ವಕೀಲಿ ವೃತ್ತಿ ಪಾವಿತ್ರ್ಯತೆ ಕಾಪಾಡಿ: ಸುಧೀಂದ್ರ ರಾವ್‌

ಕಂಪ್ಯೂಟರ್‌ ಬಳಕೆಯಿಂದ ವಕೀಲರು ಸೋಮಾರಿಗಳಾಗುವ ಆತಂಕ

Team Udayavani, Jul 28, 2019, 1:03 PM IST

28-July-30

ಕಡೂರು: ನ್ಯಾಯಾಲಯದ ಆವರಣದಲ್ಲಿ ನ್ಯಾಯಾಲಯ ಕಟ್ಟಡದ ಮೊದಲನೇ ಮಹಡಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಎನ್‌.ಕೆ.ಸುಧೀಂದ್ರ ರಾವ್‌ ಉದ್ಘಾಟಿಸಿದರು.

ಕಡೂರು: ವಕೀಲ ವೃತ್ತಿ ಇಂಜಿನಿಯರ್‌ ಹಾಗೂ ವೈದ್ಯ ವೃತ್ತಿಯನ್ನು ಹಿಂದಿಕ್ಕಿದ್ದು, ಅದರ ಪಾವಿತ್ರ್ಯತೆ ಕಾಪಾಡಬೇಕೆಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎನ್‌.ಕೆ.ಸುಧೀಂದ್ರರಾವ್‌ ಸಲಹೆ ನೀಡಿದರು.

ಜಿಲ್ಲಾ ನ್ಯಾಯಾಲಯ, ಚಿಕ್ಕಮಗಳೂರು ಲೋಕೋಪಯೋಗಿ ಇಲಾಖೆ, ಕಡೂರು ವಕೀಲರ ಸಂಘ ಶನಿವಾರ ಕಡೂರು ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನ್ಯಾಯಾಲಯ ಕಟ್ಟಡದ ಮೊದಲನೇ ಮಹಡಿ ಉದ್ಘಾಟಿಸಿ ಅವರು ಮಾತನಾಡಿದರು.

ಇಂಜಿನಿಯರ್‌ ಮತ್ತು ವೈದ್ಯ ವೃತ್ತಿಗೆ ಮಾತ್ರ ಹೆಚ್ಚಿನ ಆದ‌್ಯತೆ ನೀಡುತ್ತಿದ್ದ ಸಮಾಜ, ಇಂದು ವಕೀಲ ವೃತ್ತಿಗೆ ಆದ್ಯತೆ ನೀಡುತ್ತಿದೆ. ಹಾಗಾಗಿ, ವಕೀಲ ವೃತ್ತಿಗೆ ಇವೆಲ್ಲವುಗಳನ್ನು ಹಿಂದಿಕ್ಕಿದೆ ಎಂದರು.

ವೃತ್ತಿಗೆ ಬಂದಾಕ್ಷಣ 5-6 ವರ್ಷಗಳ ಸತತ ಕಲಿಕೆಗೆ ಒತ್ತು ನೀಡಬೇಕು. ಪುಸ್ತಕಗಳನ್ನು ಹೆಚ್ಚಾಗಿ ಅಭ್ಯಾಸ ಮಾಡಬೇಕಾಗುತ್ತದೆ. ವಕೀಲ ವೃತ್ತಿ ಅತ್ಯಂತ ಪಾವಿತ್ರ್ಯತೆಯಿಂದ ಕೂಡಿದೆ. ತಮ್ಮ ಸ್ವಂತಿಕೆಯನ್ನು ಬೆಳೆಸಿಕೊಳ್ಳುವುದರ ಮೂಲಕ ನ್ಯಾಯ ನೀಡಬೇಕು. ಇತ್ತೀಚೆಗೆ ಕಂಪ್ಯೂಟರ್‌ ಬಳಕೆಯಿಂದ ವಕೀಲರು ಸೋಮಾರಿಗಳಾಗುತ್ತಿದ್ದಾರೆ ಎಂದು ವಿಷಾಸಿದರು.

ಟಿ.ವಿ., ಮೊಬೈಲ್, ಇಂಟರ್‌ನೆಟ್ ಬಳಕೆಯಿಂದ ಫಾರಂ ಮತ್ತು ಅರ್ಜಿಗಳನ್ನು ತುಂಬುವ ಪ್ರಕ್ರಿಯೆಯೇ ನಿಂತು ಹೋಗುತ್ತಿದೆ. ಇದನ್ನು ಬಳಕೆ ಮಾಡಿಕೊಳ್ಳಬೇಡಿ. ಸ್ವತಃ ತಾವೇ ಅರ್ಜಿಗಳನ್ನು ಪೂರ್ಣಗೊಳಿಸಿಕೊಳ್ಳಬೇಕೆಂದು ಕರೆ ನೀಡಿದರು.

