ತ್ಯಾಜ್ಯ ವಿಲೇವಾರಿ ಸಂಸ್ಕರಣಾ ಘಟಕ ಸಲ್ಲ

ಸರ್ವೆ ಕಾರ್ಯಕ್ಕೆ ಬಂದಿದ್ದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ•ಜನರ ಮನವೊಲಿಸಿದ ಉಪವಿಭಾಗಾಧಿಕಾರಿ ರೂಪಾ

Team Udayavani, Jul 31, 2019, 11:47 AM IST

31-JUly-15

ಕಡೂರು: ಬೀರೂರು ಬಳಿಯ ಹಂದಿಜೋಗಿಹಟ್ಟಿಯಲ್ಲಿ ಘನತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಸ್ಥಳೀಯ ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದರು.

ಕಡೂರು: ತಾಲೂಕು ಬೀರೂರು ಬಳಿಯ ಹಂದಿಜೋಗಿಹಟ್ಟಿಯಲ್ಲಿ ಘನತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಸ್ಥಳೀಯ ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದರು.

ತಾಲೂಕಿನ ಬೀರೂರು ಪಟ್ಟಣದ ಘನತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಪರಿಹಾರ ಹುಡುಕುವ ಉದ್ದೇಶದಿಂದ ಕಂದಾಯ ಇಲಾಖೆ, ಹುಲ್ಲೇಹಳ್ಳಿ ಗ್ರಾಪಂ ವ್ಯಾಪ್ತಿಯ ಹಂದಿಜೋಗಿಹಟ್ಟಿಯ ಸರ್ವೆ ನಂ.4ರಲ್ಲಿ 8 ಎಕರೆ ಭೂಮಿಯನ್ನು ಗುರುತಿಸಿ, ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕಾಗಿ ಅಧಿಕಾರಿಗಳು ಸರ್ವೆ ಕಾರ್ಯಕ್ಕೆ ಮುಂದಾಗಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದು, ಸರ್ವೆ ಕಾರ್ಯ ನಡೆಸದಂತೆ ತಡೆಯುವ ಯತ್ನ ಮಂಗಳವಾರ ನಡೆಯಿತು.

ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ತರೀಕೆರೆ ಡಿವೈಎಸ್ಪಿ ರೇಣುಕಾಪ್ರಸಾದ್‌ ಮತ್ತು ಉಪವಿಭಾಗಾಧಿಕಾರಿ ರೂಪಾ ಹಾಗೂ ಪುರಸಭೆ ಅಧಿಕಾರಿಗಳು ಹಂದಿಜೋಗಿಹಟ್ಟಿಯ ಕೆಲ ಮುಖಂಡರು ಮತ್ತು ಇನ್ನಿತರ ಅಧಿಕಾರಿಗಳ ಸಮ್ಮುಖದಲ್ಲಿ ಸರ್ವೆ ಕಾರ್ಯದ ಬಗ್ಗೆ ಮಾತುಕತೆ ನಡೆಸಿದರು. ಆದರೆ, ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಗ್ರಾಮಸ್ಥರಿಂದ ಸರ್ವೆ ನಡೆಸದಂತೆ ತೀವ್ರ ವಿರೋಧ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಲೆಮಾರಿ ಬುಡಕಟ್ಟು ಮಹಾಸಭಾ ಜಿಲ್ಲಾಧ್ಯಕ್ಷ ಕೃಷ್ಣರಾಮಪ್ಪ ಮಾತನಾಡಿ, ಹಂದಿಜೋಗಿಹಟ್ಟಿ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅವರು ಜೀವನೋಪಾಯಕ್ಕೆ ಹೈನುಗಾರಿಕೆಯನ್ನೇ ಪ್ರಮುಖ ವೃತ್ತಿಯನ್ನಾಗಿಸಿಕೊಂಡಿದ್ದಾರೆ. ಗ್ರಾಮದ ಸುತ್ತಮುತ್ತಲ ಪ್ರದೇಶಗಳಲ್ಲಿ ತಮ್ಮ ಸಾಕು ಪ್ರಾಣಿಗಳ ಮೇವಿಗೆ ಈ ಗೋಮಾಳವನ್ನೇ ಅವಲಂಬಿಸಿದ್ದಾರೆ. ಆದರೆ, ಈ ಜಾಗದಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣವಾದರೆ ಸಾಕು ಪ್ರಾಣಿಗಳು ಮತ್ತು ಇದನ್ನೇ ನಂಬಿದ ಬಡಜನರ ಪಾಡೇನು ಎಂದು ಪ್ರಶ್ನಿಸಿದರು.

