ಗ್ರಾಮೀಣ ಜನರಲ್ಲಿ ಡಿಜಿಟಲ್‌ ಅರಿವು ಮೂಡಿಸಿ


Team Udayavani, Jan 6, 2020, 3:43 PM IST

6-Jnauary-19

ಕಡೂರು: ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಹಾಯಧನ ಫಲಾನುಭವಿಗಳಿಗೆ ಹಾಗೂ ರೈತರಿಗೆ ನೇರವಾಗಿ ತಮ್ಮ ಖಾತೆಗಳಿಗೆ ಜಮಾ ಆಗುವುದರಿಂದ ಗ್ರಾಮೀಣ ಭಾಗದ ಜನತೆ ಹಾಗೂ ರೈತರು ಡಿಜಿಟಲ್‌ ಬಗ್ಗೆ ಜಾಗೃತಗೊಳ್ಳಬೇಕಿದೆ ಹಾಗೂ ಇದರ ಬಗ್ಗೆ ಅರಿವು ಮೂಡಬೇಕಿದೆ ಎಂದು ಶಾಸಕ ಬೆಳ್ಳಿಪ್ರಕಾಶ್‌ ತಿಳಿಸಿದರು.

ಅರಿವಿನ ಮನೆ ಡಿಜಿಟಲ್‌ ಪೇಮೆಂಟ್‌ ಪ್ರಮೋಷನ್‌ ಫೌಂಡೇಶನ್‌ ವತಿಯಿಂದ ಶನಿವಾರ
ತಾಲೂಕಿನ ಗರ್ಜೆ ಗ್ರಾಮದಲ್ಲಿ ಎಟಿಎಂ ಹಾಗೂ ಕ್ಯಾಶ್‌ ಡಿಪಾಜಿಟ್‌ ಕೇಂದ್ರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಗ್ರಾಮೀಣ ಮಟ್ಟದಲ್ಲಿ ಎಟಿಎಂ ಸ್ಥಾಪನೆ ಮಾಡುವುದರ ಮೂಲಕ ಚಾಲನೆ ಮಾಡಲಾಗಿದ್ದು. ಗ್ರಾಮೀಣ ಭಾಗದ ಜನತೆ ಮತ್ತು ರೈತರು ಇದರ ಸದುಪಯೋಗವನ್ನು ಪಡೆಯಬೇಕಿದೆ. ಬ್ಯಾಂಕಿನ ವ್ಯವಸ್ಥೆಯನ್ನು ಸರಳವಾದ ವಿಧಾನಗಳು ನಿಮ್ಮ ಮನೆಯ ಬಾಗಿಲಿಗೆ ತರಲಾಗಿದ್ದು. ಇದರ ಬಗ್ಗೆ ತಾವುಗಳು ಅರಿವು ಮೂಡಿಸಿಕೊಳ್ಳುವುದರ ಮೂಲಕ ಆರ್ಥಿಕವಾಗಿ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದರು.

ತಮ್ಮಲ್ಲಿರುವ ಹಣವನ್ನು ಮನೆಯಲ್ಲಿಯೇ ಇಟ್ಟುಕೊಳ್ಳದೇ ಬ್ಯಾಂಕಿನಲ್ಲಿ ವ್ಯವಹಾರ ವಹಿವಾಟು ನಡೆಸಿದಾಗ ಆರ್ಥಿಕ ವ್ಯವಸ್ಥೆಯ ಬಗ್ಗೆ ಜಾಗೃತಗೊಳ್ಳಲು ಸಹಕಾರಿಯಾಗಲಿದೆ. ಯಾವುದೇ ಸವಲತ್ತುಗಳು ಇತ್ತೀಚಿನ ದಿನಗಳಲ್ಲಿ ನಮ್ಮ ಮನೆಯ ಬಾಗಿಲಿಗೆ ಬರುವಂತಾಗಿದ್ದು. ಇದರ ಬಗ್ಗೆ ಜಾಗೃತಿ ಮೂಡಿಸಿಕೊಳ್ಳಲು ಬ್ಯಾಂಕಿನಲ್ಲಿ ವ್ಯವಹಾರ ಮಾಡುವುದರ ಮೂಲಕ ಬ್ಯಾಂಕಿಕ್‌ ವ್ಯವಸ್ಥೆಯ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಿದೆ ಎಂದರು.

