ಗೂಡಂಗಡಿ ತೆರವಿಗೆ ವಿರೋಧ

ಪೊಲೀಸರು-ವ್ಯಾಪಾರಸ್ಥರ ನಡುವೆ ಮಾತಿನ ಚಕಮಕಿ •ಕೆಲಕಾಲ ಉದ್ವಿಗ್ನ ಸ್ಥಿತಿ

Team Udayavani, Aug 28, 2019, 1:35 PM IST

28-Agust-28

ಡೂರು: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗೂಡಂಗಡಿ ತೆರವು ಕಾರ್ಯಾಚರಣೆ ಸಂದರ್ಭ ಪಿಎಸ್‌ಐ ವಿಶ್ವನಾಥ್‌ ಮತ್ತು ಕೆಪಿಸಿಸಿ ಸದಸ್ಯ ಕೆ.ಎಸ್‌.ಆನಂದ್‌ ನಡುವೆ ಮಾತಿನ ಚಕಮಕಿ ನಡೆಯಿತು.

ಕಡೂರು: ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಮುಂದಾದ ಪುರಸಭೆ ಮತ್ತು ಪೊಲೀಸ್‌ ಅಧಿಕಾರಿಗಳ ಜತೆ ವ್ಯಾಪಾರಸ್ಥರು ಮಾತಿನ ಚಕಮಕಿ ನಡೆಸಿದ ಕಾರಣ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮಧ್ಯಾಹ್ನ ಪುರಸಭೆ ಆರೋಗ್ಯ ನಿರೀಕ್ಷಕ ಚಂದ್ರಪ್ಪ, ಪಿಎಸ್‌ಐ ಎನ್‌.ಸಿ.ವಿಶ್ವನಾಥ್‌ ಹಾಗೂ ಇತರೇ ಅಧಿಕಾರಿಗಳು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಹೆದ್ದಾರಿಯ ಎರಡೂ ಬದಿಯಲ್ಲಿ ಖಾಯಂ ಆಗಿ ನಿರ್ಮಿಸಿಕೊಂಡಿದ್ದ ಗೂಡಂಗಡಿಗಳ ತೆರವಿಗೆ ಮಂಗಳವಾರ ಮುಂದಾದರು.

ಈ ಹಂತದಲ್ಲಿ ಅಂಗಡಿಗಳ ವ್ಯಾಪಾರಸ್ಥರು ಮತ್ತು ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ ನಡೆದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಗೂಡಂಗಡಿ ಮಾಲೀಕರ ಪರವಾಗಿ ಬಂದ ಕೆಪಿಸಿಸಿ ಸದಸ್ಯ ಕೆ.ಎಸ್‌. ಆನಂದ್‌ ಅವರು, ತೆರವು ಕಾರ್ಯಾಚರಣೆ ನಿಲ್ಲಿಸುವಂತೆ ಪಿಎಸ್‌ಐ ವಿಶ್ವನಾಥ್‌ ಮತ್ತು ಪುರಸಭೆ ಅಧಿಕಾರಿಗಳಿಗೆ ಆಗ್ರಹಿಸಿದರು.

ಈ ವೇಳೆ ಪಿಎಸ್‌ಐ ವಿಶ್ವನಾಥ್‌ ಮತ್ತು ಆನಂದ್‌ ನಡುವೆ ಕೆಲಕಾಲ ಚರ್ಚೆ ನಡೆಯಿತು. ಆಗ ತಮಗೆ ಶಾಸಕರು ಮತ್ತು ಹೆದ್ದಾರಿ ನಿಯಮಗಳ ಅನುಸಾರ ಗೂಡಂಗಡಿಗಳ ತೆರವಿಗೆ ಸೂಚನೆ ಸಿಕ್ಕಿದೆ. ಈ ಭಾಗದಲ್ಲಿ ನಿತ್ಯ ಹಲವು ಅಪಘಾತ ಪ್ರಕರಣಗಳು ನಡೆಯುತ್ತಿವೆ. ರಸ್ತೆ ಕಿಷ್ಕಿಂದೆಯಾಗಿದೆ ಎಂದು ಪಿಎಸ್‌ಐ ವಿಶ್ವನಾಥ್‌ ಹೇಳಿದರೆ, ಇದಕ್ಕೆ ಪ್ರತಿಯಾಗಿ ಆನಂದ್‌, ಬಡವರು, ಕೂಲಿ ಕಾರ್ಮಿಕರು ಒಂದು ಹೊತ್ತಿನ ತುತ್ತಿಗಾಗಿ ಇಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಇವರನ್ನು ಒಕ್ಕಲೆಬ್ಬಿಸಬೇಡಿ ಎಂದು ಮನವಿ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್‌.ಆನಂದ್‌, ಯಾವುದೇ ನೋಟಿಸ್‌ ನೀಡದೇ ಅಮಾನುಷವಾಗಿ ಗೂಡಂಗಡಿಗಳನ್ನು ತೆರವು ಮಾಡುತ್ತಿರುವುದು ಬೇಸರದ ಸಂಗತಿ. ಎಲ್ಲರೂ ಶಾಸಕರಂತೆ ಶ್ರೀಮಂತರಾಗಿ ಜನಿಸಲು ಸಾಧ್ಯವಿಲ್ಲ. ಬಡವರೂ ಕ್ಷೇತ್ರದಲ್ಲಿ ಹುಟ್ಟಿದ್ದು, ಅವರ ಹೊಟ್ಟೆಪಾಡಿಗಾಗಿ ಗೂಡಂಗಡಿಗಳನ್ನು ಆಶ್ರಯಿಸಿಕೊಂಡಿದ್ದಾರೆ. ಏಳು ವರ್ಷ ತಾಲೂಕು ಸತತ ಬರದಿಂದ ತತ್ತರಿಸಿದೆ. ಜನರು ಕೂಲಿಗಾಗಿ ಪರದಾಡುತ್ತಿದ್ದಾರೆ ಎಂದರು.

ಮುಂದಿನ ದಿನದಲ್ಲಿ ಇದೇ ರೀತಿ ತೆರವು ಕಾರ್ಯಾಚರಣೆ ನಡೆದರೆ ಬಿದಿ ಬದಿ ವ್ಯಾಪಾರಿಗಳನ್ನು ಸಂಘಟಿಸಿಕೊಂಡು ಪುರಸಭೆ ಮತ್ತು ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಅಂದು ಇಲಾಖೆ ಮುಂದೆಯೇ ಆಹಾರ ಪದಾರ್ಥವನ್ನು ಬೇಯಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.