ನಾವು ಎಷ್ಟೇ ದೊಡ್ಡ ಹುದ್ದೆಯಲ್ಲಿದ್ದರೂ ಸಾರ್ವಜನಿಕ ಹಿತಾಸಕ್ತಿಯಿಂದ ಕೆಲಸ ಮಾಡಬೇಕು. ಯಾವುದೇ ಹುದ್ದೆ ಶಾಶ್ವತವಲ್ಲ. ನಮ್ಮ ಕೈಲಾದ ಕರ್ತವ್ಯವನ್ನು ಮಾಡಬೇಕು. ದೀನ, ದಲಿತ ಮತ್ತು ಬಡವರಿಗೆ ನಾವು ಮಾಡಿದ ಸೇವೆಯೇ ನಮ್ಮನ್ನು ಗುರುತಿಸಲು ಸಾಧ್ಯ ಎಂದು ಕಿವಿಮಾತು ಹೇಳಿದರು.

ಕಡೂರು ವಕೀಲರ ಸಂಘ ಇಲ್ಲಿನ ನ್ಯಾಯಾಲಯವನ್ನು ಹೆಚ್ಚುವರಿ ಜಿಲ್ಲಾ ನ್ಯಾಯಾಲಯವನ್ನಾಗಿ ಮಾಡಲು ಬೇಡಿಕೆ ಇಟ್ಟಿದ್ದಾರೆ. ಇದರ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಹಿರಿಯ ಮತ್ತು ಕಿರಿಯ ವಕೀಲರಿಗೆ ಮಹಾಭಾರತ, ರಾಮಾಯಣದ ಕಥೆಗಳನ್ನು ಹೇಳುವುದರ ಮೂಲಕ ವಕೀಲರನ್ನು ನಗುವಿನಲ್ಲಿ ತೇಲಿಸಿದ ನ್ಯಾಯಮೂರ್ತಿಗಳು, ಕರ್ತವ್ಯದ ಬಗ್ಗೆ ಚಾಟಿ ಬೀಸಿದರು. ವಕೀಲರಿಗೆ ಕಾರ್ಯಾಗಾರ, ಸೆಮಿನಾರ್‌ಗಳನ್ನು ಏರ್ಪಡಿಸಲು ಸಲಹೆ ನೀಡಿದರು. ಕಡೂರು ನ್ಯಾಯಾಲಯವನ್ನು ರಾಜ್ಯದಲ್ಲಿಯೇ ಮಾದರಿ ನ್ಯಾಯಾಲಯವನ್ನಾಗಿ ಮಾಡಲು ಮುಂದಾಗಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧಿಧೀಶ ಉಮೇಶ್‌ ಎಂ. ಅಡಿಗ ಅವರು ಮಾತನಾಡಿ, ತ್ವರಿತ ನ್ಯಾಯ ನೀಡಲು ನ್ಯಾಯಾಲಯಗಳು ಸಿದ್ಧವಾಗಿದ್ದು, ಲೋಕ ಅದಾಲತ್‌, ರಾಜೀ ಸಂಧಾನಗಳ ಮೂಲಕ ನ್ಯಾಯ ನೀಡಲಾಗುತ್ತಿದೆ. ಕಡೂರು ನ್ಯಾಯಾಲಯವನ್ನು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಾಡಲು ತಾವು ಇಟ್ಟಿರುವ ಬೇಡಿಕೆ ನೈಜವಾಗಿದ್ದು, ಸಾಕಾರವಾಗಲಿ ಎಂದು ಆಶಿಸಿದರು.

ಕಡೂರು ನ್ಯಾಯಾಲಯದ ನ್ಯಾಯಾಧೀಶರಾದ ಎಂ.ರಾಜು, ಚಂದನ್‌, ರಘುರಾಮ್‌, ದೀಪು, ಸರ್ಕಾರಿ ವಕೀಲರಾದ ಹರೀಶ್‌, ಚಿಕ್ಕಮಗಳೂರಿನ ನ್ಯಾಯಾಧಿಧೀಶರಾದ ಎಚ್.ಆರ್‌.ಹೆಗ್ಗಡೆ, ಕಾನೂನು ಸೇವಾ ಪ್ರಧಾನ ಕಾರ್ಯದರ್ಶಿ ಬಸವರಾಜ್‌, ಕಡೂರು ವಕೀಲರ ಸಂಘದ ಅಧ್ಯಕ್ಷ ಡಿ.ಎನ್‌.ಪ್ರಕಾಶ, ಹಿರಿಯ ವಕೀಲರಾದ ಶಿವಕುಮಾರ್‌, ಎಂ.ಎಸ್‌.ಯಳವಾರ್‌, ತರೀಕೆರೆ ಉಪವಿಭಾಗಾಧಿಕಾರಿ ಬಿ.ಆರ್‌.ರೂಪಾ, ಕಡೂರು ತಹಶೀಲ್ದಾರ್‌ ಉಮೇಶ್‌, ಕಡೂರು ವಕೀಲರ ಸಂಘದ ಕಾರ್ಯದರ್ಶಿ ದಾದಾ ಖಲಂದರ್‌, ಹಿರಿಯ ಮತ್ತು ಕಿರಿಯ ವಕೀಲರು ಮಹಿಳಾ ವಕೀಲರು, ಲೋಕೋಪಯೋಗಿ ಇಲಾಖೆ ಅಭಿಯಂತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.