1.45 ಟಿಎಂಸಿ ನೀರು ಸದ್ಬಳಕೆಯಾಗಲಿ

ಸಮಾನ ಮನಸ್ಕರ ಸಭೆವಾಸ್ತವ ಅವಲೋಕಿಸಿ ವಿಮರ್ಶಿಸಿ: ದತ್ತ

Team Udayavani, Dec 9, 2019, 5:09 PM IST

December-21

ಕಡೂರು: ತಾಲೂಕಿಗೆ ಕೃಷ್ಣಾ ಕೊಳ್ಳದಿಂದ ಮಂಜೂರಾಗಿರುವ 1.45 ಟಿಎಂಸಿ ನೀರಿನ ಸದುಪಯೋಗ ಸಂಪೂರ್ಣವಾಗಿ ತಾಲೂಕಿಗೆ ಲಭಿಸಲಿ ಎಂದು ಮಾಜಿ ಶಾಸಕ ವೈ.ಎಸ್‌.ವಿ ದತ್ತ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಮ್ಮ ಭಾಗದ ನ್ಯಾಯಯುತ ಹಕ್ಕಿನಲ್ಲಿ ಸರಕಾರದಿಂದ ಕೊಡಲ್ಪಟ್ಟಿರುವ ನೀರಿನ ಸದ್ಬಳಕೆ ಮಾಡಿಕೊಳ್ಳುವಂತೆ ಈ ಹಿಂದೆಯೇ ಯಗಟಿ ಗ್ರಾಮದಲ್ಲಿ ಸೇರಿದ್ದ ಸಮಾನ ಮನಸ್ಕರ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಆದರೆ ಇತ್ತೀಚಿನ ಮಾಧ್ಯಮಗಳ ವರದಿ ನೋಡಿದಾಗ ತಾಲೂಕಿನ ಹಕ್ಕಾದ ನೀರಿನ ಬಳಕೆ ಕಡಿತಗೊಳಿಸುವ ಆತಂಕ ಎದುರಾಗಿದೆ. ಕೆಲವರ ಪ್ರತಿಕ್ರಿಯೆಗಳನ್ನು ಗಮನಿಸಿದಾಗ ಈ ಆತಂಕ ಇನ್ನೂ ಹೆಚ್ಚಾಗಿದೆ. ವಾಸ್ತವ ಅವಲೋಕಿಸಿ ವಿಚಾರ ವಿಮರ್ಶೆ ಮಾಡಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.

ತಾಲೂಕಿನ ನೀರಾವರಿ ಕನಸಿಗೆ ಹಲವು ವರ್ಷಗಳ ಇತಿಹಾಸವಿದೆ. ತಾವು ಶಾಸಕರಾಗಿದ್ದಾಗ ಗರಿಗೆದರಿದ ಹೆಬ್ಬೆ ನೀರಾವರಿ ಯೋಜನೆ ನಂತರದ ದಿನದಲ್ಲಿ ಕಾರ್ಯಸಾಧುವಲ್ಲ ಎಂದು ಸರಕಾರವೇ ಉತ್ತರ ನೀಡಿದ್ದರಿಂದ ಪರ್ಯಾಯವಾಗಿ ಗೊಂದಿ ಆಣೆಕಟ್ಟು ಯೋಜನೆಯನ್ನು ಸರಕಾರದ ಮುಂದೆ ತಾವು ಪ್ರಸ್ತಾಪಿಸಿದ್ದಲ್ಲದೇ ಯೋಜನೆಗೆ ಸಂಬಂಧಪಟ್ಟಂತೆ ಸರ್ವೇ ಕಾರ್ಯದಿಂದ ಆರಂಭಗೊಂಡು ವಿಸ್ತೃತವಾದ ಡಿಪಿಆರ್‌ ಯೋಜನೆಯನ್ನು ಕರ್ನಾಟಕ ನೀರಾವರಿ ಮಂಡಳಿ ಸಭೆಯವರೆಗೆ ಯೋಜನೆ ಕೊಂಡೊಯ್ದಿದ್ದೆ ಎಂದು ವಿವರಿಸಿದರು.

ಇದೀಗ ವಿಶ್ವೇಶ್ವರಯ್ಯ ಜಲನಿಗಮ ನಿಯಮಿತ ಕಚೇರಿಯು ಭದ್ರಾ ಆಣೆಕಟ್ಟಿನ ಕೆಳಭಾಗದಿಂದ ನೀರನ್ನು ಚಿಕ್ಕಮಗಳೂರು ಜಿಲ್ಲೆಯ ಮದಗದಕೆರೆ, ಅಯ್ಯನಕೆರೆ, ಬೆಳವಾಡಿಕೆರೆ ಸೇರಿದಂತೆ ಚಿಕ್ಕಮಗಳೂರು, ತರೀಕೆರೆ ಕಡೂರು ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಸೇರಿದಂತೆ ಒಟ್ಟು 167 ಕೆರೆಯನ್ನು ತುಂಬಿಸುವ ಸರ್ವೇ ಮತ್ತಿತರ ಕೆಲಸಕ್ಕೆ 19-10-2019 ರಂದು ಟೆಂಡರ್‌ ಕರೆದಿರುವುದು ರೈತರಲ್ಲಿ ಆತಂಕ ಉಂಟು ಮಾಡಿದೆ.

