ರಸ್ತೆ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ
ಪುರಸಭೆ ಆಸ್ತಿಗೆ ನಿವೇಶನ ರಹಿತರ ಕನ್ನ ಮಾಯವಾದ ಕನ್ಸರ್ವೆನ್ಸಿ ರಸ್ತೆಗಳು
Team Udayavani, Jul 17, 2019, 1:23 PM IST
ಕಡೂರು: ಬೀರೂರು ಪಟ್ಟಣದ ಹೊಸಳಮ್ಮ ಬಡಾವಣೆಯ ರಸ್ತೆ ಜಾಗದಲ್ಲಿ ಖಾಸಗಿಯವರು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿರುವುದು.
ಕಡೂರು: ಬೀರೂರು ಪುರಸಭೆ ವ್ಯಾಪ್ತಿಗೆ ಸಂಬಂಧಪಟ್ಟ ಅನೇಕ ಖಾಲಿ ನಿವೇಶನಗಳು ಮತ್ತು ರಸ್ತೆಗಳು ಕಾಣೆಯಾಗುತ್ತಿದ್ದು, ನಿವೇಶನಗಳ ಬಗ್ಗೆ ಮಾಹಿತಿ ತಿಳಿದೂ ತಿಳಿಯದಂತೆ ವರ್ತಿಸುತ್ತಿರುವ ಪುರಸಭೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೀರೂರಿನ ಹೊಸಳಮ್ಮ ಬಡಾವಣೆಯಲ್ಲಿ ಭವಿಷ್ಯದಲ್ಲಿ ರಸ್ತೆ ಮಾಡುವ ಉದ್ದೇಶದಿಂದ ಕನ್ಸರ್ವೆನ್ಸಿ ರಸ್ತೆಯೆಂದು ಘೋಷಣೆ ಮಾಡಲಾಗಿದ್ದ ಜಾಗದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅಕ್ರವಾಗಿ ಮನೆ ನಿರ್ಮಿಸುತ್ತಿದ್ದಾರೆ.
ಪಟ್ಟಣ ವ್ಯಾಪ್ತಿಯಲ್ಲಿ ಅದೆಷ್ಟೋ ರಸ್ತೆಗಳು ಮತ್ತು ಪುರಸಭೆ ನಿವೇಶನಗಳು ಕಾಣೆಯಾಗುತ್ತಿವೆ. ಇಂದು ನೋಡಿದ ಜಾಗ ನಾಳೆ ಇರಲ್ಲ ಅನ್ನುವಂತಾಗಿದೆ. ಬೇರೆಯರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿರುವವರೇ ಈ ಕೃತ್ಯಗಳನ್ನು ಮಾಡುತ್ತಿದ್ದಾರೆ ಎನ್ನಲಾಗುತ್ತದೆ.
ಪುರಸಭೆಯ ಸಾರ್ವಜನಿಕ ಆಸ್ತಿಯನ್ನು ಉಳಿಸುವ ಗೋಜಿಗೆ ಹೋಗದೆ ಪುರಸಭೆ ಕಣ್ಮುಚ್ಚಿ ಕುಳಿತಿದೆ. ನಿವೇಶನಗಳ ಕಬಳಿಕೆಯಲ್ಲಿ ಪುರಸಭೆ ಪಾತ್ರದ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ಮೂಡಿದೆ.
ಇಂತಹ ಹಲವು ನಿವೇಶನ ಹಾಗೂ ಕನ್ಸರ್ವೆನ್ಸಿ ರಸ್ತೆಗಳು ಉಳ್ಳವರ ಪಾಲಾಗುತ್ತಿವೆ. ಪುರಸಭೆ ಆಸ್ತಿಯನ್ನು ಖಾಸಗಿ ವ್ಯಕ್ತಿಗಳು ಆಕ್ರಮಿಸುತ್ತಿದ್ದರೆ ಅಧಿಕಾರಿಗಳು ತಮಗೇನು ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದು ಅಚ್ಚರಿ ಮೂಡಿಸಿದೆ.
ಹಣ ಬಲ ಅಥವಾ ರಾಜಕೀಯ ಹಿನ್ನೆಲೆಯಿಲ್ಲದ ಕಟ್ಟಡ ಪರವಾನಗಿ ಪಡೆಯದ ಕಟ್ಟಡಗಳಿಗೆ ಅಧಿಕಾರಿಗಳು ಮುತ್ತಿಗೆ ಹಾಕಬಹುದು ಅಥವಾ ಕೆಲಸಕ್ಕೆ ತಡೆ ಒಡ್ಡಬಹುದು. ಆದರೆ, ರಾಜಕೀಯ ಪ್ರಭಾವ ಹೊಂದಿ ಯಾವುದೇ ಪರವಾನಗಿ ಇಲ್ಲದೆ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಹಲವು ಸದಸ್ಯರ ಕುಮ್ಮಕ್ಕು ಕಾರಣ ಎನ್ನುವುದು ನಾಗರಿಕರ ಗುಮಾನಿ. ಇದೆಲ್ಲ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಮ್ಮುಖದಲ್ಲೇ ನಡೆದರೂ ಯಾರೂ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿಲ್ಲ ಪುರಸಭೆ ಗಮನಕ್ಕೆ ಬಂದರೂ ಯಾವುದೇ ಕ್ರಮ ವಹಿಸಿಲ್ಲ. ಪುರಸಭೆ ಇನ್ನಾದರೂ ಹೆಚ್ಚೆತ್ತು ಸಾರ್ವಜನಿಕ ಆಸ್ತಿಯನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಜಿಲ್ಲಾಡಳಿತ ಸ್ಥಳ ಪರಿಶೀಲನೆ ನಡೆಸುವಂತೆ ಪುರಸಭೆಗೆ ನಿರ್ದೇಶಿಸುವ ಮೂಲಕ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎಂಬುದು ನಾಗರಿಕರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