ಬರಿದಾಗಿದ್ದ ಮದಗದಕೆರೆಯಲ್ಲೀಗ 40 ಅಡಿ ನೀರು


Team Udayavani, Aug 9, 2019, 2:56 PM IST

9-Agust-28

ಕಡೂರು: ತಾಲೂಕಿನ ಮದಗದಕೆರೆಗೆ 40 ಅಡಿ ನೀರು ಬಂದಿದೆ.

ಕಡೂರು: ತಾಲೂಕಿನ ರೈತರ ಜೀವನಾಡಿ, ಐತಿಹಾಸಿಕ ಮಹತ್ವದ ಮದಗದ ಕೆರೆಗೆ ಕಳೆದ ಒಂದು ವಾರದಿಂದ ನೀರು ಹರಿಯುತ್ತಿದ್ದು, ಗುರುವಾರ 40 ಅಡಿ ನೀರು ಸಂಗ್ರಹವಾಗಿದೆ. ಒಟ್ಟು 65ಅಡಿ ಸಾಮರ್ಥ್ಯದ ಕೆರೆ ತುಂಬಲು ಇನ್ನು 25 ಅಡಿ ನೀರಿನ ಅವಶ್ಯಕತೆ ಇದೆ.

ಜಾನಪದ ಮಹತ್ವವಿರುವ ಈ ಕೆರೆ ತುಂಬುವುದೇ ಒಂದು ವಿಶೇಷ. ‘ಮಾಯದಂತ ಮಳೆ ಬಂದು ಮದಗಾದ ಕೆರೆ ತುಂಬಿತು’ ಎಂಬ ಜನಪದ ನುಡಿಯಂತೆ ಕೆರೆ ತುಂಬುತ್ತದೆ.

ಸಾವಿರಾರು ಎಕರೆ ಭೂ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿರುವ ಮದಗದಕೆರೆ ಕಳೆದ ವರ್ಷದ ಶ್ರಾವಣ ಮಾಸದಲ್ಲಿ ತುಂಬಿ ಕೋಡಿಬಿದ್ದಿತ್ತು. ಹಾಗಾಗಿ, ಸಂಭ್ರಮದಲ್ಲಿದ್ದ ರೈತರು ಈ ಬಾರಿ ಮದಗದಕೆರೆ ಕೋಡಿ ಬೀಳದೆ ಇರುವುದರಿಂದ ಆತಂಕಕ್ಕೆ ಒಳಗಾಗಿದ್ದರು. ಆದರೆ, ಕಳೆದ ಒಂದು ವಾರದಿಂದ ಚಿಕ್ಕಮಗಳೂರಿನ ಗಿರಿ ಪರ್ವತಗಳಲ್ಲಿ ಬೀಳುತ್ತಿರುವ ಮಳೆಯಿಂದ ಮದಗದಕೆರೆಗೆ ನೀರು ಹರಿಯುತ್ತಿರುವುದರಿಂದ ರೈತರಲ್ಲಿ ಹರ್ಷ ಮೂಡಿದೆ.

ಚಿಕ್ಕಮಗಳೂರು ಬಾಬಾ ಬುಡನ್‌ಗಿರಿಯ ಬೆಟ್ಟಗಳ ತಪ್ಪಲಿನಲ್ಲಿ, ಕಾಫಿ ತೋಟಗಳಲ್ಲಿ ಹೆಚ್ಚಿನ ಮಳೆಯಾದರೆ, ದತ್ತಪೀಠ, ತೊಗರಿ ಅಂಕಲ್, ಹೊಸಪೇಟೆ, ಮಲ್ಲೇನಹಳ್ಳಿ, ನಾಯಿಹಳ್ಳ, ಭೂತನಗಾದೆ, ಸಿದ್ಧರಹಳ್ಳಿ ಕಾಡು, ದೊಡ್ಡಯ್ಯನಗುಡ್ಡಗಳಲ್ಲಿ ಬೀಳುವ ಮಳೆ ನೀರು ಹರಿದು ಮದಗದಕೆರೆ ತುಂಬುವುದು ವಾಡಿಕೆಯಾಗಿದೆ.

ಮದಗದಕೆರೆ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಒಳಪಡುತ್ತದೆ. ಕೆರೆ ಸುಮಾರು 65ಅಡಿ ಆಳವಾಗಿದ್ದು, ಕೆರೆಯ ವಿಸ್ತೀರ್ಣ 131 ಹೆಕ್ಟೇರ್‌(300 ಎಕರೆ) ಭೂ ಪ್ರದೇಶವಿದೆ. ಸುತ್ತಲು ಬೆಟ್ಟ-ಗುಡ್ಡಗಳ ಹಸಿರಿನ ಹೊದಿಕೆಯಿದೆ. ಸುಂದರ ಪ್ರಕೃತಿಯಲ್ಲಿ ಕೆರೆ ನಿರ್ಮಾಣವಾಗಿದೆ. ಕೆರೆಯಲ್ಲಿ ನೀರಿನ ಸಾಮರ್ಥ್ಯ 1 ಟಿಎಂಸಿಗೂ ಕಡಿಮೆ ಎಂದು ಅಂದಾಜಿಸಲಾಗಿದೆ. ಇದೀಗ 40 ಅಡಿ ನೀರು ಬಂದಿದೆ. ಕೆರೆ ತುಂಬಿ ಕೋಡಿ ಬಿದ್ದರೆ ಸುಮಾರು 10 ಸಾವಿರ ಎಕರೆ ಭೂ ಪ್ರದೇಶಕ್ಕೆ ನೀರು ದೊರೆಯಲಿದೆ. ಹಳೇ ತೂಬು ಶಿಥಿಲವಾಗಿದ್ದು, ಶಾಸಕ ಬೆಳ್ಳಿಪ್ರಕಾಶ್‌ ವಿಶೇಷ ಕಾಳಜಿ ವಹಿಸಿ ದಾನಿಗಳ ಸಹಕಾರದೊಂದಿಗೆ ತೂಬು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಹೊಸ ತೂಬಿನ ನಿರ್ಮಾಣ ಭರದಿಂದ ಸಾಗಿದ್ದು, ಮಳೆಯಿಂದಾಗಿ ತಾತ್ಕಲಿಕವಾಗಿ ಕಾಮಗಾರಿ ನಿಲ್ಲಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್‌ ಮಂಜುನಾಥ್‌ ತಿಳಿಸಿದರು.

ಮದಗದಕೆರೆ ತುಂಬಿ ಕೋಡಿ ಬಿದ್ದರೆ ಬರಗಾಲಕ್ಕೆ ತುತ್ತಾಗುವ ಬಯಲುಸೀಮೆಯ 30ಕ್ಕೂ ಹೆಚ್ಚಿನ ಕೆರೆಗಳು ತುಂಬಲಿವೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.