ಈ ಮೊದಲು ಸರಕಾರದ ಮುಂದಿದ್ದ ಗೊಂದಿ ಆಣೆಕಟ್ಟು ಯೋಜನೆಯಲ್ಲಿ ಕಡೂರು ತಾಲೂಕಿನ ಮದಗದಕೆರೆ, ದೇವನಕೆರೆ ಹಾಗೂ ವಿಷ್ಣುಸಮುದ್ರ ಕೆರೆಗೆ ನೀರನ್ನು ಹರಿಸಿ ನಂತರ ಅದರ ಸರಣಿ ಕೆರೆಗಳನ್ನು ಭರ್ತಿ ಮಾಡುವ ಯೋಜನೆ ಸಿದ್ಧಪಡಿಸಲಾಗಿತ್ತು. ಇದರಿಂದ ತಾಲೂಕಿನ ಹಕ್ಕಾದ 1.45 ಟಿಎಂಸಿ ನೀರು ಸಂಪೂರ್ಣವಾಗಿ ತಾಲೂಕಿಗೆ ಲಭಿಸುತ್ತಿತ್ತು. ಆದರೆ ಇದೀಗ ಕರೆದಿರುವ ಟೆಂಡರ್‌ ಆಧಾರದ ಯೋಜನೆಯಲ್ಲಿ ತಾಲೂಕಿನ ಹಕ್ಕಿನ ನೀರು ಮೊಟಕಾಗುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

ಹೊಸ ಯೋಜನೆಯಲ್ಲಿ ಕಡೂರು ತಾಲೂಕಿನ 87 ಕೆರೆಗಳು, ತರೀಕೆರೆಯ 39, ಚಿಕ್ಕಮಗಳೂರಿನ 37 ಹಾಗೂ ಅರಸೀಕೆರೆ ತಾಲೂಕಿನ 4 ಕೆರೆಗಳು ನೀರನ್ನು ಕಾಣುತ್ತವೆ ಎಂದು ನೀರಾವರಿ ನಿಗಮದ ದಾಖಲೆಗಳು ಹೇಳುತ್ತವೆ. ವಾಸ್ತವವಾಗಿ ಈ ಹಿಂದೆ ಗೊಂದಿ ಆಣೆಕಟ್ಟು ಯೋಜನೆಯಲ್ಲಿ ವಿಷ್ಣುಸಮುದ್ರ ಕೆರೆಗೆ 0.86 ಟಿಎಂಸಿ ನೀರನ್ನು ಮೀಸಲಿಡಲಾಗಿತ್ತು. ಹೊಸ ಯೋಜನೆಯಲ್ಲಿ ಅದು 0.2 ಕ್ಕೆ ಇಳಿದಿದ್ದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಆಗಿದೆ ಎಂದು ತಿಳಿಸಿದರು.

ಒಟ್ಟಾರೆ ಒಂದು ತಾರ್ಕಿಕ ಅಂತ್ಯ ಕಂಡಿದ್ದ ಗೊಂದಿ ಆಣೆಕಟ್ಟು ಯೋಜನೆಯನ್ನು ಸಂಪೂರ್ಣವಾಗಿ ತಿರುವು-ಮುರುವು ಮಾಡಿ ಭದ್ರಾ ಉಪಕಣಿವೆ ಯೋಜನೆ ಎಂದು ನಾಮಾಂಕಿತಗೊಳಿಸಿ ಜಾರಿ ಮಾಡಲು ಹೊರಟಿರುವ ಸರಕಾರದ ನಿರ್ಧಾರ ಸರಿಯಲ್ಲ ಎಂದರು.

ವಿಷ್ಣುಸಮುದ್ರ ಕೆರೆ ನೀರಿನ ಬಳಕೆದಾರರ ಹೋರಾಟ ಸಮಿತಿಯ ಶರತ್‌, ಎಪಿಎಂಸಿ ನಿರ್ದೇಶಕ ಬಿದರೆ ಜಗದೀಶ್‌, ವೈ.ಎಸ್‌. ರವಿಪ್ರಕಾಶ್‌, ಗೋವಿಂದಪ್ಪ, ಎ.ಪಿ. ಚಂದನ್‌, ಶ್ರೀರಾಂಪುರ ಮಹೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.