದ ಅನೇಕ ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾದರೂ ಗ್ರಾಮಸ್ಥರ ಗೋಳು ಕೇಳುವರು ಇಲ್ಲದಂತಾಗಿದೆ. ಬೆಳಗ್ಗೆ 6 ಗಂಟೆಯಿಂದ 10 ಗಂಟೆ, ರಾತ್ರಿ 6 ಗಂಟೆಯಿಂದ 9 ಗಂಟೆಯವರೆಗೆ ಮಾತ್ರ ವಿದ್ಯುತ್‌ ಸಂಪರ್ಕ. ಇಡೀ ರಾತ್ರಿ ಕತ್ತಲಲ್ಲಿ ಕಳೆಯಬೇಕು. ಇದರಿಂದ ಮಕ್ಕಳಿಗೆ, ವೃದ್ಧರಿಗೆ ತುಂಬಾ ತೊಂದರೆಯಾಗುತ್ತಿದೆ.

ಗ್ರಾಮದಲ್ಲಿ ಕಂಬಗಳಿವೆ, ಬೀದಿ ದೀಪಗಳಿಲ್ಲ, ಮಹಿಳಾ ಶೌಚಾಲಯವಿಲ್ಲ, ಸಮಯಕ್ಕೆ ಸರಿಯಾದ ಬಸ್‌ ವ್ಯವಸ್ಥೆ ಇಲ್ಲ. ಇದರಿಂದ ಗ್ರಾಮದ ಜನ ಮೂಲಸೌಕರ್ಯವಿಲ್ಲದೇ ನಿತ್ಯ ನರಕಯಾತನೆ ಪಡುವಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಗ್ರಾಮದ ಕಡೆ ಗಮನಹರಿಸಿ ಮೂಲಸೌಕರ್ಯ ಕಲ್ಪಿಸುತ್ತಾರೋ ಇಲ್ಲವೋ ಕಾಯ್ದು ನೋಡಬೇಕು.

ಗ್ರಾಮದ ಪರಿಸ್ಥಿತಿ ಹಾಗೂ ದುಸ್ಥಿತಿಯನ್ನು ಶಾಸಕ ಡಾ| ಅಜಯಸಿಂಗ್‌ ಬಳಿ ಹೇಳಿಕೊಂಡಾಗ ಹಂಚಿನಾಳ ಗ್ರಾಮ ಎಲ್ಲಿ ಬರುತ್ತದೆ ಎಂದು ನಮ್ಮನ್ನೇ ಪ್ರಶ್ನಿಸಿದ್ದರು. ಇದು ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಜನರ ಸಮಸ್ಯೆ ಆಲಿಸಿ ಅವರ ಕಷ್ಟಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳೇ ಈ ರೀತಿ ಉಡಾಫೆ ಮಾತುಗಳನ್ನು ಆಡಿದ್ದು ನಿಜಕ್ಕೂ ಬೇಸರ ತರಿಸಿದೆ.
• ಅಂಬೋಜಿ ಜಗತ್ತಪ್ಪ , ಗ್ರಾಮಸ್ಥ

ಜಾತ್ರೆ, ಕಾರ್ಯಕ್ರಮ ಏನೇ ನಡೆದರೂ ಯಾರೇ ಸತ್ತರೂ ಈ ಗ್ರಾಮಕ್ಕೆ ಜನಪ್ರತಿನಿಧಿಗಳು ಬರೋದಿಲ್ಲ. ಗ್ರಾಮದಲ್ಲಿ ಅನೇಕ ಸಮಸ್ಯೆಗಳಿದ್ದರೂ ಶಾಸಕರು ಸೇರಿದಂತೆ ಜಿಪಂ, ತಾಪಂ, ಗ್ರಾಪಂ ಸದಸ್ಯರು ಅಭಿವೃದ್ಧಿ ಕಡೆ ಗಮನ ನೀಡುತ್ತಿಲ್ಲ. ಚುನಾವಣೆ ಬಂದಾಗ ಮಾತ್ರ ಈ ಗ್ರಾಮ ಪ್ರತಿಯೊಬ್ಬರಿಗೂ ನೆನಪಿಗೆ ಬರುತ್ತದೆ.
ಶರಣಪ್ಪ ಹೊಸಮನಿ, ಗ್ರಾಮಸ್ಥ

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.