ಸರ್ವರ್‌ ಸಮಸ್ಯೆ: ಸಬ್‌ ರಿಜಿಸ್ಟ್ರಾರ್‌ಕಚೇರಿ ಸ್ತಬ್ಧ!

14 ದಿನಗಳಿಂದ ಆಸ್ತಿ ಖರೀದಿ, ಮಾರಾಟ, ಮದುವೆ ನೋಂದಣಿ ಕಾರ್ಯ ಸ್ಥಗಿತ ಸರ್ಕಾರದ ಆದಾಯಕ್ಕೆ ಖೋತಾ

Team Udayavani, Dec 14, 2019, 1:17 PM IST

14-December-12

„ಪ್ರಕಾಶ್‌ ಮೂರ್ತಿ ಏ.ಜೆ.
ಕಡೂರು:
ಇಲ್ಲಿನ ತಾಲೂಕು ಕಚೇರಿ ಕಟ್ಟಡದಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಯ ಸರ್ವರ್‌ ಡೌನ್‌ ಆಗಿದ್ದರಿಂದ, ಇಲಾಖೆಯ ಬಹುತೇಕ ಕೆಲಸ ಕಾರ್ಯಗಳು ಕಳೆದ 14ದಿನಗಳಿಂದ ಸ್ಥಗಿತಗೊಂಡು ಸಾರ್ವಜನಿಕರಿಗೆ ಇನ್ನಿಲ್ಲದ ಸಮಸ್ಯೆ ಎದುರಾಗಿದೆ.

ನವೆಂಬರ್‌ 30 ರಿಂದ ಸ್ಕ್ಯಾನಿಂಗ್‌ ಸಿಡಿ ಸಮಸ್ಯೆ ಎದುರಾಗಿದ್ದು, ಡಿಸೆಂಬರ್‌ 13ರಂದು ಕಚೇರಿ ಅವಧಿ ಮುಗಿದರೂ ಸಮಸ್ಯೆ ಇನ್ನೂ ಸರಿಯಾಗಿರಲಿಲ್ಲ. ಸಮಸ್ಯೆಯಿಂದ ಆಸ್ತಿ ಖರೀದಿ, ಮಾರಾಟ, ಮದುವೆ ನೋಂದಣಿ, ಆಸ್ತಿಗಳ ಮೇಲೆ ಬ್ಯಾಂಕ್‌ ಭೋಜಾ ನೋಂದಣಿ ಮುಂತಾದ ಎಲ್ಲಾ ಕೆಲಸಗಳು ಸ್ಥಗಿತಗೊಂಡಿವೆ. ಅಲ್ಲದೇ, ಸರ್ಕಾರದ ಖಜಾನೆಗೆ ನಿತ್ಯ ಬರುತ್ತಿದ್ದ ಭಾರೀ ಪ್ರಮಾಣದ ಆದಾಯಕ್ಕೂ ಹೊಡೆ ಬಿದ್ದಿದೆ.

ಕಡೂರು ತಾಲೂಕು ಜಿಲ್ಲೆಯಲ್ಲಿಯೇ ದೊಡ್ಡ ತಾಲೂಕು ಆಗಿರುವುದರಿಂದ ಪ್ರತಿದಿನ ನೋಂದಣಿ ಕಾರ್ಯ ಇದ್ದೇ ಇರುತ್ತದೆ. ಇಲ್ಲಿ ದಿನವೊಂದಕ್ಕೆ ಕನಿಷ್ಟ 40-50 ನೋಂದಣಿ ಕಾರ್ಯಗಳು ನಡೆಯುತ್ತವೆ. ಇದರಿಂದ ಸರ್ಕಾರಕ್ಕೆ ಅಂದಾಜು 5 ಲಕ್ಷ ರೂ.ಗೂ ಹೆಚ್ಚು ಆದಾಯ ಬರುತ್ತಿತ್ತು. ಆದರೆ ತಾಂತ್ರಿಕ ದೋಷದಿಂದ ಎಲ್ಲಾ ಕಾರ್ಯಗಳು ಸ್ಥಗಿತಗೊಂಡು ಅಪಾರ ಆದಾಯ ನಷ್ಟವಾಗಿದೆ. ಸಬ್‌ ರಿಜಿಸ್ಟ್ರಾರ್‌ ಕಚೇರಿಗೆ ಬರುವ ನೂರಾರು ಜನರಿಂದ ಹಣ ಪಡೆದು ದಲ್ಲಾಳಿ ಕೆಲಸ ಮಾಡುವವರಿಗೆ ಕಚೇರಿಯ ಸರ್ವರ್‌ ಸಮಸ್ಯೆಯಿಂದ ತಲೆ ಮೇಲೆ ಕೈ ಹೊತ್ತು ಕೂರುವಂತಹ ಸ್ಥಿತಿ ಎದುರಾಗಿದೆ.