ಗ್ರಾಮದ ಬಳಿ ಈ ಘಟಕ ನಿರ್ಮಾಣಕ್ಕೆ ತಾವೂ ಅವಕಾಶ ನೀಡುವುದಿಲ್ಲ. ಕಂದಾಯ ಅಧಿಕಾರಿಗಳು ಸರ್ವೆ ಮಾಡುವ ಮೊದಲು ಹಾಗೂ ಸರಕಾರಕ್ಕೆ ಮಾಹಿತಿ ನೀಡುವ ಮುನ್ನ ಗ್ರಾಪಂ ಹಾಗೂ ಗ್ರಾಮಸ್ಥರ ಅನುಮತಿ ಪಡೆದಿಲ್ಲ. ಪುರಸಭೆ ಮತ್ತು ಕಂದಾಯ ಅಧಿಕಾರಿಗಳು ಲೋಪ ಎಸಗಿದ್ದಾರೆ. ಇದರಿಂದ ಗ್ರಾಮದ ಜನರ ಆರೋಗ್ಯ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಸರ್ವೆ ಕಾರ್ಯಕ್ಕೆ ಮುಂದಾಗದಂತೆ ಎಚ್ಚರಿಕೆ ನೀಡಿದರು.

ಈ ವೇಳೆ ಕೆಲ ಮಹಿಳೆಯರು ಮತ್ತು ಯುವಕರು ಕಸ ವಿಲೇವಾರಿ ಘಟಕ ನಿರ್ಮಾಣ ಮಾಡಲು ನಮ್ಮ ವಿರೋಧವಿದೆ. ನಾವು ಸರ್ವೆ ಕಾರ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಸೀಮೆಎಣ್ಣೆ ಕುಡಿದು ಆತ್ಮಹತ್ಯೆಗೆ ಯತ್ನಿಸಿದಾಗ ಪೊಲೀಸರು ಮಧ್ಯಪ್ರವೇಶಿಸಿ ಹೆಚ್ಚಿನ ಅನಾಹುತವಾಗದಂತೆ ತಡೆದರು.

ಗ್ರಾಮಸ್ಥರಿಗೆ ಸಮಸ್ಯೆ ಬಗ್ಗೆ ಮನವಿ ಮಾಡಿದ ತರೀಕೆರೆ ಉಪವಿಭಾಗಾಕಾರಿ ರೂಪಾ, ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಹಾಗೂ ಸ್ವಚ್ಛ ಭಾರತ್‌ ಅಭಿಯಾನದಡಿ ಘನತ್ಯಾಜ್ಯ ವಿಲೇವಾರಿ ಸಂಸ್ಕರಣೆಗಾಗಿ ಘಟಕ ಸ್ಥಾಪಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ಸದ್ಯ ಸರ್ವೆ ಮಾಡಲಷ್ಟೇ ಬಂದಿದ್ದು, ಗ್ರಾಮದ ಜನರಿಗೆ ಘಟಕದ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಇಲ್ಲಿ ಪಟ್ಟಣದ ಹಸಿ ಕಸದ ಸಂಸ್ಕರಣ ಘಟಕ ಸ್ಥಾಪಿಸಿ, ಗೊಬ್ಬರ ಉತ್ಪಾದಿಸುವ ಕೆಲಸ ನಡೆಯಲಿದೆ. ಈ ಘಟಕದ ಸುತ್ತ ಕಾಂಪೌಂಡ್‌ ನಿರ್ಮಾಣವಾಗಲಿದೆ. ಆಗ ಜನರ ಆರೋಗ್ಯದ ಮೇಲೆ ಯಾವ ಕೆಟ್ಟ ಪರಿಣಾಮವೂ ಬೀರಲ್ಲ ಎಂದರು.

