ಶಿಕ್ಷಕನ ಎತ್ತಂಗಡಿ: ಪ್ರತಿಭಟನೆ ಕೈಬಿಟ್ಟ ಮಕ್ಕಳು
ಕೋಳಕೂರ ಶಾಲೆಗೆ ಬಿಇಒ ಭೇಟಿ
Team Udayavani, Jun 30, 2019, 12:40 PM IST
ಜೇವರ್ಗಿ: ಕೋಳಕೂರ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಿಇಒ ಶಾಂತಪ್ಪ ಹುಲಕಲ್ ಆಲಿಸಿದರು.
ಜೇವರ್ಗಿ: ತಾಲೂಕಿನ ಕೋಳಕೂರ ಗ್ರಾಮದ ಸರಕಾರಿ ಪ್ರೌಢಶಾಲೆಗೆ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತಪ್ಪ ಹುಲಕಲ್ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.
ಶುಕ್ರವಾರ ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಶನಿವಾರ ಶಾಲಾ ಆವರಣದಲ್ಲಿ ಲೆಕ್ಕ ಬಾರದ ಗಣಿತ ಶಿಕ್ಷಕರ ವರ್ಗಾವಣೆ ಆಗುವ ವರೆಗೂ ಶಾಲೆ ಬೀಗ ತೆಗೆಯಲ್ಲ, ನಮಗೆ ಈ ಗಣಿತ ಶಿಕ್ಷಕ ಬೇಡವೇ ಬೇಡ ಎಂದು ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿದ್ದರು.
ಇದೇ ವೇಳೆ ವಿದ್ಯಾರ್ಥಿಗಳು ಗಣಿತ ಶಿಕ್ಷಕರು ನಮಗೆ ಅರ್ಥವಾಗುವ ರೀತಿಯಲ್ಲಿ ಪಾಠ ಮಾಡುತ್ತಿಲ್ಲ. ಗಣಿತ ವಿಷಯಕ್ಕೆ ಸಂಬಂಧಿಸಿದ ಯಾವುದೇ ಪ್ರಶ್ನೆ ಕೇಳಿದರೂ ಸರಿಯಾದ ಉತ್ತರ ನೀಡದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಡೈಜೆಸ್ಟ್ ನೋಡಿ ನೀವೇ ಉತ್ತರ ಹುಡುಕಿಕೊಳ್ಳಿ ಎನ್ನುತ್ತಾರೆ. ನಮಗೆ ಎಸ್ಎಸ್ಎಲ್ಸಿ ಪ್ರಮುಖ ಘಟ್ಟ. ಅದರಲ್ಲೂ ಎಲ್ಲಾ ವಿಷಯಗಳಿಗಿಂತ ಗಣಿತ ಕಠಿಣವಾಗಿದೆ. ಈ ವಿಷಯದ ಬಗ್ಗೆ ನಮಗೆ ತಿಳಿಯುವಂತೆ ಪಾಠ ಮಾಡದೇ ಶಿಕ್ಷಕರು ಉಡಾಫೆ ಮಾಡುತ್ತಿದ್ದಾರೆ ಎಂದು ದೂರಿದರು.
ಶಾಲೆಯಲ್ಲಿ ಸೇವಕಿಯಿದ್ದರೂ ನಮ್ಮ ಕೈಯಿಂದಲೇ ಶಾಲೆ ಆವರಣ, ಕೋಣೆಗಳ ಕಸಗೂಡಿಸುವುದು ಸೇರಿದಂತೆ ಇನ್ನಿತರ ಕೆಲಸ ಮಾಡಿಸಲಾಗುತ್ತಿದೆ. ಶಾಲೆಯಲ್ಲಿ ಸ್ವಚ್ಛತೆ ಎನ್ನುವುದೇ ಮರಿಚೀಕೆಯಾಗಿದೆ. ನಿತ್ಯ ನಮಗೆ ನೀಡುವ ಬಿಸಿಯೂಟದಲ್ಲಿ ತರಕಾರಿ ಬಳಸದೇ ಅರೆಬೆಂದ ಅನ್ನ, ತಿಳಿಸಾರು ನೀಡಲಾಗುತ್ತಿದೆ. ಈ ಎಲ್ಲ ಸಮಸ್ಯೆ ಬಗೆಹರಿಸುವುದರ ಜೊತೆಗೆ ಕೂಡಲೇ ಗಣಿತ ಶಿಕ್ಷಕರ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.
ಬಿಇಒ ಶಾಂತಪ್ಪ ಹುಲಕಲ್ ಗ್ರಾಮದ ಪ್ರಮುಖರ, ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಗಣಿತ ಶಿಕ್ಷಕರನ್ನು ಬೇರೆಡೆ ನಿಯೋಜನೆ ಮಾಡಲಾಗುವುದು. ಶಾಲೆ ಸ್ವಚ್ಛತೆ ಬಗ್ಗೆ ಸಿಬ್ಬಂದಿ ಗಮನಹರಿಸಬೇಕು. ಇಲ್ಲದಿದ್ದರೆ ಬೇರೆಡೆ ವರ್ಗಾವಣೆ ಮಾಡಬೇಕಾಗುತ್ತದೆ. ಅಲ್ಲದೇ ಮಕ್ಕಳಿಗೆ ನಿತ್ಯ ಗುಣಮಟ್ಟದ ಬಿಸಿಯೂಟ ನೀಡಬೇಕು ಎಂದು ಮುಖ್ಯಶಿಕ್ಷಕರಿಗೆ ತಾಕೀತು ಮಾಡಿದರು. ನಂತರ ಪ್ರತಿಭಟನೆ ಕೈಬಿಟ್ಟು ವಿದ್ಯಾರ್ಥಿಗಳು ತರಗತಿ ಕೋಣೆಗೆ ತೆರಳಿದರು.
ಮುಖ್ಯಶಿಕ್ಷಕ ಎಸ್.ಟಿ. ಬಿರಾದಾರ, ಗ್ರಾಪಂ ಅಧ್ಯಕ್ಷ ಅಮೃತರಾಯಗೌಡ ಪೇಠ ಪಾಟೀಲ, ಸದಸ್ಯ ರವಿಗೌಡ ಪಾಟೀಲ, ಆರ್ಎಸ್ಎಸ್ ಸೊಸೈಟಿ ಅಧ್ಯಕ್ಷ ಸಿದ್ಧಣ್ಣ ಕೂಡಿ, ಪೀರಣ್ಣ ಗುತ್ತಾ, ಮಲ್ಕಣ್ಣ, ಮಲ್ಲಣ್ಣ ಹೊಸಳ್ಳಿ, ಮಹಾದೇವ ಪಾಳೆದ್, ಬಸ್ಸುಗೌಡ ಪೇಠ ಪಾಟೀಲ ಹಾಗೂ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್