ಬೇಗ ಸಮಸ್ಯೆ ಬಗೆಹರಿಯಲಿ. ನಮ್ಮ ಜೀವನಕ್ಕೆ ದಾರಿಯಾಗಲಿ ಎಂದು ಬೇಡಿಕೊಳ್ಳುತ್ತಿದ್ದುದು ಕಚೇರಿ ಆವರಣದಲ್ಲಿ ಕಂಡುಬಂದಿತು.

ಉಪ ನೋಂದಣಾಧಿಕಾರಿ ಕಚೇರಿಯಲ್ಲಿನ ಸಮಸ್ಯೆ ನಮಗೆ ಬೇರೆಯವರಿಂದ ತಿಳಿಯಿತು. ಅಧಿ ಕಾರಿಯನ್ನು ಕರೆಯಿಸಿ ಬುಧವಾರ ಬೆಂಗಳೂರಿನ ಮುಖ್ಯ ಕಚೇರಿಗೆ ಕಳುಹಿಸಿ ಸಮಸ್ಯೆಯನ್ನು ಕೂಡಲೆ ಬಗೆಹರಿಸಲು ಸೂಚಿಸಿದ್ದೆ. ಶುಕ್ರವಾರ ಸರ್ವರ್‌ ಮತ್ತು ಸ್ಟ್ರಾನಿಂಗ್‌ ಸಮಸ್ಯೆ ಬಗೆಹರಿದಿರುವುದಾಗಿ ತಿಳಿದು ಬಂದಿದೆ. ಶನಿವಾರ, ಭಾನುವಾರ ರಜೆ ದಿನಗಳಾಗಿದ್ದು, ಸೋಮವಾರದಿಂದ ಕಾರ್ಯ ನಿರ್ವಹಿಸಲಿದೆ.
. ಉಮೇಶ್‌, ತಹಶೀಲ್ದಾರ್‌

ಭೂಮಿ ಮಾರಾಟ ಮಾಡಿದ್ದು ಕಳೆದ 15 ದಿನಗಳಿಂದ ಉಪ ನೋಂದಣಾಧಿ ಕಾರಿ ಕಚೇರಿಗೆ ಅಲೆದು ಅಲೆದು ಸಾಕಾಗಿದೆ. ಮನೆಯಲ್ಲಿ ಮದುವೆ ಕಾರ್ಯ ಇದ್ದು, ಭೂಮಿಯನ್ನು ಮಾರಾಟ ಮಾಡಿದ್ದೇವೆ. ನೋಂದಣಿ ಮಾಡಿಸಿಕೊಡಲು ಇನ್ನೂ ಸಾಧ್ಯವಾಗಿಲ್ಲ. ನಮ್ಮ ಗೋಳು ಕೇಳುವವರ್ಯಾರು?
.ಕಡೂರಹಳ್ಳಿ ಉಮೇಶ್‌, ಸ್ಥಳೀಯರು

ಕಳೆದ 14 ದಿನಗಳಿಂದ ತಾಂತ್ರಿಕ ಸಮಸ್ಯೆಯಿಂದ ನೋಂದಣಿ ಕಾರ್ಯ ಸ್ಥಗಿತಗೊಂಡಿದೆ. ಕೂಡಲೆ ಜಿಲ್ಲಾ ನೋಂದಣಾಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಬೆಂಗಳೂರಿನ ಕೇಂದ್ರ ಕಚೇರಿಗೆ ಸಮಸ್ಯೆ ಕುರಿತು ಪತ್ರ ಬರೆಯಲಾಗಿತ್ತು. ಬೆಂಗಳೂರಿನ ಐಜಿಆರ್‌ ಕಚೇರಿಯಿಂದ ಶುಕ್ರವಾರ ತಾಂತ್ರಿಕ ದೋಷ ಸರಿಪಡಿಸುವ ಪ್ರಯತ್ನ ನಡೆಯುತ್ತಿದೆ. ಸೋಮವಾರದಿಂದ ಎಲ್ಲವೂ ಸರಿಯಾಗಿ ಎಂದಿನಂತೆ ನೋಂದಣೆ ಕಾರ್ಯ ನಡೆಯಲಿದೆ. ಸಾರ್ವಜನಿಕರು ಸಹಕಾರ ನೀಡಬೇಕು.
. ಶಾಂತಕುಮಾರ್‌,
ಪ್ರಭಾರ ಉಪ ನೋಂದಣಾಧಿಕಾರಿ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.