ಸ್ವತಂತ್ರ ಮನಸ್ಸಿನ ಅಭಿವ್ಯಕ್ತಿಯೇ ಸೃಜನಶೀಲತೆ: ಮುಕುಂದರಾಜ್‌

ಯುವಜನತೆ ಮತ್ತು ವಿಶ್ವಮಾನವ ತತ್ವ ವಿಚಾರ ಸಂಕಿರಣ-ಉಪನ್ಯಾಸ

Team Udayavani, Dec 22, 2019, 3:34 PM IST

22-Decemebrer-19

ಕಡೂರು: ಸೃಜನಶೀಲತೆ ಎಂಬುದು ಸ್ವತಂತ್ರ ಮನಸ್ಸಿನ ಅಭಿವ್ಯಕ್ತಿ. ಆ ಸ್ವತಂತ್ರ ಮನೋಭಾವವೇ ಕುವೆಂಪು ಅವರನ್ನು ಸೃಷ್ಟಿಸಿತು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಎಲ್‌.ಎಂ.ಮುಕುಂದರಾಜ್‌ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಭಾರತ್‌ ಸ್ಕೌಟ್ಸ್‌, ರೇಂಜರ್‌ ಮತ್ತು ರೋವರ್ ಘಟಕದ ವತಿಯಿಂದ ಶನಿವಾರ ಏರ್ಪಡಿಸಿದ್ದ ಯುವಜನತೆ ಮತ್ತು ವಿಶ್ವಮಾನವ ತತ್ವ ವಿಚಾರ ಸಂಕಿರಣದಲ್ಲಿ ಅವರು ಉಪನ್ಯಾಸ ನೀಡಿದರು.

ಮಹಾಕಾವ್ಯಗಳು ನಮ್ಮ ಇತಿಹಾಸದ ಅಕರಗಳೆಂದರೆ ತಪ್ಪಲ್ಲ. ಅವುಗಳಲ್ಲಿ ಸೂಕ್ಷ್ಮ ಸತ್ಯಗಳ ಅನಾವರಣವಿದೆ. ಕುವೆಂಪು ಅವರ ರಾಮಾಯಣದಲ್ಲಿ ಮಹಿಳಾ ಪ್ರಾಧಾನ್ಯತೆಯನ್ನು ಕಾಣಬಹುದು. ರಾವಣ ತನ್ನ ಆಡಳಿತದಲ್ಲಿ ಸಮುದ್ರ ಸೇನೆಗೆ ಸಿಂಹಿಣಿ, ಗಡಿ ಭದ್ರತೆಗೆ ಲಂಕಿಣಿ, ಮುಜರಾಯಿ ವ್ಯವಹಾರಕ್ಕೆ ಲಂಕಾರತ್ನೆ ಮುಂತಾದವರನ್ನು ನಿಯೋಜಿಸಿದ್ದ.

ಅಂದರೆ, ಮಹಿಳೆಯರೂ ಪುರುಷ ಸಮಾನರಾಗಿ ಜವಾಬ್ದಾರಿ ಹೊರುತ್ತಿದ್ದರೆಂಬ ಕಲ್ಪನೆಯೇ ಕುವೆಂಪು ವೈಚಾರಿಕತೆಯನ್ನು ಬಿಂಬಿಸುತ್ತದೆ ಎಂಬುದನ್ನು ಗಮನಿಸಬೇಕು ಎಂದರು. ಕುವೆಂಪು ಧರ್ಮ ವಿರೋಧಿ ಯಲ್ಲ. ನಾಸ್ತಿಕರೂ ಅಲ್ಲ. ಅವರದ್ದು ಶೂದ್ರರಿಗೆ  ನಿಯಾಗುವ, ಮಹಿಳಾ ಸಬಲೀಕರಣದ ಪರವಾದ ಧ್ವನಿ. ಜಾತಿ-ಧರ್ಮಗಳ ಹಂಗಿಲ್ಲದ ಮನುಷ್ಯ. ಜಾತಿ ಮತ್ತು ಮಾನವ ಪ್ರಜ್ಞೆ, ವಿಶ್ವ ಭಾತೃತ್ವದ ಪ್ರಜ್ಞೆ ಮೂಡಿಸಲು ಶ್ರಮಿಸಿದರು. ಅವರ ರಚನೆಗಳಲ್ಲಿ ವಿಶ್ವಮಾನವ ಪ್ರಜ್ಞೆ ಮೂಡಬೇಕೆಂಬ ಕಳಕಳಿ ಎದ್ದು ಕಾಣುತ್ತದೆ ಎಂದರು.

ಶೂದ್ರರಿಗೆ ಸಾಹಿತ್ಯ ರಚನಾ ಪಾಂಡಿತ್ಯವಿತ್ತು ಎಂಬುದಕ್ಕೆ ರಾಮಾಯಣ, ಮಹಾಭಾರತ ಕಾವ್ಯಗಳೇ ಸಾಕ್ಷಿ. ಕಾಳಿದಾಸನಂತಹ ಮಹೋನ್ನತ ಕವಿಯೂ ಶೂದ್ರನೇ. ಆದರೆ, ಮಹಾಕಾವ್ಯ ರಚನಾ ಸಾಮರ್ಥ್ಯ ಹೊಂದಿದ್ದ. ಆದ್ದರಿಂದಲೇ ವಾಲ್ಮೀಕಿ, ವ್ಯಾಸರು ಇಂದಿಗೂ ಜೀವಂತವಿದ್ದಾರೆ. ಕುವೆಂಪು ಅವರನ್ನು ಚಿಂತನಕಾರರೆಂದು ಬಣ್ಣಿಸುವ ಆತುರದಲ್ಲಿ ಜನರಿಂದ ದೂರ ಮಾಡಿದ್ದೇವೆಂಬ ಆತಂಕ ಕಾಡುತ್ತಿದೆ. ಇಂದಿನ ಪರ್ವ ಕಾಲದಲ್ಲಿ ಯುವಜನತೆಗೆ ಸಾಮಾಜಿಕ ಚಿಂತನೆ ನಡೆಸಲು ಬಹಳಷ್ಟು ಅವಕಾಶಗಳಿವೆ. ಈ ನಿಟ್ಟಿನಲ್ಲಿ ಕುವೆಂಪು ಚಿಂತನೆಗಳನ್ನು ಅರ್ಥೈಸಿಕೊಂಡು ಒಂದಿಷ್ಟು ಅಳವಡಿಸಿಕೊಂಡರೆ ನಾವೂ ವಿಶ್ವಮಾನವರಾಗಬಹುದು ಎಂದು ತಿಳಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ|
ದೊರೇಶ್‌ ಬಿಳಿಕೆರೆ ಮಾತನಾಡಿ, ಕುವೆಂಪು ಅವರ ಸಾಹಿತ್ಯ ಓದಿದರೆ ತಾರಣ್ಯ ಮರುಕಳಿಸುತ್ತದೆ ಎಂಬ ಮಾತಿದೆ. ಕುವೆಂಪು ಸಾಹಿತ್ಯ ಓದಿದರೆ ಎಂತಹವರೂ ವಿಶ್ವಮಾನವರಾಗಬಲ್ಲ ಅವಕಾಶವಿದೆ. ಯುವಜನತೆ ಇದರತ್ತ ಗಮನ ಹರಿಸಬೇಕೆಂದರು. ವಿಚಾರ ಸಂಕಿರಣದಲ್ಲಿ ರಂಗಕರ್ಮಿ ಸಂಸ ಸುರೇಶ್‌, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.