ನೀರಾವರಿ ಯೋಜನೆಗೆ ಜನರ ಸಹಭಾಗಿತ್ವ ಅಗತ್ಯ

ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಶರತ್‌ ಕೃಷ್ಣಮೂರ್ತಿ ಅಭಿಮತ

Team Udayavani, Jul 27, 2019, 4:09 PM IST

27-July-35

ಕಡೂರು: ಪಟ್ಟಣದಲ್ಲಿ ನಡೆದ ದಿವಂಗತ ಕೆ.ಎಂ.ಕೃಷ್ಣಮೂರ್ತಿ ಅವರ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ನೀರಾವರಿ ತಜ್ಞ ರಾಜಕುಮಾರ್‌ ಉದ್ಘಾಟಿಸಿದರು.

ಕಡೂರು: ನೀರಾವರಿ ಯೋಜನೆಗಳ ಜಾರಿ ಯಲ್ಲಿ ಜನಸಮುದಾಯದ ಸಹಭಾಗಿತ್ವ ಇದ್ದರೆ ಪ್ರತಿಫಲ ಬಹುಬೇಗನೆ ಸಿಗಲಿದೆ ಎಂದು ಜಿಪಂ ಸದಸ್ಯ ಶರತ್‌ ಕೃಷ್ಣಮೂರ್ತಿ ಹೇಳಿದರು.

ಪಟ್ಟಣದ ಜ್ಞಾನಭಾರತಿ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ಮತ್ತು ಕೆ.ಎಂ.ಕೆ.ಚಾರಿಟಬಲ್ ಟ್ರಸ್ಟ್‌ ವತಿ ಯಿಂದ ನಡೆದ ದಿವಂಗತ ಕೆ.ಎಂ.ಕೃಷ್ಣಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ನೀರಾವರಿ ಯೋಜನೆಗಳಿಗೆ ಕೆಎಂಕೆ ಕೊಡುಗೆ’ ವಿಷಯದ ಕುರಿತು ಮಾತನಾಡಿದರು.

ನೀರಿನ ಸಂರಕ್ಷಣೆ ಮತ್ತು ಸದ್ಬಳಕೆ ಕೇವಲ ಸರ್ಕಾರದ ಹೊಣೆಯಲ್ಲ. ಇದರಲ್ಲಿ ಸಾರ್ವಜನಿಕರ ಪಾಲೂ ಇದೆ. ಮಹಾರಾಷ್ಟ್ರ ರಾಜ್ಯದ ಕಡವಂತಿ ಗ್ರಾಮದಲ್ಲಿ ಸರಕಾರದ ಯಾವುದೇ ಅನುದಾನವನ್ನು ಬಯಸದೇ ಜನರೇ ಗ್ರಾಮದ ಸುತ್ತ ಸುಮಾರು 550ಕ್ಕೂ ಹೆಚ್ಚು ಸಣ್ಣ ಕೆರೆಗಳನ್ನು ನಿರ್ಮಿಸಿ ನೀರಾವರಿ ಕಲ್ಪಿಸಿಕೊಂಡಿದ್ದಾರೆ ಎಂದರು.

ಕಡೂರು ತಾಲೂಕಿಗೆ ಮಂಜೂರಾಗಿರುವ 1.583 ಟಿಎಂಸಿ ನೀರಿನ ಹಂಚಿಕೆಯನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸರ್ವ ಪಕ್ಷಗಳ ಆಂದೋಲನವೇ ನಡೆಯಬೇಕಾಗಿದೆ. ತಾಲೂಕಿಗೆ ನೀರಾವರಿ ಯೋಜನೆಗಳು ಜಾರಿಯಾಗಬೇಕೆಂಬ ಕನಸು ತಮ್ಮ ತಂದೆ ಕೃಷ್ಣಮೂರ್ತಿ ಅವರದ್ದಾಗಿತ್ತು. ಈ ನಿಟ್ಟಿನಲ್ಲಿ ಆಂದೋಲನ ಆರಂಭವಾದರೆ ಕೆಎಂಕೆ ಟ್ರಸ್ಟ್‌ ತನ್ನ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದರು.