ಅರಿವಿನ ಮನೆ ಫೌಂಡೇಶನ್‌ ಕಾರ್ಯದರ್ಶಿ ಡಾ.ಸಿ.ಜೆ. ಶಶಿಧರ್‌ ಮಾತನಾಡಿ, ಈ ಆರ್ಥಿಕ ವರ್ಷದಲ್ಲಿ ಫೌಂಡೇಶನ್‌ ವತಿಯಿಂದ ಜಿಲ್ಲಾದ್ಯಂತ ಸುಮಾರು 50 ಎಟಿಎಂಗಳ
ಘಟಕಗಳನ್ನು ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸುವ ಗುರಿ ಹೊಂದಲಾಗಿದೆ. ಪ್ರಥಮವಾಗಿ ಗರ್ಜೆ ಗ್ರಾಮದಲ್ಲಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು. ಮುಂದಿನ ದಿನಗಳಲ್ಲಿ ಪ್ರತಿ ಹೋಬಳಿ
ಕೇಂದ್ರಗಳಲ್ಲಿ ಘಟಕಗಳನ್ನು ತೆರೆಯಲಾಗುವುದು ಎಂದರು.

ಈ ಎಟಿಎಂ ಮೂಲಕ ಯಾವುದೇ ಬ್ಯಾಂಕಿಗೆ ಹಣ ಕಟ್ಟಬಹುದಾಗಿದೆ ಹಾಗೂ ಹಣ ತೆಗೆಯಬಹುದಾಗಿದೆ. ಇದಕ್ಕೆ ಆರ್‌ಬಿಐ ಮಾನ್ಯತೆ ಪಡೆದಿದೆ. ಎಜಿಎಸ್‌ ಸಂಸ್ಥೆಯ ಸಹಭಾಗಿತ್ವದಲ್ಲಿ ಈ ಕಾರ್ಯ ಮಾಡಲಾಗಿದೆ. ಜ.20ರಂದು ಸಿದ್ಧಗಂಗಾ ಶ್ರೀಗಳ ಮೊದಲನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಫೌಂಡೇಶನ್‌ ವತಿಯಿಂದ ನೆರವೇರಿಸಲಾಗುವುದು. ಭಕ್ತಾದಿಗಳಿಗೆ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಜಿ.ಪಂ ಸದಸ್ಯ ಕೆ.ಆರ್‌. ಮಹೇಶ್‌ ಒಡೆಯರ್‌, ಅರಿವಿನ ಮನೆ ಸೌಹಾರ್ದ ಸಹಕಾರ ನಿಯಮಿತ ಅಧ್ಯಕ್ಷ ಸಿ.ಎಂ. ಮೋಹನ್‌ಕುಮಾರ್‌, ಅರಿವಿನ ಮನೆ ಡಿಜಿಟಲ್‌ ಪೇಮೇಂಟ್‌ ಪ್ರಮೋಷನ್‌ ಅಧ್ಯಕ್ಷ ಎಚ್‌.ಎಂ. ಕಾಶಿನಾಥ್‌, ಅರಿವಿನ ಮನೆ ನಿರ್ದೇಶಕರಾದ ಎಂ.ಎಚ್‌. ಪ್ರಕಾಶ್‌ ಮೂರ್ತಿ, ಜಿ.ಕೆ. ಮರುಳಪ್ಪ, ಈಶ್ವರಪ್ಪ, ಎಸ್‌ .ಬಿ. ಬಸವರಾಜ್‌, ಶಿವಕುಮಾರ್‌, ತಿಮ್ಮಪ್ಪ, ಮಹೇಶ್ವರಪ್ಪ, ಉಮಾರಾಣಿ, ರವಿಕುಮಾರ್‌, ರಕ್ಷಿತ್‌, ದಿಲೀಪ್‌ ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.