ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ

ಬೆಳಗ್ಗೆಯಿಂದಲೇ ಮತಗಟ್ಟೆಗೆ ಧಾವಿಸಿದ ಮತದಾರ •ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್

Team Udayavani, May 30, 2019, 12:14 PM IST

30-May-22

ಕಡೂರು: 4ನೇ ವಾರ್ಡ್‌ನ ಮತಗಟ್ಟೆಯಲ್ಲಿ ಸರದಿ ಸಾಲಿನಲ್ಲಿ ನಿಂತಿರುವ ಮತದಾರರು

ಕಡೂರು: ಬುಧವಾರ ನಡೆದ ಕಡೂರು ಪುರಸಭೆ ಚುನಾವಣೆಯಲ್ಲಿ 23 ವಾರ್ಡ್‌ಗಳಲ್ಲಿ ಶೇ 71.28 ಮತದಾನ ನಡೆದಿದ್ದು, 89 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರ ಬರೆದಿದ್ದಾನೆ.

ಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ವಿವಿಧ ವಾರ್ಡ್‌ಗಳ ಅಭ್ಯರ್ಥಿಗಳು ಮಳೆ ಬಂದರೆ ಶೇಕಡವಾರು ಮತದಾನ ಕುಸಿದರೆ ಹೇಗೆ ಎಂಬ ಆತಂಕದಲ್ಲಿದ್ದರು. ಅದರೆ ಸುಮಾರು 9 ಗಂಟೆಯ ವೇಳೆಗೆ ಬಿಸಿಲು ಏರಿ ಮಳೆಮೋಡ ಕರಗಿ ಅಭ್ಯರ್ಥಿಗಳ ಆತಂಕವನ್ನು ದೂರ ಮಾಡಿತು.

23 ವಾರ್ಡ್‌ಗಳಲ್ಲಿಯೂ ಬೆಳಗ್ಗೆ 7 ಗಂಟೆಯಿಂದಲೇ ಮಂದಗತಿಯಲ್ಲಿ ಆರಂಭವಾದ ಮತದಾನ ಪ್ರಕ್ರಿಯೆ ಮಧ್ಯಾಹ್ನ 12 ಗಂಟೆಯ ವೇಳೆಗೆ ಕೆಲವು ವಾರ್ಡ್‌ಗಳಲ್ಲಿ ಶೇ.40ರಷ್ಟು ಮತದಾನ ನಡೆದಿದ್ದರೆ, ಇನ್ನು ಕೆಲವು ವಾರ್ಡ್‌ಗಳಲ್ಲಿ ಶೇ.20ನ್ನು ದಾಟಿರಲಿಲ್ಲ. ಬಿರು ಬಿಸಿಲನ್ನು ಲೆಕ್ಕಿಸದೆ ಜನರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದರು.

ಮತಗಟ್ಟೆಯ 100 ಮೀಟರ್‌ ವ್ಯಾಪ್ತಿಯಲ್ಲಿ ಯಾವ ಚಟುವಟಿಕೆಯೂ ಇರಬಾರದು ಎಂಬ ನಿಯಮವಿದ್ದರೂ ಅನೇಕ ಮತಗಟ್ಟೆಗಳ ಸನಿಹದಲ್ಲೇ ಅಭ್ಯರ್ಥಿಗಳ ಬೂತ್‌ ಏಜೆಂಟರು ಟೇಬಲ್, ಕುರ್ಚಿ ಹಾಕಿಕೊಂಡು ಮತದಾರರಿಗೆ ಮತಚೀಟಿ ಬರೆದುಕೊಡುವ ಕಾಯಕದಲ್ಲಿ ತೊಡಗಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಪ್ರತಿಷ್ಠಿತ ವಾರ್ಡ್‌ಗಳಾದ 1, 3, 5, 7, 11, 12, 16, 19 ಮತ್ತು 21 ರಲ್ಲಿ ವಿವಿಧ ಪಕ್ಷ ಮತ್ತು ಪಕ್ಷೇತರಾಗಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತದಾರರನ್ನು ಮನವೊಲಿಕೆ ಮಾಡುವ ಕಸರತ್ತು ನಡೆಸುತ್ತಿದ್ದರು. ಅವರ ಹಿಂಬಾಲಕರು ಮತ್ತು ಅಭಿಮಾನಿಗಳ ಮಧ್ಯೆ ಅಲ್ಲಲ್ಲಿ ಮಾತಿನ ಚಕಮಕಿ ನಡೆಯುತ್ತಿತ್ತು.

ವಾರ್ಡ್‌ ಸಂಖ್ಯೆ 2ರಲ್ಲಿ ರಹಮತ್‌ ನಗರದ ಒಳಗೆ ಇರುವ ಉರ್ದು ಪ್ರಾಥಮಿಕ ಶಾಲೆಯನ್ನು ಮತಗಟ್ಟೆಯಾಗಿ ಪರಿವರ್ತಿಸಿದ್ದು ಈ ಮತಗಟ್ಟೆ ಕನಿಷ್ಠ ಸೌಲಭ್ಯದಿಂದ ವಂಚಿತವಾಗಿದ್ದರೆ, ವಾರ್ಡ್‌ ಸಂಖ್ಯೆ 4ರಲ್ಲಿ ಕನಕಭವನವನ್ನು ಮತಗಟ್ಟಯಾಗಿ ಪರಿವರ್ತಿಸಿದ್ದರಿಂದ ಪೊಲೀಸರು ನೂಕು-ನುಗ್ಗಲು ತಪ್ಪಿಸಲು ಪರದಾಡಬೇಕಾಯಿತು.

ಒಟ್ಟಾರೆ 23 ವಾರ್ಡ್‌ಗಳಲ್ಲಿಯೂ ಶಾಂತಿಯುತ ಮತದಾನ ನಡೆದಿದ್ದು, ಇವಿಎಂ ಯಂತ್ರದಲ್ಲಿ ಅಭ್ಯರ್ಥಿಗಳ ಭವಿಷ್ಯ ಬರೆಯಲಾಗಿದೆ. ಇನ್ನೆರಡು ದಿನಗಳ ಕಾಲ ಅಭ್ಯರ್ಥಿಗಳ ಎದೆಯಲ್ಲಿ ಢ‌ವ ಢವ ಹೆಚ್ಚಗಲಿದ್ದು, ಮೇ.31 ರಂದು ಫಲಿತಾಂಶದೊಂದಿಗೆ ಸ್ಪಷ್ಟಚಿತ್ರಣ ಹೊರಬೀಳಲಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.