ತರೀಕೆರೆ ನೀರಾವರಿ ತಜ್ಞ ರಾಜಕುಮಾರ್‌ ಮಾತನಾಡಿ, ಕೃಷ್ಣಾ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ಕಡೂರು ತಾಲೂಕಿಗೆ ಯಾವುದೇ ನೀರಾವರಿ ಯೋಜನೆಗಳ ಜಾರಿಗೆ ತಾಂತ್ರಿಕ ತೊಡಕುಗಳೇ ಹೆಚ್ಚು. ಜನಶಕ್ತಿ ಮತ್ತು ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಹಕ್ಕಿನ ನೀರನ್ನು ಬಳಸಿಕೊಳ್ಳಲು ಸಾಧ್ಯ ವಾಗದಿರುವುದು ದುರಂತ ಎಂದರು.

ನೀರಾವರಿ ಯೋಜನೆಗಳ ಜಾರಿ ಸಂಬಂಧ ಸಂಘ-ಸಂಸ್ಥೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹೋರಾಟ ಕೈಗೆತ್ತಿಕೊಂಡರೆ ಆ ಸಂಬಂಧ ತಾಂತ್ರಿಕ ನೆರವು ನೀಡಲು ಬದ್ಧನಾಗಿದ್ದೇನೆ. ಹೋರಾಟದ ನೇತೃತ್ವ ವಹಿಸಿದವರು ಯಾವುದೇ ಸಂದರ್ಭದಲ್ಲಿ ಕರೆದರೂ ಬಂದು ತಮ್ಮ ಅಳಿಲು ಸೇವೆ ಸಲ್ಲಿಸುತ್ತೇನೆಂದು ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕೆಎಂಕೆ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷೆ ಸುಜಾತಾ ಕೃಷ್ಣಮೂರ್ತಿ ಮಾತನಾಡಿ, ದಿವಂಗತ ತಮ್ಮ ಪತಿಯ ನೀರಾವರಿ ಕನಸು ನನಸಾಗುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಹೋರಾಟ ಕೈಗೆತ್ತಿಕೊಳ್ಳಬೇಕು. ಈ ದತ್ತಿ ಉಪನ್ಯಾಸದ ಮೂಲಕ ಇಂತಹ ಹೋರಾಟದ ಹಾದಿ ಆರಂಭಕ್ಕೆ ನಾಂದಿ ಹಾಡಿರುವುದು ಹೆಮ್ಮೆಯ ಸಂಗತಿ. ಇದಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಯಗಟಿ ರವಿಪ್ರಕಾಶ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ನಿವೃತ್ತ ಪ್ರಾಂಶುಪಾಲ ಕಪಿನೇಗೌಡ, ಪುರಸಭಾ ಮಾಜಿ ಸದಸ್ಯ ಎನ್‌. ಬಷೀರ್‌ ಸಾಬ್‌, ಅಡಕೆ ಬೆಳೆಗಾರರ ಸಂಘದ ಕಡೂರು ಅಧ್ಯಕ್ಷ ಕೆ.ಎಚ್.ಶಂಕರ್‌, ಬೀರೂರು ಅಧ್ಯಕ್ಷ ಸೋಮಶೇಖರ್‌, ಜಾನಪದ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್‌, ಜ್ಞಾನಭಾರತಿ ವಿದ್ಯಾಸಂಸ್ಥೆ ಕಾರ್ಯದರ್ಶಿ ನಂದಿನಿ ಶಿರಹಟ್ಟಿ, ಕಸಾಪ ನಗರ ಅಧ್ಯಕ್ಷ ಎ.ಮಣಿ, ಜಿಲ್ಲಾ ಕಸಾಪ ಕಾರ್ಯದರ್ಶಿ ಕೆ.ಜಿ.ಶ್ರೀನಿವಾಸ್‌ಮೂರ್ತಿ, ಪತ್ರಕರ್ತ ಎಚ್.ಎಸ್‌.ಪರಮೇಶ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.