ಇಲ್ಲಿ ಯಾವುದೇ ಘನತ್ಯಾಜ್ಯ ವಿಲೆವಾರಿ ಘಟಕವಿಲ್ಲ. ಗ್ರಾಮದ ಆರೋಗ್ಯ ಸಂರಕ್ಷಣೆ ನಮ್ಮ ಮುಂದಿದೆ. ಈ ನಿಟ್ಟಿನಲ್ಲಿ ನಿಮ್ಮ ಗ್ರಾಮದ ಕೆಲ ಮುಖಂಡರನ್ನು ಪರಿಸರ ಅಭಿಯಂತರರೊಂದಿಗೆ ತರೀಕೆರೆ ಮತ್ತು ಚಿಕ್ಕಮಗಳೂರಿನಲ್ಲಿ ಸ್ಥಾಪನೆಯಾಗಿರುವ ಕಸ ವಿಲೇವಾರಿ ಘಟಕಕ್ಕೆ ಕರೆದೊಯ್ದು ವೈಜ್ಞಾನಿಕ ರೀತಿಯ ಕಸ ವಿಲೇವಾರಿ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ಗ್ರಾಮಸ್ಥರಿಗೆ ತಮ್ಮ ಸಮಸ್ಯೆಗಳ ಕುರಿತ ಆಕ್ಷೇಪಕ್ಕೆ ಉತ್ತರಿಸಲು 10ದಿನಗಳ ಕಾಲಾವಕಾಶ ನೀಡಲಾಗಿದೆ. ಘಟಕ ನಿರ್ಮಾಣಕ್ಕೆ ಸೂಕ್ತ ಬೇರೆ ಸ್ಥಳ ಗುರುತಿಸಿಕೊಟ್ಟರೆ ಅದನ್ನು ಪರಿಶೀಲಿಸಲಾಗುವುದು. ಗ್ರಾಮದಲ್ಲಿ ಅಧಿಕಾರಿಗಳ ಸಭೆ ನಡೆಸಿ ಪರಿಹಾರ ದೊರಕಿಸಿಕೊಡಲಾಗುವುದು ಎಂಬ ಭರವಸೆ ನೀಡಿದರು.

ಸರಕಾರದ ಕೆಲಸಕ್ಕೆ ಸರಕಾರವೇ ಜಾಗ ಗುರುತಿಸಿದೆ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಅಧಿಕಾರ ನಿಮಗಿದೆ. ಹಾಗಾಗಿ, ಸರಕಾರಿ ಕೆಲಸಕ್ಕೆ ಅಡ್ಡಿಪಡಿಸದಂತೆ ಗ್ರಾಮಸ್ಥರಿಗೆ ತಿಳಿಸಿದರು.

ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ನಡೆದ ಮಾತುಕತೆ ಮತ್ತು ಮನವೊಲಿಕೆಯ ನಂತರ ಅಧಿಕಾರಿಗಳು ಸರ್ವೆ ಕಾರ್ಯ ಪೂರ್ಣಗೊಳಿಸಿ ತೆರಳಿದರು.

ಈ ವೇಳೆ ಬೀರೂರು ಹೋಬಳಿ ಕಂದಾಯ ಅಧಿಕಾರಿ ಪ್ರಸನ್ನ ಕುಮಾರ್‌, ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ್‌, ವೃತ್ತ ನಿರೀಕ್ಷಕ ಸತ್ಯನಾರಾಯಣ್‌, ಪಿಎಸ್‌ಐಗಳಾದ ರಾಜಶೇಖರ್‌, ರಫೀಕ್‌, ರಾಜಕುಮಾರ್‌, ಆರೋಗ್ಯ ನಿರೀಕ್ಷಕ ಲಕ್ಷ್ಮಣ್‌, ಪರಿಸರ ಅಭಿಯಂತರ ನೂರುದ್ದಿನ್‌, ಅಭಿಯಂತರ ಪ್ರಸನ್ನಕುಮಾರ್‌, ಹುಲ್ಲೇಹಳ್ಳಿ ಗ್ರಾಪಂ ಸದಸ್ಯರಾದ ಕೃಷ್ಣಮೂರ್ತಿ, ಸೋಮಶೇಖರ್‌ ಮತ್ತು ನೂರಾರು ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.